B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್ಗೆ ಇ.ಡಿ. ಅರ್ಜಿ
Team Udayavani, Oct 24, 2024, 12:08 AM IST
ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್ ಮೆಟ್ಟಿಲೇರಿದೆ.
ಈ ಕುರಿತು ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ನಿಗದಿಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಅವರು ಚುನಾವಣೆ ಬಳಕೆಗೆ ಹಣ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಮತ್ತು ಈ ಕುರಿತಂತೆ ಸಾಕಷ್ಟು ಸಾಕ್ಷ್ಯಗಳು ತನಿಖೆಯ ವೇಳೆ ಪತ್ತೆ ಮಾಡಲಾಗಿದೆ.
ಅಂತೆಯೇ, ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 45ರ ಅನುಸಾರ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ. ಹಾಗಾಗಿ, ಪ್ರಕರಣದ ಪ್ರಮುಖ ಆರೋಪಿಯಾದ ಬಿ. ನಾಗೇಂದ್ರ ಅವರಿಗೆ ವಿಚಾರಣ ನ್ಯಾಯಾಲಯ ನೀಡಿರುವ ಜಾಮೀನು ಆದೇಶವನ್ನು ರದ್ದುಪಡಿಸಬೇಕು ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: 6 ಐಎಎಸ್ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ
C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್
By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ
Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್ ಸಿಕ್ಕಿದರೆ ನನಗೆ ಸಿಕ್ಕಂತೆ
CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್
MUST WATCH
ಹೊಸ ಸೇರ್ಪಡೆ
Mangaluru: ಕರ್ಣಾಟಕ ಬ್ಯಾಂಕ್: 336.07 ಕೋ.ರೂ. ನಿವ್ವಳ ಲಾಭ
Coastal: ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೂ ಆದ್ಯತೆ: ಎಂಡಿ ಡಾ.ರಾಜೇಂದ್ರ ಕೆ.ವಿ.
Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ
Putturu: ವಿಶ್ವ ಹಿಂದೂ ಪರಿಷತ್ನಿಂದ ಸಾಮಾಜಿಕ ಸಮರಸದ ಭಾವ: ಗೋಪಾಲ್ ಜಿ
Mangaluru: ಡ್ರಗ್ಸ್ ಪಾರ್ಸೆಲ್ ಕಸ್ಟಮ್ಸ್ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.