Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ


Team Udayavani, Oct 24, 2024, 6:46 PM IST

Udupi: ಪ್ರಾಚ್ಯವಿದ್ಯಾ ಸಮ್ಮೇಳನ ದಕ್ಷಿಣೋತ್ತರದ ಸಂಗಮ: ಪುತ್ತಿಗೆ ಶ್ರೀ

ಉಡುಪಿ: ರಾಮ, ಕೃಷ್ಣ, ವೇದವ್ಯಾಸರಾದಿಯಾಗಿ ಭಗವಂತನ ಬಹುತೇಕ ಎಲ್ಲ ಅವತಾರಗಳು ಉತ್ತರ ಭಾರತದಲ್ಲಿ ನಡೆದರೆ, ಶಂಕರ, ರಾಮಾನುಜ, ಮಧ್ವ ಈ ಆಚಾರ್ಯತ್ರಯರು ದಕ್ಷಿಣದಲ್ಲಿ ಅವತರಿಸಿದರು. ಹೀಗಾಗಿ ಉತ್ತರ ಭಗವಂತನ ಸ್ಥಾನವಾದರೆ, ದಕ್ಷಿಣ ಭಕ್ತರ ಸ್ಥಾನ. ಇದುವರೆಗೆ ಬಹುತೇಕ ಪ್ರಾಚ್ಯವಿದ್ಯಾ ಸಮ್ಮೇಳನವು ಉತ್ತರದಲ್ಲಿ ನಡೆಯುತ್ತಿದ್ದರೆ ಈಗ ದಕ್ಷಿಣೋತ್ತರದ ಸಂಗಮ ಸಮಾವೇಶವಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಅಭಿಪ್ರಾಯಪಟ್ಟರು.

ಬೆಂಗಳೂರಿನ ಭಾರತೀಯ ವಿದ್ವತ್‌ ಪರಿಷತ್‌ (ಬಿವಿಪಿ), ಪರ್ಯಾಯ ಶ್ರೀಪುತ್ತಿಗೆ ಮಠ, ಹೊಸದಿಲ್ಲಿಯ ಕೇಂದ್ರೀಯ ಸಂಸ್ಕೃತ ವಿ.ವಿ. ಸಹಯೋಗದೊಂದಿಗೆ ಗುರುವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಆರಂಭಗೊಂಡ ಮೂರು ದಿನಗಳ ಅಖೀಲ ಭಾರತ ಪ್ರಾಚ್ಯವಿದ್ಯಾ ಸಮ್ಮೇಳನದ (ಜ್ಞಾನದ ಹಬ್ಬ- ಎಐಒಸಿ) ಉದ್ಘಾಟನ ಸಭೆಯಲ್ಲಿ ಆಶೀರ್ವಚನ ನೀಡಿದ ಶ್ರೀಪಾದರು ದಿಲ್ಲಿ ಆಡಳಿತದ ರಾಜಧಾನಿಯಾದರೆ, ಹರಿದ್ವಾರ, ಉಜ್ಜಯಿನಿ, ಕಾಶಿ, ಉಡುಪಿ ಸಾಂಸ್ಕೃತಿಕ ರಾಜಧಾನಿಗಳೆಂದರು.

ಭಾರತದ ಪ್ರಾಚೀನ ವಿದ್ಯೆ ಸನಾತನ ಧರ್ಮದ ರಕ್ಷಣೆ ಜರೂರಾಗಿ ನಡೆಯಬೇಕಾಗಿದೆ. ಸಂಸ್ಕೃತಿಯ ರಕ್ಷಣೆ ನಡೆಯಬೇಕಾದರೆ ಸಂಸ್ಕೃತದ ರಕ್ಷಣೆಯಾಗಬೇಕಾಗಿದೆ. ಗೀತೆಯಲ್ಲಿ ಶ್ರೀಕೃಷ್ಣ ಹೇಳಿದಂತೆ ಅಧ್ಯಾತ್ಮ ವಿದ್ಯೆಯೇ ನಿಜವಾದ ವಿದ್ಯೆಯಾಗಿದೆ. ಪ್ರಾಚೀನ ವಿದ್ಯೆ ರಕ್ಷಣೆಯಾಗಬೇಕಾದರೆ ಪಾತ್ರದ ಸ್ಥಾನದಲ್ಲಿರುವ ಸಂಸ್ಕೃತದ ರಕ್ಷಣೆಯಾಗಬೇಕು. ಎಲ್ಲೆಲ್ಲಿಯೂ ಏಕರೂಪದಲ್ಲಿರುವುದು ಸಂಸ್ಕೃತದ ವೈಶಿಷ್ಟéವಾಗಿದೆ ಎಂದು ಶ್ರೀಪಾದರು ನುಡಿದರು.

