Forest land: ದಾಖಲೀಕರಣಕ್ಕೆ ಸಮಿತಿ; 6 ತಿಂಗಳಲ್ಲಿ ಸಮಿತಿಯಿಂದ ವರದಿ ಪಡೆಯಲು ತೀರ್ಮಾನ


Team Udayavani, Oct 25, 2024, 12:22 AM IST

Forest land: ದಾಖಲೀಕರಣಕ್ಕೆ ಸಮಿತಿ; 6 ತಿಂಗಳಲ್ಲಿ ಸಮಿತಿಯಿಂದ ವರದಿ ಪಡೆಯಲು ತೀರ್ಮಾನ

ಬೆಂಗಳೂರು: ರಾಜ್ಯದ ಅಧಿಸೂಚಿತ, ದಾಖಲಿತ ಅರಣ್ಯ ಮತ್ತು ಪರಿಭಾವಿತ ಅರಣ್ಯ ಭೂಮಿಗಳ ಸಮಗ್ರ ದಾಖಲೀಕರಣಕ್ಕಾಗಿ 15 ದಿನಗಳಲ್ಲಿ ತಜ್ಞರ ಸಮಿತಿ ರಚಿಸಲು ರಾಜ್ಯ ಸರಕಾರ ನಿರ್ಧರಿಸಿದ್ದು, 6 ತಿಂಗಳಲ್ಲಿ ಸಮಿತಿಯಿಂದ ವರದಿ ಪಡೆಯಲೂ ತೀರ್ಮಾನಿಸಿದೆ.

ಕೆಲವು ಪರಿಭಾವಿತ ಅರಣ್ಯ ಎಂದು ಗುರುತಿಸಿರುವ ಪ್ರದೇಶದಲ್ಲಿ ಅಧಿಸೂಚಿತ ಅರಣ್ಯ, ಪಟ್ಟಾಭೂಮಿ, ಸರಕಾರಿ ಕಚೇರಿ, ಶಾಲೆ-ಕಾಲೇಜುಗಳೂ ಇವೆ. ಹೀಗಾಗಿ ಇದರ ಪರೀಶಿಲನೆ ಆಗಬೇಕು ಎಂಬ ಬೇಡಿಕೆ ಹಿನ್ನೆಲೆಯಲ್ಲಿ ಗುರುವಾರ ವಿಕಾಸಸೌಧದಲ್ಲಿ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಹಿಂದಿನ ಸಮಿತಿಯು ಸಮೀಕ್ಷೆ ನಡೆಸಿ 9,94,881.11 ಹೆಕ್ಟೇರ್‌ ಪ್ರದೇಶವನ್ನು ಪರಿಭಾವಿತ ಅರಣ್ಯ ಎಂದು ಗುರುತಿಸಿತ್ತು. ಆದರೆ, ಇದರಲ್ಲಿ ಲೋಪದೋಷ ಇದ್ದ ಹಿನ್ನೆಲೆಯಲ್ಲಿ ಜಿಲ್ಲಾಮಟ್ಟದ, ಕಂದಾಯ ವಿಭಾಗ ಮತ್ತು ರಾಜ್ಯ ಮಟ್ಟದ ಸಮಿತಿಗಳನ್ನು ನೇಮಿಸಲಾಗಿತ್ತು. ಈ ಸಮಿತಿಯು 3,30,186.93 ಹೆಕ್ಟೇರ್‌ ಪ್ರದೇಶವನ್ನು ಪರಿಭಾವಿತ ಎಂದು ಗುರುತಿಸಿತ್ತು. ಇದೀಗ ರಚಿಸಿರುವ ಹೊಸ ಸಮಿತಿಯಿಂದ ಕ್ರೋಢೀಕೃತ ವರದಿ ಪಡೆಯಲು ನಿರ್ಧರಿಸಲಾಗಿದೆ.

ಕಂದಾಯ-ಅರಣ್ಯ ಜಂಟಿ ಸರ್ವೇ ಪರಿಭಾವಿತ ಅರಣ್ಯಕ್ಕೆ ಸಂಬಂಧಿಸಿದಂತೆ ಎಲ್ಲೆಲ್ಲಿ ಗೊಂದಲ ಇದೆಯೋ ಆ ಜಿಲ್ಲೆಗಳಲ್ಲಿ ಮತ್ತು ಒಂದೇ ಸರ್ವೇ ನಂಬರ್‌ನಲ್ಲಿ ಅರಣ್ಯ ಮತ್ತು ಕಂದಾಯ ಭೂಮಿ ಎರಡೂ ಇರುವ ಭೂಮಿಯ ಜಂಟಿ ಸರ್ವೆ ನಡೆಸಿ ಪರಿಭಾವಿತ ಅರಣ್ಯದ ವಾಸ್ತವ ವರದಿ ಸಲ್ಲಿಸಲು ಸೂಚಿಸುವ ಬಗ್ಗೆ ಚರ್ಚಿಸಲಾಯಿತು.

