Hangalur: ಹಾಡಹಗಲೇ ಮನೆಯಿಂದ ಕಳವು
Team Udayavani, Oct 25, 2024, 7:20 AM IST
ಕುಂದಾಪುರ: ಹಾಡಹಗಲೇ ಜನನಿಬಿಡ ಪ್ರದೇಶವಾದ ಹಂಗಳೂರಿನ ಬ್ರಹ್ಮಗುಡಿ ರಸ್ತೆಯಲ್ಲಿನ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ಗುರುವಾರ ನಡೆದಿದೆ.
ಬ್ರಹ್ಮಗುಡಿಯ ಜಗದೀಶ್ ಚಂದ್ರ ನಾಯರ್ ಅವರ ಮನೆಗೆ ಗುರುವಾರ ಮಧ್ಯಾಹ್ನ 2ರಿಂದ 4 ಗಂಟೆಯ ಮಧ್ಯದ ಅವಧಿಯಲ್ಲಿ ನುಗ್ಗಿದ ಕಳ್ಳರು ಮನೆಯೊಳಗಿದ್ದ ಸುಮಾರು 25-30 ಸಾವಿರ ರೂ. ಹಾಗೂ ಚಿನ್ನಾಭರಣಗಳನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ. ಕಳವಾಗಿರುವ ಸೊತ್ತುಗಳ ನಿಖರ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
ಜಗದೀಶ್ ಕುಂದಾಪುರದಲ್ಲಿ ಪ್ರಿಂಟಿಂಗ್ ಪ್ರಸ್ ಕೆಲಸ ಮಾಡಿಕೊಂಡಿದ್ದು, ಪತ್ನಿಯೂ ಅವರ ಜತೆಯಲ್ಲೇ ಇರುತ್ತಾರೆ. ಮಧ್ಯಾಹ್ನ 2 ಗಂಟೆಗೆ ಇಬ್ಬರು ಊಟ ಮಾಡಿ ಮನೆಯಿಂದ ತೆರಳಿದ್ದಾರೆ. ಸಂಜೆ 4 ಗಂಟೆಗೆ ಪುತ್ರಿಯನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಬರುವ ವೇಳೆ ಜಗದೀಶ್ ಅವರಿಗೆ ಮನೆಯ ಹಿಂಬದಿಯ ಬಾಗಿಲು ಒಡೆದು, ಕಳ್ಳತನ ನಡೆಸಿರುವುದು ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಕುಂದಾಪುರ ವೃತ್ತ ನಿರೀಕ್ಷಕ ನಂಜಪ್ಪ, ಎಸ್ಐ ಪುಷ್ಪಾ , ಸಿಬಂದಿ ಭೇಟಿ ನೀಡಿ, ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು
Beejadi-ಗೋಪಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ: ಬೆಳಗದ ದಾರಿದೀಪ, ಸಂಚಾರಕ್ಕೆ ಸಂಚಕಾರ
Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ
Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ
Kundapura: ಕೋಡಿ ಸೀವಾಕ್ ತುದಿ ಮತ್ತಷ್ಟು ಕುಸಿತ
MUST WATCH
ಹೊಸ ಸೇರ್ಪಡೆ
Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು
Beejadi-ಗೋಪಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ: ಬೆಳಗದ ದಾರಿದೀಪ, ಸಂಚಾರಕ್ಕೆ ಸಂಚಕಾರ
Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್: ಅಶೋಕ್ ವಾಗ್ಧಾಳಿ
Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ
Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.