Kashmir; ರಾಜ್ಯ ಸ್ಥಾನಮಾನ ವಾಪಸ್ ಮಾಡಿ: ಪ್ರಧಾನಿಗೆ ಒಮರ್ ಮನವಿ
Team Udayavani, Oct 25, 2024, 1:53 AM IST
ಹೊಸದಿಲ್ಲಿ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಜತೆಗೆ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಸ್ ನೀಡಬೇಕು ಎಂಬ ಮನವಿಯನ್ನೂ ನೀಡಿದ್ದಾರೆ.
ದಿನಗಳ ಹಿಂದೆ ಶ್ರೀನಗರದಲ್ಲಿ ನಡೆದಿದ್ದ ಸಂಪುಟ ಸಭೆಯಲ್ಲಿ ಈ ಬಗ್ಗೆ ಅವಿರೋಧವಾಗಿ ನಿರ್ಣಯ ಕೈಗೊಳ್ಳಲಾಗಿತ್ತು. 30 ನಿಮಿಷಗಳ ಕಾಲ ನಡೆದ ಮಾತುಕತೆಯಲ್ಲಿ ಕಾಶ್ಮೀರದಲ್ಲಿನ ಇತ್ತೀಚಿನ ಪರಿಸ್ಥಿತಿಗಳ ಬಗ್ಗೆ ಇಬ್ಬರು ನಾಯಕರು ಚರ್ಚಿಸಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ -ಕಾಂಗ್ರೆಸ್ ಮೈತ್ರಿಕೂಟ ಗೆದ್ದು ಅಧಿಕಾರ ವಹಿಸಿದ ಬಳಿಕ ಒಮರ್ ಹೊಸದಿಲ್ಲಿಗೆ ಮೊದಲ ಬಾರಿಗೆ ಭೇಟಿ ನೀಡಿದ್ದಾರೆ. ಅವರು, ಕೇಂದ್ರ ಸಚಿವರಾದ ನಿತಿನ್ ಗಡ್ಕರಿ, ರಾಜನಾಥ್ ಸಿಂಗ್ ಅವರನ್ನೂ ಭೇಟಿಯಾಗಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.