ಪೇಜಾವರ ಮಠದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರು, ಭಂಡಾರಕೇರಿ ಮಠದ ಶ್ರೀವಿದ್ಯೆàಶತೀರ್ಥ ಶ್ರೀಪಾದರು, ಪುತ್ತಿಗೆ ಕಿರಿಯ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.

ಹರಿದ್ವಾರ ಪತಂಜಲಿ ಯೋಗಪೀಠದ ಕುಲಪತಿ ಆಚಾರ್ಯ ಬಾಲಕೃಷ್ಣ ಅವರು ಮಾತನಾಡಿ, ಸಂಸ್ಕೃತದೊಂದಿಗೆ ಸಂಸ್ಕೃತಿ ಉಳಿಯಬೇಕಾಗಿದೆ. ಇವೆರಡನ್ನೂ ಜೋಡಿಸಿಕೊಳ್ಳಬೇಕು. ಸಂಸ್ಕೃತ ಭಾಷೆಯನ್ನು ಉಳಿಸಿಕೊಳ್ಳುವ ಮೂಲಕ ಸಾವಿರಾರು ವರ್ಷಗಳ ಶ್ರುತಿ ಪರಂಪರೆಯನ್ನು ರಕ್ಷಿಸಬೇಕಾಗಿದೆ. ಬ್ರಿಟಿಷರು ಹುಟ್ಟು ಹಾಕಿದ ಆರ್ಯದ್ರಾವಿಡ ವಿಭಜನೆಯನ್ನು ಈಜಿಪ್ಟ್, ಮೆಸೆಪೊಟೋಮಿಯ, ಹರಪ್ಪ- ಮೊಹೆಂಜೊದಾರೋ ಸಂಸ್ಕೃತಿ ಅಲ್ಲಗಳೆಯುತ್ತಿದೆ.

ಮೊಹೆಂಜೊದಾರೋದಲ್ಲಿರುವ ಪ್ರಾಚೀನ ನಿವೇಶನಗಳ ಅಧ್ಯಯನವನ್ನು ಪತಂಜಲಿ ಯೋಗ ಪೀಠ ನಡೆಸಲಿದೆ ಎಂದರು.
ಅಧ್ಯಕ್ಷತೆಯನ್ನು ಎಐಒಸಿ ಅಧ್ಯಕ್ಷರಾದ ಪುಣೆಯ ವಿ.ವಿ. ವಿಶ್ರಾಂತ ಸಂಸ್ಕೃತ ಪ್ರಾಧ್ಯಾಪಕಿ ಪ್ರೊ|ಸರೋಜಾ ಭಾಟೆ ವಹಿಸಿದ್ದರು. ಭಾರತೀಯ ಭಾಷಾ ಸಮಿತಿ ಅಧ್ಯಕ್ಷ ಚಮೂ ಕೃಷ್ಣ ಶಾಸ್ತ್ರಿ, ಕರ್ನಾಟಕ ಸಂಸ್ಕೃತ ವಿ.ವಿ. ಕುಲಪತಿ ಪ್ರೊ| ಅಹಲ್ಯಾ, ಬಿವಿಪಿ ಅಧ್ಯಕ್ಷ ಪ್ರೊ| ಕೊರಡ ಸುಬ್ರಹ್ಮಣ್ಯಂ, ಸ್ಥಳೀಯ ಕಾರ್ಯದರ್ಶಿ ಪ್ರೊ| ಶಿವಾನಿ ವಿ., ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, ಮಂಗಳೂರು ಶ್ರೀನಿವಾಸ ವಿ.ವಿ. ಕುಲಾಧಿಪತಿ ಡಾ| ರಾಘವೇಂದ್ರ ರಾವ್‌, ಮಣಿಪಾಲ ಮಾಹೆ ಸಹಕುಲಪತಿ ಡಾ| ನಾರಾಯಣ ಸಭಾಹಿತ್‌ ಮೊದಲಾದವರು ಉಪಸ್ಥಿತರಿದ್ದರು.

ಬಿವಿಪಿ ಟ್ರಸ್ಟ್‌ ಅಧ್ಯಕ್ಷ ಪ್ರೊ| ವೀರನಾರಾಯಣ ಪಾಂಡುರಂಗಿ ಸ್ವಾಗತಿಸಿ, ದಿಲ್ಲಿ ಸಂಸ್ಕೃತ ವಿ.ವಿ. ಕುಲಪತಿ ಡಾ| ಶ್ರೀನಿವಾಸ ವರಖೇಡಿ ಪ್ರಸ್ತಾವನೆಗೈದರು. ಎಐಒಸಿ ಕಾರ್ಯದರ್ಶಿ ಪ್ರೊ|ಕವಿತಾ ಹೋಲೆ ವಂದಿಸಿದರು.

