Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

ರಕ್ಷಣಾ ಕಾರ್ಯಚರಣೆಯಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಸಿಬ್ಬಂದಿ, ಎಫ್‌ಐಆರ್ ದಾಖಲಿಸಿದ ಪೊಲೀಸರು

Team Udayavani, Oct 23, 2024, 6:21 PM IST

Babusapaly2

ಬೆಂಗಳೂರು: ನಗರದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದ್ದು, ಶೋಧ ಕಾರ್ಯಾಚರಣೆ ವೇಳೆ 13 ಮಂದಿಯ ರಕ್ಷಿಸಲಾಗಿದೆ.  ಅವಶೇಷಗಳಡಿ ಸಿಲುಕಿದ್ದ ಮೃತದೇಹಗಳ ಸಿಬ್ಬಂದಿ ಹೊರತೆಗೆದಿದ್ದಾರೆ.

ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಮಂದಿಯಲ್ಲಿ ಆರು ಮಂದಿ ಬೆಂಗಳೂರು ಉತ್ತರ ಮತ್ತು ಹೊಸ್ಮಾಟ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳವಾರ ಮಧ್ಯಾಹ್ನ 3:40ರ ಸುಮಾರಿಗೆ ನಗರದಲ್ಲಿ ಸುರಿದ ಭಾರೀ ಮಳೆಯ ನಡುವೆಯೇ ಈ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರಿದ್ದರು ಎನ್ನಲಾಗಿದೆ. ಅವಶೇಷಗಳಡಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಪೊಲೀಸ್ ಮತ್ತು ಅಗ್ನಿಶಾಮಕ ತುರ್ತು ಸೇವಾ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿದ್ದಾರೆ.

ಇಬ್ಬರು ಆರೋಪಿಗಳ ಬಂಧನ
ಇನ್ನು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರು ಆರೋಪಿಗಳ ಬಂಧಿಸಿದ್ದಾರೆ. ಬಂಧಿತರ ಪೈಕಿ ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಕಂಟ್ರಾಕ್ಟರ್ ಸೇರಿದ್ದಾರೆ ಎನ್ನಲಾಗಿದೆ. ಬಿಎನ್‌ಎಸ್, ಬಿಬಿಎಂಪಿ ಆರ್‌ಇಆರ್‌ಎ ನಿಯಮದಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಕಾರ್ಮಿಕ ಮೊಹಮ್ಮದ್ ಹರ್ಷದ್ ನೀಡಿರೋ ದೂರಿನ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಬಂಧಿತರನ್ನು ಕಟ್ಟಡದ ಮಾಲೀಕ ಭುವನ್ ರೆಡ್ಡಿ ಹಾಗೂ ಕಾಂಟ್ರಾಕ್ಟರ್ ಮುನಿಯಪ್ಪ ಎಂದು ಗುರುತಿಸಲಾಗಿದೆ. ಈ ನಿರ್ಮಾಣ ಹಂತದ ಕಟ್ಟಡ ಭುವನ್ ರೆಡ್ಡಿ ಹೆಸರಿನಲ್ಲಿದ್ದು, ಈತ ಪ್ರಕರಣದ ಮೊದಲನೇ ಆರೋಪಿ ಮುನಿರಾಜ ರೆಡ್ಡಿಯ ಮಗ ಎನ್ನಲಾಗಿದೆ. ಆರೋಪಿಗಳ ವಿರುದ್ಧ ಬಿಎನ್‌ಎಸ್ (BNS), ಬಿಬಿಎಂಪಿ  ಆರ್‌ಇಆರ್‌ಎ ಆ್ಯಕ್ಟ್ ಹಾಗೂ  ರೇರಾ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಲಾಗಿದೆ. ಬಿಎನ್ ಎಸ್ 105, 125(ಅ) 125(ಆ), 270,3(5) ಬಿಬಿಎಂಪಿ ಆ್ಯಕ್ಟ್ 326, 327,328 ಅಡಿಯಲ್ಲಿ ಇಬ್ಬರೂ ಆರೋಪಿಗಳ ಬಂಧಿಸಿದ್ದಾರೆ.