ರಾಜ್ಯದ 20 ಜಿಲ್ಲೆಗಳಲ್ಲಿ ಸರ್ವೇ ಕಾರ್ಯ ಪ್ರಗತಿಯಲ್ಲಿದೆ. ಅರಣ್ಯ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಒಂದೆರೆಡು ಜಿಲ್ಲೆ ಆಯ್ಕೆ ಮಾಡಿಕೊಂಡು ಜಂಟಿ ಸರ್ವೆ ನಡೆಸಿದಲ್ಲಿ ಸಮಸ್ಯೆಗಳು, ಗೊಂದಲಗಳ ಬಗ್ಗೆ ತಿಳಿಯುತ್ತದೆ. ಇದು ನೂತನ ತಜ್ಞರ ಸಮಿತಿ ವರದಿ ಸಲ್ಲಿಕೆಗೆ ನೆರವಾಗಲಿದೆ. ಎಲ್ಲ ಅಧಿಸೂಚಿತ ಮತ್ತು ಪರಿಭಾವಿತ ಅರಣ್ಯದ ಪಟ್ಟಿಯನ್ನು ನಕ್ಷೆ ಸಮೇತ ಅರಣ್ಯ ಇಲಾಖೆ ನಮಗೆ ನೀಡಿದರೆ, ತಾಳೆ ಮಾಡಿ ಪರಿಶೀಲನೆಗೆ ಅನುಕೂಲವಾಗುತ್ತದೆ.
– ಕೃಷ್ಣ ಬೈರೇಗೌಡ, ಕಂದಾಯ ಸಚಿವ

ಸುಮಾರು 3,30,186.93 ಹೆಕ್ಟೇರ್‌ ಪರಿಭಾವಿತ ಅರಣ್ಯ ಪ್ರದೇಶದಲ್ಲಿ ಸರಕಾರಿ ಕಚೇರಿ, ಶಾಲೆ, ಪಟ್ಟಾಭೂಮಿ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಕೆಯಾಗಿದೆ. ಪುನರ್‌ ಪರಿಶೀಲನೆ ನೇಮಿಸುವ ಸಮಿತಿಯು ಇಂತಹ ಪ್ರದೇಶಕ್ಕೆ ಪರ್ಯಾಯವಾಗಿ ಮರಗಿಡಗಳಿಂದ ಸಮೃದ್ಧವಾದ ಇತರ ಪ್ರದೇಶಗಳನ್ನು ಗುರುತಿಸುವ ಕಾರ್ಯ ಮಾಡಬೇಕು.
– ಈಶ್ವರ್‌ ಖಂಡ್ರೆ, ಅರಣ್ಯ ಸಚಿವ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

1-kashmir

Kashmir; ರಾಜ್ಯ ಸ್ಥಾನಮಾನ ವಾಪಸ್‌ ಮಾಡಿ: ಪ್ರಧಾನಿಗೆ ಒಮರ್‌ ಮನವಿ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

Kaup: ಮಾರಿಯಮ್ಮ ದೇವಿಯ ಸ್ವರ್ಣ ಗದ್ದುಗೆ: ಸ್ವರ್ಣ ಸಮರ್ಪಣೆಗೆ ಅಮಿತೋತ್ಸಾಹ

gold

Kerala; ಆಭರಣ ಘಟಕಕ್ಕೆ ದಾಳಿ: ದಾಖಲೆ ಇಲ್ಲದ 104 ಕೆ.ಜಿ. ಚಿನ್ನ ವಶ!

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ

Udupi: ಅಧಿಕ ಲಾಭಾಂಶದ ಆಮಿಷ: ಲಕ್ಷಾಂತರ ರೂ.ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

Results: 8, 9, 10ನೇ ತರಗತಿಯ ಮಧ್ಯ ವಾರ್ಷಿಕ ಪರೀಕ್ಷೆ ಫ‌ಲಿತಾಂಶಕ್ಕೆ ತಡೆ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

CM Siddaramaiah: ನೀತಿಸಂಹಿತೆ ಬಳಿಕ ಜಾತಿ ಗಣತಿ ತೀರ್ಮಾನ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Siddaramaiah: ಅನಧಿಕೃತ ಕಟ್ಟಡ ಕುಸಿದರೆ ಅಧಿಕಾರಿಗಳೇ ಹೊಣೆ

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

Congress: ಸಿ.ಪಿ. ಯೋಗೇಶ್ವರ್‌ಗೆ ಸಿ.ಟಿ. ರವಿ ಸಹಕಾರವಿದೆ: ಡಿ.ಕೆ.ಸು. ಬಾಂಬ್‌

congress

Maharashtra Election; ಕಾಂಗ್ರೆಸ್‌ 48 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

Udupi: ಗೀತಾರ್ಥ ಚಿಂತನೆ-74: ಕುಲನಾಶದ ಕಳವಳ

1-bjp

Water pollution; ಮಲಿನ ಯಮುನೆಯಲ್ಲಿ ಮಿಂದು ಬಿಜೆಪಿ ದಿಲ್ಲಿ ಘಟಕದ ಅಧ್ಯಕ್ಷ ಪ್ರತಿಭಟನೆ

death

Pimpri Chinchwad; ನೀರಿನ ಟ್ಯಾಂಕ್‌ ಕುಸಿತ: 5 ಕಾರ್ಮಿಕರು ಸಾ*ವು

Terror 2

Pakistan; ಖೈಬರ್‌ ಪ್ರಾಂತದಲ್ಲಿ 9 ಭಯೋತ್ಪಾದಕರ ಹ*ತ್ಯೆ

suicide

Ayodhya: ಹೆಚ್ಚುವರಿ ಡೀಸಿ ಅನುಮಾನಾಸ್ಪದ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.