Mangaluru: ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಿಂದ ಮರ ಸಾಗಾಟ: ಪ್ರಕರಣ ದಾಖಲು


Team Udayavani, Oct 24, 2024, 6:30 AM IST

Forest

ಮಂಗಳೂರು: ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರದ ಆವರಣದಲ್ಲಿ ಬೆಲೆಬಾಳುವ ಸಾಗುವಾನಿ, ದೇವದಾರು ಮರಗಳನ್ನು ಕಡಿದು ಸಾಗಿಸಿರುವ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣ ಒಕ್ಕೂಟ(ಎನ್‌ಇಸಿಎಫ್‌) ನೀಡಿದ ದೂರಿನಂತೆ ಅರಣ್ಯ ಇಲಾಖೆ ಪ್ರಕರಣ ದಾಖಲಿಸಿಕೊಂಡಿದೆ.

ನಿರೀಕ್ಷಣ ಮಂದಿರಕ್ಕೆ ಅಪಾಯವಿದೆ ಎಂದು ಹೇಳಿ ಲೋಕೋಪಯೋಗಿ ಇಲಾಖೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ 3 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರ ಕಡಿಯಲು ಅನುಮತಿ ನೀಡಲಾಗಿತ್ತು. ಆದರೆ ಇಲಾಖೆಯ ಅನುಮತಿ ಇಲ್ಲದೆ ದೇವದಾರು ಮರವನ್ನು ಸ್ಥಳದಿಂದ ಸಾಗಿಸಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮರ ಕಡಿಯಲು ಗುತ್ತಿಗೆ ಪಡೆದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್‌ ಲೋಬೋ ತಿಳಿಸಿದ್ದಾರೆ.

ಮರ ಕಡಿಯುತ್ತಿರುವುದು ಎನ್‌ಇಸಿಎಫ್‌ ಸದಸ್ಯರೊಬ್ಬರ ಗಮನಕ್ಕೆ ಬಂದಿದ್ದು, ಮಂಗಳವಾರ ವಾಹನದಲ್ಲಿ ಮರ ಸಾಗಾಟ ಮಾಡುವ ವೇಳೆ ಅರಣ್ಯ ಸಂಚಾರ ದಳಕ್ಕೆ ಮಾಹಿತಿ ನೀಡಿದ್ದಾರೆ. ಮರ ಸಾಗಾಟದ ವಾಹನ ಹೊಯ್ಗೆ ಬಜಾರ್‌ನ ಇಲಾಖಾ ನಾಟ ಸಂಗ್ರಹಾಲಯದಲ್ಲಿರುವುದು ಪತ್ತೆಯಾಗಿದೆ. ವಾಹನವನ್ನು ಪರಿಶೀಲಿ ಸಿದಾಗ ಅದರಲ್ಲಿ ದೇವದಾರು ಜಾತಿಯ ಮರದ ಕಟ್ಟಿಗೆ ಇರುವುದು ಕಂಡು ಬಂದಿದೆ. ಚಾಲಕನಲ್ಲಿ ವಿಚಾರಿಸಿದಾಗ ಮರ ಸಾಗಾಟಕ್ಕೆ ಪರವಾನಿಗೆ ಇಲ್ಲ ಎಂದು ತಿಳಿಸಿದ್ದಾನೆ.

ಬುಧವಾರ ಬೆಳಗ್ಗೆ ಅರಣ್ಯ ಸಂಚಾರಿ ದಳ ಅಧಿಕಾರಿಗಳು ಮಲ್ಲಿಕಟ್ಟೆಯ ಲೋಕೋಪಯೋಗಿ ನಿರೀಕ್ಷಣ ಮಂದಿರಕ್ಕೆ ಭೇಟಿ ನೀಡಿದಾಗ 4 ಸಾಗುವಾನಿ, 1 ಉಪ್ಪಳಿಗೆ, 1 ಕಂಬ ಅಶೋಕ, ಹಾಗೂ 1 ದೇವದಾರು ಮರಗಳನ್ನು ಕಡಿದಿರುವುದು ಕಂಡು ಬಂದಿದೆ. ವಿವಿಧ ಅಳತೆಯ 24 ಸಾಗುವಾನಿ ದಿಮ್ಮಿಗಳನ್ನು ದಾಸ್ತಾನು ಇರಿಸಿರುವುದು ಕಂಡು ಬಂದಿದೆ.

ಹೊಗೆ ಬಜಾರ್‌ನಲ್ಲಿ ಪತ್ತೆಯಾಗಿರುವ ದೇವದಾರು ಮರದ ಕಟ್ಟಿಗೆ ಮಲ್ಲಿಕಟ್ಟೆಯ ನಿರೀಕ್ಷಣ ಮಂದಿರದಿಂದಲೇ ಸಾಗಿಸಿರು ವುದು ತಿಳಿದು ಬಂದಿದೆ. ಮರಗಳನ್ನು ಕಡಿಯಲು ಮಾತ್ರ ಆದೇಶವಾಗಿದ್ದು, ಸಾಗಾಟಕ್ಕೆ ಅನುಮತಿ ಇಲ್ಲ ಎಂದು ಅರಣ್ಯ ಸಂಚಾರ ದಳದ ಅರಣ್ಯಾಧಿಕಾರಿ ತಿಳಿಸಿದ್ದಾರೆ. ಆದೇಶ ಮೀರಿ ಹೆಚ್ಚುವರಿ ಮರ ಕಡಿದಿರುವುದು ದೃಢಪಟ್ಟಲ್ಲಿ ಅದರ ವಿರುದ್ಧವೂ ಪ್ರಕರಣ ದಾಖಲಿಸಲಾಗು ವುದು ಎಂದು ಸಹಾಯಕ ಅರಣ್ಯ ಸಂಕ್ಷರಣಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000ಗ್ರಾಮಗಳು

Cyclone Dana: 10ಲಕ್ಷ ಜನ ಸ್ಥಳಾಂತರ… ಅಪಾಯದ ಭೀತಿಯಲ್ಲಿ ಒಡಿಶಾದ 3,000 ಗ್ರಾಮಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

money

Mangaluru: ಸಿಬಿಐ ಅಧಿಕಾರಿ ಹೆಸರಿನಲ್ಲಿ ಕರೆ ಮಾಡಿ 31.12 ಲಕ್ಷ ರೂ. ವಂಚನೆ

Crackers

Mangaluru: ಪಟಾಕಿ ಮಾರಾಟಕ್ಕೆ ಸ್ಥಳ ನಿಗದಿ; ವಿರೋಧ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

2-bbk11

BBK11: ಬಿಗ್ ಬಾಸ್ ಮನೆಗೆ ಖ್ಯಾತ ಆ್ಯಂಕರ್ ರಾಧಾ ಹಿರೇಗೌಡರ್ ಎಂಟ್ರಿ

1

Udupi; ಜಗತ್ತು ಯೋಗಮಯವಾಗುವ ಆಕಾಂಕ್ಷೆ: ಪ್ರಾಚ್ಯವಿದ್ಯಾ ಸಮ್ಮೇಳನದಲ್ಲಿ ಬಾಬಾ ರಾಮ್‌ದೇವ್‌

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Female CFO: ಭಾರತದ ಪಾಮ್‌ ಕೌರ್‌ಗೆ ಎಚ್‌ಎಸ್‌ಬಿಸಿ ಸಿಎಫ್ಒ ಹುದ್ದೆ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Dandeli: ಭಾರೀ ಮಳೆಗೆ ಮನೆಯ ಮೇಲೆ ಉರುಳಿದ ಬೃಹತ್ ಮರ… ಅಪಾರ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.