Coastal: ಪ್ರವಾಸೋದ್ಯಮ ನೀತಿಯಲ್ಲಿ ಕರಾವಳಿಗೂ ಆದ್ಯತೆ: ಎಂಡಿ ಡಾ.ರಾಜೇಂದ್ರ ಕೆ.ವಿ.

ಪ್ರವಾಸೋದ್ಯಮ ಇಲಾಖೆ, ಪ್ರವಾಸೋದ್ಯಮ ಸೊಸೈಟಿಯಿಂದ "ಕನೆಕ್ಟ್ - 2024' ಕಾರ್ಯಕ್ರಮ

Team Udayavani, Oct 24, 2024, 4:21 AM IST

Tourism-MNG

ಮಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿಯನ್ನು ಪರಿಷ್ಕೃತಗೊಳಿಸಿ ಹೊಸ ಪರಿಕಲ್ಪನೆಗಳೊಂದಿಗೆ ನೂತನವಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದರಲ್ಲಿ ಕರಾವಳಿಯ ಪ್ರವಾಸೋದ್ಯಮಕ್ಕೆ ಸಂಬಂಧಿಸಿಯೂ ಆದ್ಯತೆ ನೀಡುವುದಾಗಿ ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಡಾ| ರಾಜೇಂದ್ರ ಕೆ.ವಿ. ಹೇಳಿದರು.

ಪ್ರವಾಸೋದ್ಯಮ ಇಲಾಖೆ ಮತ್ತು ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ (ಕೆಟಿಎಸ್‌) ವತಿಯಿಂದ ನಗರದಲ್ಲಿ ಬುಧವಾರ ಆಯೋಜಿಸಲಾದ “ಕನೆಕ್ಟ್ – 2024′ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ನಮ್ಮಲ್ಲಿ ಸ್ಥಳೀಯ ಪ್ರವಾಸಿ ಮಾರುಕಟ್ಟೆ ಬಲವಾಗಿದೆ. ಆದರೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಆಕರ್ಷಿ ಸುವಲ್ಲಿ ಹಿಂದುಳಿದಿದ್ದೇವೆ. ಕರಾವಳಿಗೆ ಬರುವ ಪ್ರವಾಸಿಗರನ್ನು ಹೊರ – ರಾಜ್ಯ ಜಿಲ್ಲೆಗಳಿಗೆ ತೆರಳದಂತೆ ತಡೆದು ಇಲ್ಲಿನ ಪ್ರವಾಸಿತಾಣಗಳತ್ತ ಆಕ ರ್ಷಿಸಬೇಕು. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಪರಿಷತ್‌ನಿಂದ ಶ್ರಮಿಸಬೇಕು. ಪ್ರಕೃತಿಗೆ ಹಾನಿಯಾಗದಂತೆ ಎಚ್ಚರ ಅವಶ್ಯ ಎಂದರು. ದ.ಕ.ದಲ್ಲಿ ಉಳ್ಳಾಲದ ಬಟ್ಟಂಪಾಡಿ ಯಿಂದ ಸಸಿಹಿತ್ಲುವರೆಗಿನ ಕಡಲ ತೀರ ವನ್ನು ಮ್ಯಾಪಿಂಗ್‌ ಮಾಡಿ, ವಿವಿಧ ವಲಯಗಳನ್ನಾಗಿ ಮಾಡಿ ಅವುಗಳಿಗೆ ಪೂರಕವಾಗಿ ಪ್ರವಾಸೋದ್ಯಮ ಅಭಿವೃದ್ಧಿಗೆ ಕಾರ್ಯಯೋಜನೆ ರೂಪಿಸಲಾಗುವುದು ಎಂದರು.

