Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ


Team Udayavani, Oct 25, 2024, 11:56 AM IST

13

ಬಸ್ರೂರು: ಇಲ್ಲಿನ ಮಾರ್ಗೋಳಿ ಯಲ್ಲಿರುವ ಸಮಾಜ ಮಂದಿರವೊಂದು ಕಳೆದೆರಡು ದಶಕಗಳಿಂದ ಪಾಳುಬಿದ್ದ ಸ್ಥಿತಿಯಲ್ಲಿದ್ದು, ಶಿಥಿಲಾವಸ್ಥೆಯಲ್ಲಿರುವ ಈ ಕಟ್ಟಡದಲ್ಲಿ ಯಾವುದೇ ಕಾರ್ಯಕ್ರಮಗಳು ನಡೆಯದೇ ನಿಷ್ಪ್ರಯೋಜಕವಾಗಿದೆ. ಇದನ್ನು ದುರಸ್ತಿಪಡಿಸಿ, ಒಂದಷ್ಟು ಅಭಿವೃದ್ಧಿಪಡಿಸಿದರೆ, ಜನೋಪಯೋಗಿಯಾಗಲಿದೆ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.

ಈ ಸಮಾಜ ಮಂದಿರವನ್ನು ಬಸ್ರೂರಿನ ಪ.ಜಾತಿ ಹಾಗೂ ಪ.ಪಂಗಡದ ಜನರ ಕಾರ್ಯ ಚಟುವಟಿಕೆ ಗಳಿಗಾಗಿ ನಿರ್ಮಿಸಲಾಗಿತ್ತು. ಕೆಲವು ವರ್ಷಗಳಿಂದ ಇಲ್ಲಿ ಯಾವುದೇ ಚಟುವಟಿಕೆ ನಡೆಯದೇ ಪ್ರಸ್ತುತ ಪಾಳುಬಿದ್ದಿದೆ. ಇದು ಬಸ್ರೂರು ಗ್ರಾ.ಪಂ. ವ್ಯಾಪ್ತಿಗೆ ಒಳಪಟ್ಟಿದ್ದು, 36 ಸೆಂಟ್ಸ್‌ ವಿಸ್ತೀರ್ಣದಲ್ಲಿದೆ.

ಅಂಬೇಡ್ಕರ್‌ ಭವನ ಮಾಡಿ
ಬಸ್ರೂರು ಗ್ರಾ.ಪಂ.ನಲ್ಲಿ ಅಂಬೇಡ್ಕರ್‌ ಭವನ ಇಲ್ಲದಿರುವ ಹಿನ್ನೆಲೆಯಲ್ಲಿ ಇದನ್ನೇ ದುರಸ್ತಿಯೊಂದಿಗೆ, ಅಭಿವೃದ್ಧಿಪಡಿಸಿ, ಅಂಬೇಡ್ಕರ್‌ ಭವನವನ್ನಾಗಿ ನಿರ್ಮಾಣ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ (ಭೀಮಘರ್ಜನೆ)ಯ ಮಾಜಿ ಸಂಚಾಲಕ ಗೋವಿಂದ ಮಾರ್ಗೋಳಿ ಆಗ್ರಹಿಸಿದ್ದಾರೆ. ಈ ಬಗ್ಗೆ ಈಗಾಗಲೇ ಸಮಿತಿಯ ವತಿಯಿಂದ ಜಿಲ್ಲಾಧಿಕಾರಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹಾಗೂ ಬಸ್ರೂರು ಗ್ರಾ.ಪಂ.ಗೆ ಮನವಿ ಸಲ್ಲಿಸಿದ್ದರೂ ಯಾವುದೇ ಉತ್ತರ ಬಂದಿಲ್ಲ.