ಮಾಲೀಕರ ವಿರುದ್ಧ ಕಠಿನ ಕ್ರಮ:
ಕಟ್ಟಡ ದುರಂತಕ್ಕೆ ಸಂಬಂಧಿಸಿ ಡಿಸಿಎಂ ಡಿ.ಕೆ.ಶಿವಕುಮಾರ್‌  ಮಾತನಾಡಿ ಈ ಕ್ಷಣದ ಮಾಹಿತಿ ಪ್ರಕಾರ  ಕಟ್ಟಡದ ಕುಸಿತದಲ್ಲಿ ಒಟ್ಟು 21 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದ್ದು, ಕಟ್ಟಡದ ಕುಸಿತದ ದಿನ 26 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದರು. ಕಟ್ಟಡದ ಮಾಲೀಕರ ಹಾಗೂ ಇತರರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದರು.

4 ಅಂತಸ್ತಿಗೆ ಮಾತ್ರ ಪರವಾನಗಿ
ಇನ್ನು ಈ ಕಟ್ಟಡಕ್ಕೆ 4 ಅಂತಸ್ತಿಗೆ ಮಾತ್ರ ಅಧಿಕಾರಿಗಳು ಪರವಾನಗಿ ನೀಡಿದ್ದರು. ಆದರೆ ಗುತ್ತಿಗೆದಾರ ಮುನಿಯಪ್ಪ ಏಳು ಮಹಡಿಗಳನ್ನು ನಿರ್ಮಾಣ ಮಾಡಿದ್ದ ಎಂದು ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

India vs Germany Hockey: ಭಾರತಕ್ಕೆ ಅವಳಿ ಸೋಲಿನ ಆಘಾತ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ

Ford Trophy: 103 ಎಸೆತಗಳಲ್ಲಿ ದ್ವಿಶತಕ… ಬೌಸ್‌ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKS-1

Bengaluru Rain: ಮನೆ ಬಾಗಿಲು ಮುರಿದಾದ್ರೂ ಕಾರ್ಯಾಚರಣೆ ಮುಂದುವರಿಸಿ: ಡಿಸಿಎಂ ಶಿವಕುಮಾರ್

8

Bengaluru: ಕೆಲಸದ ಹೆಸರಲ್ಲಿ ವೇಶ್ಯಾವಾಟಿಕೆಗ ಅಪ್ರಾಪ್ತೆಯರ ಕಳ್ಳ ಸಾಗಣೆ

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

Pralhad Joshi: ಕೇಂದ್ರದಿಂದ ಎಂಆರ್‌ಪಿ ದರದಲ್ಲಿ ಆಹಾರ ಧಾನ್ಯ ವಿತರಣೆ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

ಭಾರತ-ನ್ಯೂಜಿಲ್ಯಾಂಡ್‌ ವನಿತಾ ಕ್ರಿಕೆಟ್‌… ವಿಶ್ವಕಪ್‌ ಅಭ್ಯಾಸಕ್ಕೆ ಮಹತ್ವದ ಸರಣಿ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Actor: ದರ್ಶನ್‌ಗೆ ಡಿಸ್ಕ್ ಸಮಸ್ಯೆ: ಚಿಕಿತ್ಸೆ ಅನಿವಾರ್ಯ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

Test Match: ಇನ್ನಿಂಗ್ಸ್‌ ಸೋಲಿನಿಂದ ಪಾರಾದ ಬಾಂಗ್ಲಾ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

BBK11: ಬಿಗ್ ಮನೆಯಲ್ಲಿ ಜೋರಾಯಿತು ರಾಜಕೀಯ:ಪೋಸ್ಟರ್ ಅಂಟಿಸುವ ವಿಚಾರದಲ್ಲಿ ತಾರರಕ್ಕೇರಿದ ಜಗಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.