ದ.ಕ. ಜಿಲ್ಲಾಧಿಕಾರಿ ಮುಲ್ಲೈ  ಮುಗಿಲನ್‌ ಮಾತನಾಡಿ, ಜಿಲ್ಲೆಗೆ ಬಂದಿಳಿಯುವ ಜನರು ಇಲ್ಲಿಂದ ಕೊಡಗು – ಚಿಕ್ಕಮಗಳೂರು ಎಂದು ತೆರಳುತ್ತಾರೆ. ಇದು ಜಿಲ್ಲೆಯ ಮಟ್ಟಿಗೆ ದೊಡ್ಡ ಹೊಡೆತ ವಾಗಿದ್ದು, ಜಿಲ್ಲೆಯನ್ನೇ ಪ್ರವಾಸಿ ಗಮ್ಯತಾಣವಾಗಿ ಗುರುತಿಸಬೇಕಿದೆ. ಈಗಾಗಲೇ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಪರಿಷತ್‌ ರಚಿಸಲಾಗಿದೆ. ಸಿಆರ್‌ಝೆಡ್‌ಗೆ ಸಂಬಂಧಿಸಿಯೂ ಮಾಸ್ಟರ್‌ಪ್ಲ್ಯಾನ್‌ ರಚಿಸ ಬೇಕಿದೆ. ಕರಾವಳಿ ಕರ್ನಾ ಟಕಕ್ಕೆ ಪ್ರತ್ಯೇಕ ಹೂಡಿಕೆದಾರರ ಸಮಾವೇಶ ಆಯೋಜಿಸಬೇಕು ಎಂದರು.

ಉಡುಪಿ ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮಾತನಾಡಿ, ಉಡುಪಿಗೆ ವರ್ಷದಲ್ಲಿ ಸುಮಾರು 2-3 ಕೋಟಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಜಿಲ್ಲೆಯ ಪ್ರವಾಸಿ ಮ್ಯಾಪ್‌ನಲ್ಲಿ ಇದ್ದ 35 ಸ್ಥಳಗಳ ಸಂಖ್ಯೆಯನ್ನು 85 ಏರಿಸ ಲಾಗಿದೆ. ಜತೆಗೆ ಪ್ರವಾಸಿತಾಣಗಳ ಸಮಗ್ರ ಮಾಹಿತಿಯುಳ್ಳ ಕಾಫಿಟೇಬಲ್‌ ಪುಸ್ತಕ ಸಿದ್ಧವಾಗುತ್ತಿದೆ.

ಸುಸ್ಥಿರ ಅಭಿವೃ ದ್ಧಿಗೆ ಸಂಬಂಧಿಸಿ ಕೇಂದ್ರ ಸರಕಾರದ ಯೋಜನೆಗೆ ಉಡುಪಿ ಆಯ್ಕೆಯಾಗಿದೆ ಎಂದರು. ಕರ್ನಾಟಕ ಪ್ರವಾಸೋದ್ಯಮ ಸೊಸೈಟಿ ಕಾರ್ಯಕಾರಿ ಸದಸ್ಯ ಅಯ್ಯಪ್ಪ ಸೋಮಯ್ಯ, ಜಿ.ಪಂ. ಸಿಇಒ ಡಾ| ಆನಂದ್‌ ಕೆ., ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಾಣಿಕ್ಯ, ದ.ಕ. ಹೊಟೇಲ್‌ ಮಾಲಕರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಉಡುಪಿ ಹೊಟೇಲ್‌ ಮಾಲಕರ ಸಂಘದ ಅಧ್ಯಕ್ಷ ಮನೋಹರ್‌ ಶೆಟ್ಟಿ, ದಕ್ಷಿಣ ಕನ್ನಡ ಟೂರಿಸಂನ ಗೌರವ್‌ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು. ಪಿ.ಸಿ.ರಾವ್‌ ಸ್ವಾಗತಿಸಿ, ಮಂಜುಳಾ ಶೆಟ್ಟಿ ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

ನಾಗಪುರದ ಬಾಂಬ್‌ ಬಜಾರ್‌; ಮೂರೇ ತಿಂಗಳಲ್ಲಿ 900 ಕೋಟಿ ರೂ. ಮೌಲ್ಯದ ಸ್ಫೋಟಕ ಮಾರಾಟ

1-horoscope

Daily Horoscope: ಲಾಭ- ನಷ್ಟ ಎರಡನ್ನೂ ಸಮಾನವಾಗಿ ಸ್ವೀಕರಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

money

Mangaluru: ಸಿಬಿಐ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ 31.12 ಲಕ್ಷ ರೂ. ವಂಚನೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

PM-Xi

Modi Meets Xi: ಗಡಿಯಲ್ಲಿ ಶಾಂತಿ, ಸುವ್ಯವಸ್ಥೆಗಾಗಿ ಭಾರತ-ಚೀನ ಭಾಯಿ, ಭಾಯಿ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

ಇಂದಿನಿಂದ ಪುಣೆ ಟೆಸ್ಟ್‌ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್‌ ಇಂಡಿಯಾ

Dinesh-gundurao

Health Care: ಇಂದು ಗೃಹ ಆರೋಗ್ಯ ಯೋಜನೆಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.