India: ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ


Team Udayavani, Oct 24, 2024, 6:30 AM IST

ವಾಯುಮಾಲಿನ್ಯ ನಿಯಂತ್ರಣ ಕಠಿನ ನಿಲುವು ಅನಿವಾರ್ಯ

ದೇಶದಲ್ಲಿ ಚಳಿಗಾಲ ಆರಂಭಗೊಳ್ಳುತ್ತಿದ್ದಂತೆಯೇ ಉತ್ತರ ಭಾರತದಲ್ಲಿ ಅದರಲ್ಲೂ ಮುಖ್ಯವಾಗಿ ದೇಶದ ರಾಜಧಾನಿ ಹೊಸದಿಲ್ಲಿ ಮತ್ತು ಸುತ್ತಮುತ್ತ ಪ್ರದೇಶದಲ್ಲಿ ವಾಯುಮಾಲಿನ್ಯ ಒಂದೇ ಸಮನೆ ಹೆಚ್ಚತೊಡಗಿದೆ. ದಿಲ್ಲಿಯ ಬಹುತೇಕ ಸ್ಥಳಗಳಲ್ಲಿನ ವಾಯು ಗುಣಮಟ್ಟ ತೀರಾ ಕಳಪೆಯಾಗಿದ್ದರೆ ಮತ್ತೊಂದೆರಡು ಕಡೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಈ ತೆರನಾದ ವಾತಾವರಣ ಸಹಜವಾಗಿಯೇ ದಿಲ್ಲಿಯ ನಿವಾಸಿಗರನ್ನು ಆತಂಕಿತರನ್ನಾಗಿಸಿದ್ದು ಮುಂದಿನ ದಿನಗಳಲ್ಲಿ ಪರಿಸ್ಥಿತಿ ಇನ್ನಷ್ಟು ಹದಗೆಡುವ ಎಲ್ಲ ಸಾಧ್ಯತೆಗಳಿವೆ.
ಹೊಸದಿಲ್ಲಿಯಲ್ಲಿ ವಾಯುಮಾಲಿನ್ಯ ಇತ್ತೀಚಿನ ಸಮಸ್ಯೆಯೇನಲ್ಲವಾಗಿದ್ದು, ಜಾಗತಿಕ ವಾಯು ಗುಣಮಟ್ಟ ಸೂಚ್ಯಂಕದಲ್ಲಿ ವಿಶ್ವದ ಬೃಹತ್‌ ನಗರಗಳ ಪಟ್ಟಿಯಲ್ಲಿ ಸದಾ ಮುಂಚೂಣಿಯ ಸ್ಥಾನವನ್ನು ಕಾಯ್ದುಕೊಂಡು ಬಂದಿರುವುದು ರಾಜಧಾನಿಗೆ ಅಂಟಿರುವ ಬಲುದೊಡ್ಡ ಕಳಂಕ.

ಈ ಬಾರಿಯೂ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ­ರುವ ದಿಲ್ಲಿಯ ವಾಯು ಗುಣಮಟ್ಟ ಸೂಚ್ಯಂಕ ತೀರಾ ಕಳಪೆ ಮಟ್ಟದಲ್ಲಿದೆ.
ವಾಯುಮಾಲಿನ್ಯ, ದಿಲ್ಲಿ ಮತ್ತು ಆಸುಪಾಸಿನ ಪ್ರದೇಶಗಳ ವಾರ್ಷಿಕ ಸಮಸ್ಯೆ­ಯಾಗಿ ಮಾರ್ಪಟ್ಟಿದೆ. ವಾಯುಮಾಲಿನ್ಯ ಮಿತಿಮೀರಿದಾಗ ಪಟಾಕಿ ನಿಷೇಧ, ತಮ್ಮ ಹೊಲಗಳಲ್ಲಿ ಕಳೆ ಸುಡದಂತೆ ಹರಿಯಾಣ, ಪಂಜಾಬ್‌ ರೈತರಿಗೆ ಮನವಿ, ಖಾಸಗಿ ವಾಹನಗಳ ಓಡಾಟಕ್ಕೆ ಕೆಲವು ನಿರ್ಬಂಧದಂತಹ ತಾತ್ಕಾಲಿಕ ಪರಿಹಾರ ಕ್ರಮಗಳಿಗೆ ನಗರಾಡಳಿತ ಸಂಸ್ಥೆ ಮತ್ತು ಸರಕಾರ ಮೊರೆ ಹೋಗುತ್ತಲೇ ಬಂದಿವೆ ವಿನಾ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಲು ಮುಂದಾಗದಿರುವುದು ವಿಪರ್ಯಾಸವೇ ಸರಿ.

