![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 23, 2024, 9:02 PM IST
ಮಡಂತ್ಯಾರು: ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೈರುಕಟ್ಟೆಯ ಸಮೀಪದ ಖಾಸಗಿ ವ್ಯಕ್ತಿಯೋರ್ವರ ತೋಟದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೈರುಕಟ್ಟೆ ಪೇಟೆಯ ಹಿಂಭಾಗದ ಖಾಸಗಿ ವ್ಯಕ್ತಿಯ ಅಡಿಕೆ ತೋಟದ ಜಮೀನಿನ ಕೆರೆಯಲ್ಲಿ ಆ. 22ರಂದು ಸಂಜೆ ಅಪರಿಚಿತ ಶವ ಕೊಳೆತ ರೀತಿಯಲ್ಲಿ ಪತ್ತೆಯಾಗಿದೆ. ಪಕ್ಕದ ಮನೆಯ ತೋಟದಲ್ಲಿ ಕೆಲಸದಾಳುಗಳು ತೋಟದ ಕಳೆ ತೆಗೆಯುವ ಕೆಲಸವನ್ನು ಮಾಡುತ್ತಿದ್ದಾಗ ಕೆರೆಯಲ್ಲಿ ಮೃತದೇಹ ನೋಡಿದ್ದಾರೆ. ಅನಂತರ ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನ ಸ್ಥಳಕ್ಕೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ನಾಗೇಶ್ ಕದ್ರಿ, ಎಸ್ಐ ಮುರುಳೀಧರ್ ನಾಯ್ಕ ಹಾಗೂ ಸಿಬಂದಿ ಹಾಗೂ ವಿಧಿವಿಜ್ಞಾನ ತಂಡದ ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.