Bengaluru Rain: ಮನೆ ಬಾಗಿಲು ಮುರಿದಾದ್ರೂ ಕಾರ್ಯಾಚರಣೆ ಮುಂದುವರಿಸಿ: ಡಿಸಿಎಂ ಶಿವಕುಮಾರ್

ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ನಲ್ಲಿನ ರಕ್ಷಣಾ ಕಾರ್ಯದ ಮೇಲ್ವಿಚಾರಣೆ ವೇಳೆ ಬಿಬಿಎಂಪಿ ಆಯುಕ್ತ ತುಷಾರ್‌ಗೆ ಸೂಚನೆ

Team Udayavani, Oct 23, 2024, 10:57 PM IST

DKS-1

ಬೆಂಗಳೂರು: ರಾಜಧಾನಿಯಲ್ಲಿ ಧಾರಾಕಾರ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿ ಯಲಹಂಕದ ಕೇಂದ್ರೀಯ ವಿಹಾರ, ಥಣಿಸಂದ್ರ ಮತ್ತು ಸಾಯಿಬಾಬಾ ಲೇಔಟ್​ಗೆ  ಬುಧವಾರ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.K.Shivakumar)  ಭೇಟಿ ನೀಡಿ, ಪರಿಶೀಲಿಸಿ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.

ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ನಲ್ಲಿನ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆಗಾಗಿ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿದ್ದ ವೇಳೆ, ಸುಮಾರು 20 ಮನೆಗಳ ಮಾಲೀಕರು ಒಳಗೆ ಬೀಗ ಹಾಕಿಕೊಂಡು ಸ್ಥಳಾಂತರ ಕಾರ್ಯಾಚರಣೆಗೆ ಸಹಕಾರ ನೀಡಲು ನಿರಾಕರಿಸಿದ್ದಾರೆ. ಈ ವೇಳೆ ಬಾಗಿಲು ಮುರಿದು ಕಾರ್ಯಾಚರಣೆ ಮುಂದುವರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಗೆ ಡಿಸಿಎಂ ಶಿವಕುಮಾರ್‌ ಸೂಚನೆ ನೀಡಿದ್ದಾರೆ.

ಮನೆ ಮಾಲೀಕರ ಆರೋಗ್ಯಕ್ಕೆ ಹಾನಿ: 
ಮಾಧ್ಯಮದವರ ಉದ್ದೇಶಿಸಿ ಮಾತನಾಡಿದ ಅವರು, ಶೇ.95ರಷ್ಟು ಸ್ಥಳಾಂತರ ಕಾರ್ಯ ಪೂರ್ಣಗೊಂಡಿದ್ದು, ಶೇ.5ರಷ್ಟು ಮಾತ್ರ ಬಾಕಿ ಉಳಿದಿದೆ. “603 ಫ್ಲ್ಯಾಟ್‌ಗಳಲ್ಲಿ ಸಾವಿರಾರು ಜನರ ವಸತಿ ಇದೆ. ಅವರಲ್ಲಿ ಹೆಚ್ಚಿನವರು ಕೇಂದ್ರ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಾಗಿದ್ದು ಹೆಚ್ಚಿನವರ ಸ್ಥಳಾಂತರಿಸಲಾಗಿದೆ. “ಅಪಾರ್ಟ್‌ಮೆಂಟ್‌  ಆಡಳಿತದೊಂದಿಗಿನ ಮಾತುಕತೆ ನಂತರ, ತುರ್ತು ಕಾಮಗಾರಿಗಳಿಂದಾಗಿ ಬಿಬಿಎಂಪಿ ಅಪಾರ್ಟ್ಮೆಂಟ್ ನ್ನು ಸ್ವಾಧೀನಪಡಿಸಿಕೊಂಡಿದೆ. ನೀರು, ವಿದ್ಯುತ್ ಮತ್ತು ಆಹಾರವಿಲ್ಲದೇ ಮನೆಗಳಿಗೆ ಬೀಗ ಹಾಕಿಕೊಂಡಿರುವ ಸುಮಾರು 20 ಮಂದಿ ಮನೆ ಮಾಲೀಕರ ಆರೋಗ್ಯಕ್ಕೆ ಹಾನಿಯಾಗುವ ಭೀತಿಯಿಂದ ನಿವಾಸಿಗಳ ಸಂಘ ಮತ್ತು ಪೊಲೀಸರ ನೆರವು ಪಡೆದು ಬಾಗಿಲು ಒಡೆದು ರಕ್ಷಿಸುವಂತೆ ಬಿಬಿಎಂಪಿಗೆ ಆದೇಶ ನೀಡಲಾಗಿದೆ” ಎಂದರು.