ತಾಲೂಕು ಸಮಾಜ ಕಲ್ಯಾಣಾಧಿಕಾರಿ ಒಮ್ಮೆ ಇಲ್ಲಿಗೆ ಭೇಟಿ ನೀಡಿದ್ದು ಬಿಟ್ಟರೆ ಯಾವ ಕಾರ್ಯವೂ ನಡೆದಿಲ್ಲ. 10-15 ವರ್ಷಗಳಿಂದ ಈ ಬಗ್ಗೆ ಮನವಿ ಸಲ್ಲಿಸುತ್ತಿದ್ದಾರಾದರೂ ಏನೂ ಪ್ರಯೋಜನ ವಾಗಿಲ್ಲ. ಈ ಹಿಂದೆ ಶಾಸಕರಿಂದ 1.50 ಲಕ್ಷ ರೂ. ಹಾಗೂ ಗ್ರಾ.ಪಂ.ನಿಂದ 50 ಸಾವಿರ ರೂ. ಹಣ ಮಂಜೂರಾಗಿದ್ದರೂ ಅಭಿವೃದ್ಧಿ ಮಾತ್ರ ಆಗಿಲ್ಲ.

ಮನವಿ ಸಲ್ಲಿಸಲಾಗಿದೆ
ಅಂಬೇಡ್ಕರ್‌ ಭವನವನ್ನಾಗಿ ನಿರ್ಮಿಸಿ ಎಂಬ ಜನರ ಆಶಯಕ್ಕೆ ಅನುಗುಣವಾಗಿ ಸಮಾಜ ಕಲ್ಯಾಣಾಧಿಕಾರಿಗಳಿಗೆ ಮನವಿ ಮಾಡಲಾಗಿದೆ. ಆದರೆ ಈ ಕಟ್ಟಡದ ಒಂದು ಬದಿ ರಾ.ಹೆ.ಗೆ ತಗಲಿದ್ದು, ಸರ್ವೇ ಮಾಡಲಾಗಿದೆ. ಸರ್ವೇ ವರದಿಯನ್ನು ಸಮಾಜ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ ಕ್ರಮ ತೆಗೆದು ಕೊಳ್ಳುತ್ತಾರೆ.
– ಚಂದ್ರ ಬಿಲ್ಲವ, ಪಿಡಿಒ, ಬಸ್ರೂರು ಗ್ರಾ.ಪಂ.

-ದಯಾನಂದ ಬಳ್ಕೂರು 

ಟಾಪ್ ನ್ಯೂಸ್

21-tirupathi

Tour Circle: ತಿರುಮಲನ ದರ್ಶನಕ್ಕೊಂದು ಪ್ರವಾಸ

Canada: ಡಿವೈಡರ್ ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು… ನಾಲ್ವರು ಭಾರತೀಯರು ಮೃತ್ಯು

Road Mishap: ಕೆನಡಾದಲ್ಲಿ ಭೀಕರ ರಸ್ತೆ ಅಪಘಾತ… ನಾಲ್ವರು ಭಾರತೀಯರು ಮೃತ್ಯು

Sapthami Gowda is joins the cast of ‘Halagali’

Sapthami Gowda: ʼಹಲಗಲಿʼಗೆ ಸಪ್ತಮಿ ನಾಯಕಿ; ಡಾಲಿಗೆ ಕಾಂತಾರ ಬೆಡಗಿ ಜೋಡಿ

15-dk

Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ

More MLAs from BJP may come to Congress: Eshwar Khandre

Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ

ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18(1)

Kaup ಪೇಟೆ ಕೊಳಚೆಗೆ ಕೃಷಿ ಭೂಮಿಗಳೇ ಬಲಿ!; 80ಕ್ಕೂ ಅಧಿಕ ಮನೆಗಳಿಗೆ ನಿತ್ಯ ಯಾತನೆ

karkala

Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

Udayavani: “ಚಿಣ್ಣರ ಬಣ್ಣ 2024′ ನಾಳೆ ಆರಂಭ

ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

Padubidri: ಕಂಬಳ ಬಗ್ಗೆ ಅರಿಯದೇ ಪೆಟಾ ವಿವಾದ: ಡಾ| ದೇವಿಪ್ರಸಾದ್‌ ಶೆಟ್ಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

21-tirupathi

Tour Circle: ತಿರುಮಲನ ದರ್ಶನಕ್ಕೊಂದು ಪ್ರವಾಸ

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

19

Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್‌

18

BMTC ಬಸ್‌ ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್‌ ದಾಖಲು

17

Bengaluru: ನಗರದಲ್ಲಿ ಶಂಕಿತ ನಕ್ಸಲ್‌ ಬಂಧನ ಪ್ರಕರಣ: ಎನ್‌ಐಎಗೆ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.