Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

ಘೋಷಿತ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವುದು ವಿಪರ್ಯಾಸ

ನಾಗೇಂದ್ರ ತ್ರಾಸಿ, Oct 23, 2024, 5:54 PM IST

Canada Analysis: ಕೆನಡಾ ಮತ್ತೊಂದು ಪಾಕಿಸ್ತಾನವಾಗಲಿದೆ? ಖಲಿಸ್ತಾನಿ ಪರ ಟ್ರುಡೋ ಮೋಹ!

ಪಾಕಿಸ್ತಾನ ತನ್ನ ದೇಶದ ಆರ್ಥಿಕ ಭದ್ರತೆ, ಜನರ ಕಾಳಜಿಗಿಂತ ಹೆಚ್ಚಾಗಿ ಪ್ರೀತಿಸಿದ್ದು ಭಯೋತ್ಪಾದಕರನ್ನು. ಅಲ್‌ ಖೈದಾ, ಲಷ್ಕರ್‌ ಇ ತೊಯ್ಬಾದಂತಹ ಉಗ್ರ ಸಂಘಟನೆಗಳನ್ನು ಪಾಕಿಸ್ತಾನ ಬೆಂಬಲ ನೀಡುವ ಮೂಲಕ ಆ ಉಗ್ರರನ್ನು ಭಾರತದ ವಿರುದ್ಧ ಬಳಸಿಕೊಳ್ಳುತ್ತಾ ಬಂದಿದೆ. ಪಾಕಿಸ್ತಾನ ಕೇವಲ ಈ ಭಯೋತ್ಪಾದಕ ಸಂಘಟನೆಗಳಿಗೆ ಆರ್ಥಿಕ ನೆರವು ನೀಡುತ್ತಿಲ್ಲ. ಇದರೊಂದಿಗೆ ತನ್ನ ದೇಶದ ನೆಲವನ್ನು ಉಗ್ರರಿಗೆ ಸ್ವರ್ಗವನ್ನಾಗಿ ಮಾಡಿಕೊಟ್ಟಿದೆ!

ಪಾಕಿಸ್ತಾನದಲ್ಲಿ ಇಂದು ಹಲವಾರು ಭಯೋತ್ಪಾದಕ ಸಂಘಟನೆಗಳು ಸಕ್ರಿಯವಾಗಿವೆ. ಈ ಮೂಲಕ ಪಾಕ್‌ ತನ್ನ ದೇಶದ ಜನರ ಜೀವನವನ್ನು ಅಪಾಯಕ್ಕೆ ಸಿಲುಕಿಸಿದೆ. ಅಷ್ಟೇ ಅಲ್ಲ ಭಾರತದ ವಿರುದ್ಧ ಪ್ರಾಯೋಜಿತ ಭಯೋತ್ಪಾದನೆಯನ್ನು ಮುಂದುವರಿಸಿದೆ.

ಭಯೋತ್ಪಾದಕರನ್ನು ಪೋಷಿಸಿ, ಆಶ್ರಯ ನೀಡುವ ಮೂಲಕ ಪಾಕಿಸ್ತಾನ ಇಂದು ಹೀನಾಯ ಸ್ಥಿತಿಗೆ ತಲುಪಿದೆ. ಇದೀಗ ಕೆನಡಾದ ಪ್ರಸ್ತುತ ನಿಲುವನ್ನು ಗಮನಿಸಿದರೆ ಅದು ಕೂಡಾ ಮತ್ತೊಂದು ಪಾಕಿಸ್ತಾನವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.

ಹೌದು ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೋ ಕೂಡಾ ಚುನಾವಣ ರಾಜಕೀಯದ ಲಾಭಕ್ಕಾಗಿ ಖಲಿಸ್ತಾನಿ ಉಗ್ರರ ಪರ ವಕಾಲತ್ತು ವಹಿಸುವ ಮೂಲಕ ಪಾಕಿಸ್ತಾನದ ರೀತಿಯಲ್ಲಿ ತಪ್ಪು ಮಾಡುತ್ತಿರುವುದಾಗಿ ವಿಶ್ಲೇಷಿಸಲಾಗಿದೆ.