ನಿವಾಸಿಗಳು ತಮ್ಮ ಮನೆಗಳ ಬಗ್ಗೆ ಭಾವನಾತ್ಮಕವಾಗಿರಬಹುದು ಮತ್ತು ಆದ್ದರಿಂದ ಹೊರಗೆ ಬರಲು ನಿರಾಕರಿಸಬಹುದು ಆದರೆ ಅವರ ಸುರಕ್ಷತೆಯೂ ಮುಖ್ಯ ಎಂದು ಡಿಸಿಎಂ ಹೇಳಿದರು. ಅವರನ್ನು ಒಂದು ವಾರದವರೆಗೆ ಹತ್ತಿರದ ಹೋಟೆಲ್‌ಗಳಲ್ಲಿ ಇರಿಸಲಾಗುವುದು ಮತ್ತು ಪರಿಸ್ಥಿತಿ ಸಹಜವಾದ ನಂತರ ಅವರನ್ನು ತಮ್ಮ ಮನೆಗಳಿಗೆ ಹಿಂತಿರುಗಲು ಹೇಳಲಾಗುವುದು ಎಂದು ಡಿಸಿಎಂ ಶಿವಕುಮಾರ್‌ ತಿಳಿಸಿದ್ದಾರೆ.

ಎನ್‌ಡಿಎಂಎಫ್‌ನೊಂದಿಗೆ ಮಳೆನೀರು ಚರಂಡಿಗಳ ಸಂಪೂರ್ಣವಾಗಿ ಮರುವಿನ್ಯಾಸಗೊಳಿಸಲು ಕ್ರಮಗಳ ತೆಗೆದುಕೊಳ್ಳಲಾಗುವುದು ಮತ್ತು ವಿಶ್ವಬ್ಯಾಂಕ್‌ನಿಂದ ನೆರವು ಪಡೆಯಲಾಗುವುದು. ಮರುವಿನ್ಯಾಸವನ್ನು ನಗರದಾದ್ಯಂತ ದೊಡ್ಡ ಪ್ರಮಾಣದಲ್ಲಿ ತೆಗೆದುಕೊಳ್ಳಲಾಗುವುದು. ಕೆರೆಗಳ ಪುನಶ್ಚೇತನ ಹಾಗೂ ಒತ್ತುವರಿ ತೆರವು ಮಾಡುತ್ತೇವೆ ಎಂದೂ ಡಿ.ಕೆ ಶಿವಕುಮಾರ್ ಭರವಸೆ ನೀಡಿದ್ದಾರೆ.

ಟಾಪ್ ನ್ಯೂಸ್

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Babusapaly2

Collapse: ನಿರ್ಮಾಣ ಹಂತದ ಕಟ್ಟಡ ಕುಸಿತ; ಮೃತರ ಸಂಖ್ಯೆ 8ಕ್ಕೆ ಏರಿಕೆ, ಮಾಲೀಕ ಬಂಧನ!

8

Bengaluru: ಕೆಲಸದ ಹೆಸರಲ್ಲಿ ವೇಶ್ಯಾವಾಟಿಕೆಗ ಅಪ್ರಾಪ್ತೆಯರ ಕಳ್ಳ ಸಾಗಣೆ

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

BBMP: ಬಿಬಿಎಂಪಿಗೆ ನನ್ನನ್ನೇ ಮೇಯರ್‌ ಮಾಡಿ: ವ್ಯಕ್ತಿಯಿಂದ ಅರ್ಜಿ!

Rain-Kendriya

Cloud Burst: ಬೆಂಗಳೂರಿನ ಯಲಹಂಕದಲ್ಲಿ ದಾಖಲೆಯ ಮಳೆ; 10 ಬಡಾವಣೆ ಜಲಾವೃತ

Under construction building collapses in Bengaluru

Bengaluru: ಕುಸಿದ ನಿರ್ಮಾಣ ಹಂತದ ಕಟ್ಟಡ; ಮೂವರು ಸಾವು, ಹಲವರು ಸಿಲುಕಿರುವ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Suside-Boy

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.