INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Team Udayavani, Oct 24, 2024, 1:25 PM IST
ಪುಣೆ: ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ದದ ಎರಡನೇ ಟೆಸ್ಟ್ ಪಂದ್ಯವು ಪುಣೆಯ ಎಂಸಿಎ ಸ್ಟೇಡಿಯಂನಲ್ಲಿ (MCA Stadium Pune) ಆರಂಭವಾಗಿದೆ. ಟಾಸ್ ಗೆದ್ದ ಕಿವೀಸ್ ನಾಯಕ ಟಾಮ್ ಲ್ಯಾಥಂ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಪಂದ್ಯಕ್ಕೆ ಭಾರತವು ಮೂರು ಬದಲಾವಣೆ ಮಾಡಿಕೊಂಡು ಕಣಕ್ಕಿಳಿದಿದೆ. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಆಡಿದ್ದ ಕೆಎಲ್ ರಾಹುಲ್, ಕುಲದೀಪ್ ಯಾದವ್ ಮತ್ತು ಮೊಹಮ್ಮದ್ ಸಿರಾಜ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಮೊದಲ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾರಣದಿಂದ ತಂಡದಲ್ಲಿ ಬದಲಾವಣೆ ನಿರೀಕ್ಷಿಸಲಾಗಿತ್ತು.
ಇಂದಿನ ಪಂದ್ಯಕ್ಕೆ ಶುಭಮನ್ ಗಿಲ್, ವಾಷಿಂಗ್ಟನ್ ಸುಂದರ್ ಮತ್ತು ಆಕಾಶ್ ದೀಪ್ ಅವರನ್ನು ಸೇರ್ಪಡೆಗೊಳಿಸಲಾಗಿದೆ. ಗಿಲ್ ಅವರು ಗಾಯಗೊಂಡಿದ್ದ ಕಾರಣ ಬೆಂಗಳೂರು ಪಂದ್ಯ ತಪ್ಪಿಸಿಕೊಂಡಿದ್ದರು. ಅಲ್ಲಿ ಗಿಲ್ ಬದಲಿಗೆ ಸರ್ಫರಾಜ್ ಖಾನ್ ಅವರಿಗೆ ಅವಕಾಶ ನೀಡಲಾಗಿತ್ತು. ಆದರೆ ಸರ್ಫರಾಜ್ ಭರ್ಜರಿ ಶತಕ ಬಾರಿಸಿದ ಕಾರಣ ಸ್ಥಾನ ಉಳಿಸಿಕೊಂಡಿದ್ದಾರೆ. ಲಯದಲ್ಲಿ ಇರದ ಕೆ ಎಲ್ ರಾಹುಲ್ ಸ್ಥಾನಕ್ಕೆ ಕುತ್ತು ಬಂದಿದೆ.
🚨 Team Update 🚨
3⃣ changes for #TeamIndia in the 2nd Test
A look at our Playing XI 👌👌
Live – https://t.co/YVjSnKCtlI#INDvNZ | @IDFCFIRSTBank pic.twitter.com/O3DFFmNF7r
— BCCI (@BCCI) October 24, 2024
ಪುಣೆ ಪಂದ್ಯ ಗೆದ್ದು ಸರಣಿಯಲ್ಲಿ ಸಮಬಲ ಸಾಧಿಸುವ ಉದ್ದೇಶದಿಂದ ಆಡಲು ಇಳಿದಿರುವ ಟೀಂ ಇಂಡಿಯಾ ಕಠಿಣ ನಿರ್ಧಾರ ಕೈಗೊಂಡಿದೆ. ಮತ್ತೊಂದೆಡೆ ಇತ್ತೀಚಿನ ದಿನಗಳಲ್ಲಿ ನಿರೀಕ್ಷಿತ ಪ್ರದರ್ಶನ ತೋರದ ಮೊಹಮ್ಮದ್ ಸಿರಾಜ್ ಕೂಡಾ ಆಡುವ ಬಳಗದಿಂದ ಹೊರ ಬಿದ್ದಿದ್ದಾರೆ. ಬೌಲಿಂಗ್ ವಿಭಾಗ ಗಟ್ಟಿಗೊಳಿಸುವ ಕಾರಣದಿಂದ ಆಕಾಶ್ ದೀಪ್ ಅವಕಾಶ ಪಡೆದಿದ್ದಾರೆ.
ಈತನ್ಮಧ್ಯೆ, ಕುಲದೀಪ್ ಯಾದವ್ ಪ್ರಮುಖ ಸ್ಪಿನ್ನರ್ ಆಗಿದ್ದರೂ, ರಣಜಿ ಟ್ರೋಫಿಯಲ್ಲಿ ಉತ್ತಮ ಫಾರ್ಮ್ನಲ್ಲಿದ್ದ ವಾಷಿಂಗ್ಟನ್ ಸುಂದರ್ ಅವರನ್ನು ಸರಣಿಯ ಮಧ್ಯೆ ಕರೆಸಿ ತಂಡದಲ್ಲಿ ಅವಕಾಶ ನೀಡಲಾಗಿದೆ. ಡೆಲ್ಲಿ ವಿರುದ್ಧ ಸುಂದರ್ ಅವರು 152 ರನ್ ಗಳಿಸಿ ಆಲ್ ರೌಂಡ್ ಪ್ರದರ್ಶನ ನೀಡಿದ್ದರು. ಬ್ಯಾಟಿಂಗ್ ವಿಭಾಗ ಗಟ್ಟಿಗೊಳಿಸುವ ಕಾರಣದಿಂದ ಕುಲದೀಪ್ ಅವಕಾಶ ವಂಚಿತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
INDvsNZ: ವಾಷಿಂಗ್ಟನ್ ಸ್ಪಿನ್ ಜಾಲಕ್ಕೆ ಸಿಲುಕಿದ ಕಿವೀಸ್; 259 ರನ್ ಗೆ ಆಲೌಟ್
INDWvsNZW: ಕಿವೀಸ್ ವಿರುದ್ದದ ಮೊದಲ ಪಂದ್ಯದಿಂದ ಹರ್ಮನ್ ಪ್ರೀತ್ ಔಟ್
INDvsNZ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ದಾಖಲೆ ಬರೆದ ರವಿ ಅಶ್ವಿನ್
ಇಂದಿನಿಂದ ಪುಣೆ ಟೆಸ್ಟ್ ಪಂದ್ಯ: ಆಯ್ಕೆಯ ಗೊಂದಲದಲ್ಲಿ ಟೀಮ್ ಇಂಡಿಯಾ
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.