ಮುಂದೆ ವಿಶ್ವ ಸಮ್ಮೇಳನ: ಬಾಬಾ ರಾಮ್‌ದೇವ್‌
ಮುಂದಿನ ದಿನಗಳಲ್ಲಿ ಆಕ್ಸ್‌ಫ‌ರ್ಡ್‌, ಹಾರ್ವರ್ಡ್‌ ವಿದ್ಯಾಲಯದ ಬದಲು ಭಾರತದ ಗುರುಕುಲಗಳಲ್ಲಿ ಪಡೆದಿರುವ ಶಿಕ್ಷಣ ಮಹತ್ವದ ಸ್ಥಾನ ಪಡೆಯುವಂತಾಗಬೇಕು. ಅದಕ್ಕಾಗಿ ವಿರಾಟ್‌ ಪರಿಕಲ್ಪನೆಗಳು ಬೇಕು. ಭವಿಷ್ಯದ ದಿನಗಳು ಸನಾತನ ಧರ್ಮ, ಸಂಸ್ಕೃತದ ದಿನಗಳಾಗಲಿವೆ ಎಂದು ಪ್ರಸಿದ್ಧ ಯೋಗಗುರು ಬಾಬಾರಾಮ್‌ ದೇವ್‌ ವಿಶ್ವಾಸ ವ್ಯಕ್ತಪಡಿಸಿದರು.

ಪ್ರಾಚ್ಯವಿದ್ಯಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸನಾತನ ಮೂಲ, ಋಷಿ ಮೂಲದಿಂದ ಬಂದ ಧರ್ಮ, ಸಂಸ್ಕೃತಿಯನ್ನು ಅದರ ಮಹತ್ವವರಿತು ರಕ್ಷಿಸಬೇಕಾಗಿದೆ. ಭಾರತೀಯ ಸಂಸ್ಕೃತಿ ಕುರಿತು ಕೀಳರಿಮೆ ತಾಳುವ ಅಗತ್ಯವಿಲ್ಲ. ಮುಂದೆ ವಿದೇಶಗಳಿಂದಲೂ ಸಂಸ್ಕೃತ ವಿದ್ವಾಂಸರು ಪಾಲ್ಗೊಳ್ಳುವ ವಿಶ್ವ ಸಮ್ಮೇಳನವನ್ನು ಆಯೋಜಿಸಲು ಪತಂಜಲಿ ಸಂಸ್ಥೆಯು ಸಹಕಾರ ನೀಡಲಿದೆ ಎಂದು ರಾಮ್‌ದೇವ್‌ ಹೇಳಿದರು.

ಮಥುರಾ, ಕಾಶಿಯಂತೆ ಉಡುಪಿಯೂ ಪ್ರಸಿದ್ಧ ತೀರ್ಥ ಕ್ಷೇತ್ರವಾಗಿದೆ. ಮಧ್ವಾಚಾರ್ಯರಿಂದಾಗಿ ಒಂದು ಸಿದ್ಧಾಂತದ ಉಗಮ ಸ್ಥಾನವಾಗಿದೆ. ನಮ್ಮ ಶಿಕ್ಷಣವು ನಾಲ್ಕು ಬಗೆಯ ಚತುರ್ವಿಧ ಪುರುಷಾರ್ಥಗಳನ್ನು ಸಾಧಿಸಬೇಕು. ಪತಂಜಲಿ ಸಂಸ್ಥೆಯು ಮುಂದಿನ ದಿನಗಳಲ್ಲಿ 5 ಲಕ್ಷ ಕೋ.ರೂ.ಗಳ ಪುರುಷಾರ್ಥ ಚತುಷ್ಟಯವನ್ನು ಧರ್ಮ, ದೇಶಕ್ಕಾಗಿ ಸಮರ್ಪಿಸಲಿದೆ ಎಂದರು.

ಟಾಪ್ ನ್ಯೂಸ್

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

Vijayapura: ಸೈಬರ್ ಕ್ರೈಂ; ನೊಂದವರ ಖಾತೆಗೆ 7.48 ಕೋಟಿ ರೂ. ಮರು ಜಮೆ

POlice

Udupi: 30ಕ್ಕೂ ಮೊಬೈಲ್‌ಪೋನ್‌ಗಳು ಮರಳಿ ಮಾಲಕರ ಮಡಿಲಿಗೆ

complaint

Kasaragod: ಸಚಿತಾ ರೈ ವಿರುದ್ಧ ಇನ್ನೆರಡು ಕೇಸು ದಾಖಲು

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.