ಕೆನಡಾದಲ್ಲಿ ಟ್ರುಡೋ ಅವರ ಲಿಬರಲ್‌ ಪಕ್ಷ (Liberal Party) ಕೆನಡಾ ಮತದಾರರ ವಿಶ್ವಾಸವನ್ನು ಕಳೆದುಕೊಳ್ಳತೊಡಗಿದೆ. ಈ ಹಿನ್ನೆಲೆಯಲ್ಲಿ ಟ್ರುಡೋ ಕೆನಡಾದಲ್ಲಿರುವ ಅಂದಾಜು 7 ಲಕ್ಷ ಜನಸಂಖ್ಯೆ ಹೊಂದಿರುವ ಸಿಖ್‌ ಸಮುದಾಯವನ್ನು ಒಲೈಕೆ ಮಾಡುವಲ್ಲಿ ಮುತುವರ್ಜಿ ವಹಿಸಿರುವುದಾಗಿ ವಿಶ್ಲೇಷಿಸಲಾಗುತ್ತಿದೆ.

ಖಲಿಸ್ತಾನಿ ಪರ ಕೆನಡಾ ಪ್ರಧಾನಿ, ಭಾರತ ವಿರೋಧಿ!

ಭಾರತ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ಅನ್ನು ಬಳಸಿಕೊಂಡು ಖಲಿಸ್ತಾನಿ ಪರ ಬೆಂಬಲಿಗರನ್ನು ಗುರಿಯಾಗಿಸಿ ಹತ್ಯೆ ನಡೆಸುತ್ತಿದೆ ಎಂದು ಕೆನಡಾ ಸರ್ಕಾರ ಆರೋಪಿಸಿತ್ತು. ಆದರೆ ಭಾರತದ ವಿರುದ್ಧ ಆರೋಪವನ್ನು ಸಾಬೀತುಪಡಿಸುವ ಯಾವುದೇ ಸಾಕ್ಷ್ಯಾಧಾರ ಇಲ್ಲ ಎಂದು ಕೆನಡಾ ಹೇಳುವ ಮೂಲಕ ರಾಜತಾಂತ್ರಿಕ ಸಂಘರ್ಷ ಒಂದು ಹಂತಕ್ಕೆ ಬಂದು ತಲುಪಿದಂತಾಗಿದೆ.

ಕೆನಡಾ ಸರ್ಕಾರದ ಆರೋಪಕ್ಕೆ ಭಾರತದ ವಿದೇಶಾಂಗ ಸಚಿವಾಲಯ ಕಟು ಆಕ್ಷೇಪದ ಪ್ರತಿಕ್ರಿಯೆ ನೀಡಿತ್ತು. ಭಾರತ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ಬಳಸಿಕೊಂಡಿದೆ ಎಂದು ಟ್ರುಡೋ ಸರ್ಕಾರ ಉಲ್ಲೇಖಿಸಿ ಆರೋಪಿಸಿದೆ. ಇದು ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ ನ ಕ್ರಿಮಿ*ನಲ್ಸ್‌ ಮೇಲೆ ಕೆನಡಾ ಎಷ್ಟು ಮೃಧು ಧೋರಣೆ ಹೊಂದಿದೆ ಎಂಬುದನ್ನು ತೋರಿಸುತ್ತದೆ. ಬಿಷ್ಣೋಯಿ ಗ್ಯಾಂಗ್‌ ಸದಸ್ಯರನ್ನು ಗಡಿಪಾರು ಮಾಡುವಂತೆ ಕೋರಿ ಭಾರತ 26 ಮನವಿಯನ್ನು ಕೆನಡಾ ಸರ್ಕಾರಕ್ಕೆ ಸಲ್ಲಿಸಿದೆ. ಆದರೆ ಯಾವುದೇ ನಿರ್ಧಾರ ಈವರೆಗೂ ತೆಗೆದುಕೊಂಡಿಲ್ಲ. ಅಷ್ಟೇ ಅಲ್ಲ ಭಾರತಕ್ಕೆ ಬೇಕಾಗಿದ್ದ 29 ವಾಂಟೆಡ್‌ ಕ್ರಿಮಿನಲ್‌ ಪ್ರಕರಣಗಳ ಬಗ್ಗೆಯೂ ಮನವಿ ಮಾಡಿಕೊಂಡಿದೆ. ಆದರೆ ಕೆನಡಾ ಆ ಬಗ್ಗೆ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲವಾಗಿದೆ.

