MUDA: ಮೇಲ್ಮನವಿ ಸಲ್ಲಿಸಿದ ಸಿಎಂ: 2ನೇ ಹಂತದ ಕಾನೂನು ಹೋರಾಟ ; ತೀರ್ಪು ತಪ್ಪು ಎಂದು ಅರ್ಜಿ


Team Udayavani, Oct 25, 2024, 12:16 AM IST

MUDA: ಮೇಲ್ಮನವಿ ಸಲ್ಲಿಸಿದ ಸಿಎಂ: 2ನೇ ಹಂತದ ಕಾನೂನು ಹೋರಾಟ ; ತೀರ್ಪು ತಪ್ಪು ಎಂದು ಅರ್ಜಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ತಮ್ಮ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ 2ನೇ ಹಂತದ ಕಾನೂನು ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದು, ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶ ಎತ್ತಿಹಿಡಿದು, ಅದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ಸೆ. 24ರಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ನೀಡಿತ್ತು.ಅದನ್ನು ಪ್ರಶ್ನಿಸಿ ಸಿಎಂ ಮೇಲ್ಮನವಿ ಸಲ್ಲಿಸಿದ್ದಾರೆ.

ಏಕಸದಸ್ಯ ನ್ಯಾಯಪೀಠ ತೀರ್ಪು ಹೊರಬಿದ್ದ 1 ತಿಂಗಳ ಬಳಿಕ ಸಿಎಂ ಮೇಲ್ಮನವಿ ಸಲ್ಲಿಸಿದ್ದಾರೆ. ಈ ಮೇಲ್ಮನವಿಯು ಸಂಬಂಧಿಸಿದ ವಿಭಾಗೀಯ ನ್ಯಾಯಪೀಠದ ಮುಂದೆ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ವಕೀಲ ಶತಾಭಿಷ್‌ ಶಿವಣ್ಣ ಮೂಲಕ ಈ ಮೇಲ್ಮನವಿ ಸಲ್ಲಿಕೆಯಾಗಿದೆ.

ಮೇಲ್ಮನವಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ, ದೂರುದಾರರಾದ ಟಿ.ಜೆ. ಅಬ್ರಾಹಂ, ಸ್ನೇಹಮಯಿಕೃಷ್ಣ ಹಾಗೂ ಎಸ್‌.ಪಿ. ಪ್ರದೀಪ್‌ಕುಮಾರ್‌ ಅವರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ.

ಏಕಸದಸ್ಯ ನ್ಯಾಯಪೀಠವು ರಿಟ್‌ ಪ್ರಕ್ರಿಯೆಯಲ್ಲಿನ ನ್ಯಾಯಾಂಗ ಪರಿಶೀಲನೆಯನ್ನು ಅನುಮತಿಸುವ ಮಿತಿಗಳನ್ನು ಉಲ್ಲಂ ಸಿದೆ ಮತ್ತು ಅರ್ಜಿಯ ವ್ಯಾಪ್ತಿಯನ್ನು ಮೀರಿದ ವಿಚಾರಗಳ ಸಂಶೋಧನೆಯಲ್ಲಿ ತೊಡಗಿದೆ. ಏಕಸದಸ್ಯ ನ್ಯಾಯಪೀಠದ ತೀರ್ಪು ಸಂಪೂರ್ಣವಾಗಿ ತಪ್ಪಾಗಿದೆ ಮತ್ತು ವಿವೇಕದ ಕೊರತೆಯನ್ನು ಎತ್ತಿತೋರಿಸುತ್ತದೆ. ಪ್ರಕರಣದ ಪ್ರಮುಖ, ವಾಸ್ತವ ಅಂಶಗಳನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷಿಸಿ, ಅಪ್ರಸ್ತುತ ಪರಿಗಣನೆಗಳ ಮೇಲೆ ತೀರ್ಪು ಅವಲಂಬಿತವಾಗಿದೆ, ಇದು ಸಮರ್ಥನೀಯವಲ್ಲದ ಮತ್ತು ಕಾನೂನಿನ ತಣ್ತೀಗಳಿಗೆ ವಿರುದ್ಧವಾಗಿದೆ. ಆದ್ದರಿಂದ ಈ ತೀರ್ಪು ರದ್ದುಪಡಿಸಬೇಕು ಎಂದು ಮೇಲ್ಮನವಿಯಲ್ಲಿ ಕೋರ ಲಾಗಿದೆ.

ಸಿದ್ದರಾಮಯ್ಯ ವಿರುದ್ಧದ ತೀರ್ಪಿನಲ್ಲಿ ಏನಿತ್ತು?
ರಾಜ್ಯಪಾಲರ ಆದೇಶದಲ್ಲಿ ಯಾವುದೇ ಕಾನೂನಿನ ಲೋಪಗಳು ಕಾಣುತ್ತಿಲ್ಲ. ರಾಜ್ಯಪಾಲರ ಆದೇಶ ಸಂಪೂರ್ಣವಾದ ವಿವೇಚನೆಯಿಂದ ಕೂಡಿದೆ. ವಾಸ್ತವವಾಗಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್‌ 17ಎ ಅಡಿ ಪೂರ್ವಾನುಮತಿ ಕಡ್ಡಾಯವಾಗಿದೆ. ಆದರೆ, ಖಾಸಗಿ ದೂರುದಾರರ ವಿಚಾರದಲ್ಲಿ ಇದರ ಅಗತ್ಯವಿಲ್ಲ. ಪ್ರಕರಣದಲ್ಲಿ ಪ್ರಾಸ್ತಾಪಿಸಲಾಗಿರುವ ವಾಸ್ತವ ಸಂಗತಿಗಳು ನಿಸ್ಸಂಶಯವಾಗಿ ತನಿಖೆಗೆ ಒಳಪಡಬೇಕಾಗಿದೆ. ಏಕೆಂದರೆ, ಫ‌ಲಾನುಭವಿಗಳು ಯಾರೋ ಹೊರಗಿನವರು ಅಲ್ಲ. ಬದಲಿಗೆ ಅರ್ಜಿದಾರರ (ಮುಖ್ಯಮಂತ್ರಿ) ಪತ್ನಿ ಆಗಿದ್ದಾರೆ. ಆದೇಶವು ಸೆಕ್ಷನ್‌ 17ಎ ಗೆ ಮಾತ್ರ ಸಿಮೀತವಾಗಿದ್ದು, ಬಿಎನ್‌ಎಸ್‌ಎಸ್‌ 218ಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಏಕಸದಸ್ಯ ನ್ಯಾಯಪೀಠ ತನ್ನ ಸೆ. 24ರ ಆದೇಶದಲ್ಲಿ ಹೇಳಿತ್ತು.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.