ಇತ್ತೀಚಿನ ವರ್ಷಗಳಲ್ಲಿ ದೇಶದ ಬಹುತೇಕ ನಗರಗಳಲ್ಲಿಯೂ ವಾಯುಮಾಲಿನ್ಯ ಹೆಚ್ಚುತ್ತಲೇ ಸಾಗಿದೆ. ಕೋಲ್ಕತಾ, ಮುಂಬಯಿ ಆಗಾಗ ವಾಯುಮಾಲಿನ್ಯ ನಗರಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತವೆ. ವಾಯುಮಾಲಿನ್ಯವನ್ನು ನಿಯಂತ್ರಿಸಲು ನಗರಾ ಡಳಿತ ಸಂಸ್ಥೆಗಳು ಮತ್ತು ಸರಕಾರ ಒಂದಿಷ್ಟು ಕಠಿನ ಮತ್ತು ಪರಿಣಾಮಕಾರಿ ಕ್ರಮ ಗಳನ್ನು ಕೈಗೊಳ್ಳಬೇಕಿರುವುದು ಈಗಿನ ತುರ್ತು. ವರ್ಷಗಳುರುಳಿದಂತೆಯೇ ನಗರ ಗಳಲ್ಲಿ ವಾಹನಗಳ ಸಂಖ್ಯೆ ಹೆಚ್ಚುತ್ತಲೇ ಸಾಗಿದ್ದು ಪ್ರತೀ ಮನೆಯಲ್ಲಿ ಕನಿಷ್ಠ 2-3 ವಾಹನಗಳಾದರೂ ಇವೆ. ಇವೆಲ್ಲವೂ ರಸ್ತೆಗಿಳಿದರೆ ನಗರದಲ್ಲಿನ ಸಂಚಾರ ವ್ಯವಸ್ಥೆ ಹೇಗಾಗಬೇಡ. ನಗರ ನಿವಾಸಿಗಳ ಈ ಚಾಳಿಗೆ ಕಡಿವಾಣ ಹಾಕಲು ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಸುವ್ಯವಸ್ಥಿತಗೊಳಿಸಬೇಕು.