ಖಲಿಸ್ತಾನಿಗಳ ಪರ ಕೆನಡಾ ಪ್ರೀತಿ!

ಅಚ್ಚರಿಯ ವಿಷಯ ಎಂಬಂತೆ ಖಲಿಸ್ತಾನಿ ಭಯೋತ್ಪಾದಕರಿಗೋಸ್ಕರ ಭಾರತದ ಜತೆಗಿನ ರಾಜತಾಂತ್ರಿಕ ಸಂಬಂಧವನ್ನು ತ್ಯಾಗ ಮಾಡಲು ಕೆನಡಾ ತಯಾರಾಗಿದೆ.! ಖಲಿಸ್ತಾನಿ ಭಯೋತ್ಪಾದಕರು ಕೆನಡಾದಲ್ಲಿ ಭಾರತದ ವಿರುದ್ಧ ಬೃಹತ್‌ ಪ್ರತಿಭಟನೆ ನಡೆಸಿದ್ದರು. ಅಲ್ಲದೇ ದೇಶದಲ್ಲಿರುವ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆಸಲಾಗಿದೆ. ಈ ಹಿಂದೆಯೂ ಅಮೆರಿಕ, ಬ್ರಿಟನ್‌, ಆಸ್ಟ್ರೇಲಿಯಾದಲ್ಲಿ ಹಿಂದೂ ದೇವಾಲಯಗಳ ಮೇಲೆ ದಾಳಿ ನಡೆದಿತ್ತು. ಆದರೆ ಈ ಎಲ್ಲಾ ಸತ್ಯಗಳ ಹೊರತಾಗಿಯೂ ಕೆನಡಾ ಕ್ಷುಲ್ಲಕ ಲಾಭಕ್ಕಾಗಿ ಘೋಷಿತ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವುದು ವಿಪರ್ಯಾಸ ಎಂದು ಭಾರತ ದೂರಿದೆ.

ಜಸ್ಟಿನ್‌ ಟ್ರುಡೋ ವೋಟ್‌ ಬ್ಯಾಂಕ್‌ ರಾಜಕೀಯದ ನಿಲುವಿನಿಂದಾಗಿ ಭಾರತ ಕೂಡಾ ಕೆನಡಾ ರಾಜತಾಂತ್ರಿಕ ಅಧಿಕಾರಿಯನ್ನು ವಜಾಗೊಳಿಸುವ ಮೂಲಕ ತಿರುಗೇಟು ನೀಡಿತ್ತು.

ಜೀ ನ್ಯೂಸ್‌ ಗೆ ಲಭಿಸಿರುವ ಅಂಕಿಅಂಶದ ಪ್ರಕಾರ, 2021ರಲ್ಲಿ ಖಲಿಸ್ತಾನಿ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದ 141 ಮಂದಿ ಕೆನಡಾದ ಆಶ್ರಯ ಕೋರಿದ್ದರು. ಅವರಲ್ಲಿ 36 ಮಂದಿಗೆ ಪ್ರವೇಶ ಕಲ್ಪಿಸಿತ್ತು. 2022ರಲ್ಲಿ ಆ ಸಂಖ್ಯೆ ಏರಿಕೆ ಕಂಡಿದ್ದು, 801 ಮಂದಿ ಖಲಿಸ್ತಾನಿ ಪರ ಬೆಂಬಲಿಗರು ಆಶ್ರಯ ಕೋರಿ ಅರ್ಜಿ ಸಲ್ಲಿಸಿದ್ದು, ಅವರಲ್ಲಿ 428 ಮಂದಿಗೆ ಅನುಮತಿ ನೀಡಿತ್ತು. 2023ರಲ್ಲಿ 613 ಅರ್ಜಿ ಸಲ್ಲಿಕೆಯಾಗಿದ್ದು, ಅವರಲ್ಲಿ 364 ಮಂದಿಗೆ ಅನುಮತಿ ನೀಡಿತ್ತು. 2024ರ ಮಾರ್ಚ್‌ ವರೆಗೆ 119 ಅರ್ಜಿ ಸಲ್ಲಿಕೆಯಾಗಿದ್ದು, ಅವರಲ್ಲಿ 79 ಮಂದಿಗೆ ಕೆನಡಾ ಆಶ್ರಯ ನೀಡಿರುವುದಾಗಿ ವಿವರಿಸಿದೆ.

ಜಸ್ಟಿನ್‌ ಟ್ರುಡೋ ಅವರು ತನ್ನ ದೇಶದಲ್ಲಿನ ಖಲಿಸ್ತಾನಿ ಭಯೋತ್ಪಾದಕರ ರಕ್ಷಣೆ ಬಗ್ಗೆ ಮಾತನಾಡುತ್ತಾರೆ. ಆದರೆ ಕೆನಡಾ ಖಲಿಸ್ತಾನಿ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದೆ. ಇದು ಭಾರತದ ಭದ್ರತೆಗೆ ಅಪಾಯಕಾರಿಯಾಗಿದೆ. ಅಂಕಿ ಅಂಶದ ಮೂಲಕ ಕೆನಡಾ ಪ್ರಧಾನಿಯ ಇಬ್ಬಗೆಯ ನೀತಿ ಬಯಲಾಗಿದೆ ಎಂದು ವರದಿ ವಿವರಿಸಿದೆ.

ಟ್ರುಡೋ ಸೂಕ್ತ ಸಮಯದಲ್ಲಿ ತನ್ನ ನಿಲುವಿನಲ್ಲಿ ಬದಲಾವಣೆ ಹೊಂದಬಹುದು ಎಂದು ಕೆನಡಾ ಮತದಾರರು ವಿಶ್ವಾಸ ಹೊಂದಿರಬಹುದು ಆದರೆ ಇದೇ ಧೋರಣೆ ಮುಂದುವರಿದರೆ ಕೆನಡಾ ಕೂಡಾ ಮತ್ತೊಂದು ಪಾಕಿಸ್ತಾನವಾಗುವುದರಲ್ಲಿ ಯಾವುದೇ ಸಂದೇಶ ಇಲ್ಲ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Wedding Day: ಶಬಾನಾ ಆಜ್ಮಿ ವರಿಸುವಾಗ ಜಾವೇದ್‌ ನಶೆಯಲ್ಲಿದ್ದರು… ಅನ್ನು ಕಪೂರ್‌

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Udupi: ಅ.24-26; ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌ರಿಂದ ಯೋಗಾಭ್ಯಾಸ

Bidar: ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ

Bidar: ಅಂಗಡಿ ಮುಂಗಟ್ಟುಗಳ ಮುಂದೆ ಕನ್ನಡ ನಾಮಫಲಕ: ಆಡಳಿತದಿಂದ ಜಾಗೃತಿ ಜಾಥಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Americaದ ಮೇಲೆ ರಷ್ಯಾ,ಇರಾನ್‌, ಚೀನಾ ಪ್ರತೀಕಾರ?ಅಮೆರಿಕದ ನಿದ್ದೆಗೆಡಿಸಿದ ಗುಪ್ತಚರ ಮಾಹಿತಿ!

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!

ಹೆಜ್ಬುಲ್ಲಾ ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು, ಅಪಾರ ಚಿನ್ನ ಪತ್ತೆ! ಇಸ್ರೇಲ್

Hezbollah ಮುಖ್ಯಸ್ಥ ಅಡಗಿದ್ದ ಬಂಕರ್‌ನೊಳಗೆ 500 ಮಿ. ಡಾಲರ್‌ ನಗದು,ಚಿನ್ನ ಪತ್ತೆ! ಇಸ್ರೇಲ್

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ

5

Mukka: ಈಜಾಡುತ್ತಿದ್ದ ಯುವಕ ಸಮುದ್ರಪಾಲು

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

Terror Attack: ಟರ್ಕಿಯಲ್ಲಿ ಭಯೋತ್ಪಾದಕ ದಾಳಿ… ಮೂವರು ಮೃತ್ಯು, ಹಲವರು ಗಂಭೀರ

accident

Udupi: ದ್ವಿಚಕ್ರ ವಾಹನ ಢಿಕ್ಕಿ; ಮಹಿಳೆಗೆ ಗಾಯ

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಮಂಗಳೂರಿಗೆ ಆಗಮಿಸಿದ ಬಾಬಾ ರಾಮದೇವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.