ಜನರು ತಮ್ಮ ದೈನಂದಿನ ಕೆಲಸಕಾರ್ಯಗಳಿಗೆ ಸಾರ್ವಜನಿಕ ಸಾರಿಗೆಯನ್ನೇ ಅವಲಂಬಿಸುವುದನ್ನು ಕಡ್ಡಾಯ ಗೊಳಿಸಬೇಕು. ಇನ್ನು ಪೆಟ್ರೋಲ್‌, ಡೀಸೆಲ್‌ ಚಾಲಿತ ವಾಹನಗಳ ಬದಲಾಗಿ ಎಲೆಕ್ಟ್ರಿಕ್‌ ವಾಹನಗಳ ಬಳಕೆಗೆ ಹೆಚ್ಚಿನ ಉತ್ತೇಜನ ನೀಡಬೇಕು. ಇತ್ತೀಚಿನ ವರ್ಷಗಳಲ್ಲಿ ಎಲೆಕ್ಟ್ರಿಕ್‌ ವಾಹನಗಳು ಜನರನ್ನು ಆಕರ್ಷಿಸುವಲ್ಲಿ ಯಶಸ್ವಿಯಾಗಿವೆಯಾದರೂ ಇವು ಗಳ ಕಾರ್ಯದಕ್ಷತೆಯನ್ನು ಹೆಚ್ಚಿಸಲು ಇನ್ನಷ್ಟು ಸಂಶೋಧನೆಗಳು ನಡೆಯ ಬೇಕು. ಈ ಕ್ರಮಗಳಿಂದ ಕೇವಲ ವಾಯುಮಾಲಿನ್ಯ ನಿಯಂತ್ರಣ ಮಾತ್ರವಲ್ಲದೆ ವಾಹನ ದಟ್ಟಣೆ ನಿವಾರಣೆ, ಸಮಯ ಉಳಿತಾಯದ ಜತೆಯಲ್ಲಿ ಇಂಧನ ಉಳಿತಾಯವೂ ಸಾಧ್ಯ.
ಇನ್ನು ನಗರ ವ್ಯಾಪ್ತಿಯಲ್ಲಿರುವ ಎಲ್ಲ ಕೈಗಾರಿಕೆಗಳನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಲು ಸರಕಾರ ಅಗತ್ಯ ಯೋಜನೆ ರೂಪಿಸಬೇಕು. ಇದು ಸಾಧ್ಯವಾದಲ್ಲಿ ವಾಯುಮಾಲಿನ್ಯ ಸಮಸ್ಯೆ ಬಹುತೇಕ ನಿವಾರಣೆಗೊಳ್ಳಲು ಸಾಧ್ಯ. ನಗರದ ಹೊರವಲಯದಲ್ಲಿ ಕೈಗಾರಿಕೆಗಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿಕೊಟ್ಟದ್ದೇ ಆದಲ್ಲಿ ಕೈಗಾರಿಕೋದ್ಯಮಿಗಳು ಕೂಡ ನಗರದ ಹೊರಗಡೆ ತಮ್ಮ ಉದ್ದಿಮೆಗಳನ್ನು ತೆರೆಯಲು ಆಸಕ್ತಿ ತೋರಿಯಾರು.

ಇವೆಲ್ಲವೂ ಒಂದಿಷ್ಟು ತ್ರಾಸದಾಯಕ ಮತ್ತು ವೆಚ್ಚದಾಯಕ ಪರಿಹಾರ ಕ್ರಮಗಳಾದರೂ ಇದರ ಪರಿಣಾಮವನ್ನು ಪರಿಗಣಿಸಿದರೆ ಇವೆಲ್ಲವೂ ತೃಣಮಾತ್ರ ಎಂದೆನಿಸದೇ ಇರಲಾರದು. ಆದರೆ ಎಲ್ಲದಕ್ಕೂ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವ ಧೈರ್ಯ, ಛಾತಿಯನ್ನು ಸರಕಾರ ತೋರಬೇಕು. ಆಗ ಮಾತ್ರ ವಾಯುಮಾ­ಲಿನ್ಯದಂತಹ ಸಮಸ್ಯೆಯಿಂದ ನಗರಗಳ ಜನತೆ ಮುಕ್ತಿ ಹೊಂದಲು ಸಾಧ್ಯ.

ಟಾಪ್ ನ್ಯೂಸ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

Flight: ಹುಸಿ ಬಾಂಬ್‌ ಬೆದರಿಕೆ: ಕಠಿನ ಶಿಕ್ಷೆ ಅಗತ್ಯ

ARMY (2)

Jammu and Kashmir; ಉಗ್ರರ ದಮನದ ಜತೆಯಲ್ಲಿ ನಾಗರಿಕರ ರಕ್ಷಣೆಯೂ ಮುಖ್ಯ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Server Down: ಪಡಿತರ ವಿತರಣ ವ್ಯವಸ್ಥೆಯ ಸಮಸ್ಯೆ ಶೀಘ್ರ ಬಗೆಹರಿಯಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

National Security Guard: ವಿಐಪಿ ಭದ್ರತೆಯಿಂದ ಎನ್‌ಎಸ್‌ಜಿಗೆ ಮುಕ್ತಿ: ಸಮುಚಿತ ನಿರ್ಧಾರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.