BMTC ಬಸ್ ಕಂಡಕ್ಟರ್ಗೆ ಕಲ್ಲಿನಿಂದ ಹೊಡೆದ ಆರೋಪಿ ಸೆರೆ, ಕೇಸ್ ದಾಖಲು
ಪಾಸ್ ಕಾರಣಕ್ಕಾಗಿ ಬಿಕಾಂ ಪದವೀಧರನಿಂದ ನಿರ್ವಾಹಕನ ಮೇಲೆ ಹಲ್ಲೆ
Team Udayavani, Oct 25, 2024, 3:15 PM IST
ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಕರ್ತವ್ಯನಿರತ ಬಿಎಂಟಿಸಿ ಬಸ್ ನಿರ್ವಾಹಕನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದ ಆರೋಪಿಯನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಾಗರಬಾವಿ ನಿವಾಸಿ ಹೇಮಂತ್ ಬಂಧಿತ. ಬಸ್ ನಿರ್ವಾಹಕ ಸಂಗಪ್ಪ ಚಿತ್ತಲಗಿ ಹಲ್ಲೆಗೊಳಾಗಿದ್ದು, ಈ ಸಂಬಂಧ ಚಾಲಕ ಬಸವರಾಜ್ ನೀಡಿದ ದೂರಿನ ಮೇರೆಗೆ ಹೇಮಂತ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಹೇಮಂತ್ ಬಿಕಾಂ ಪದವೀಧರನಾಗಿದ್ದು, ಮಾರತ್ಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಎಲೆಕ್ಟ್ರಾನಿಕ್ ಸಿಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂಗಪ್ಪ ಅ.18ರ ಟಿನ್ ಫ್ಯಾಕ್ಟರಿ ಬಳಿ ಬಸ್ ನಿಲ್ಲಿಸಿ ಚಾಲಕನೊಂದಿಗೆ ಬಸ್ ನಲ್ಲಿ ಊಟ ಮಾಡುತ್ತಿರುವ ಈ ವೇಳೆ ಏಕಾಏಕಿ ಬಸ್ ಹತ್ತಿದ್ದ ಆರೋಪಿ ಕಲ್ಲಿನಿಂದ ಕಂಡಕ್ಟರ್ ತಲೆಗೆ ಹೊಡೆದು ಪರಾರಿಯಾಗಿದ್ದ.
ಕೂಡಲೇ ಆತನನ್ನು ಹಿಂಬಾಲಿಸಿದ್ದ ನಿರ್ವಾಹಕ ಮತ್ತು ಚಾಲಕ ಹಿಡಿದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಿಚಾರಣೆ ನಡೆಸಿದಾಗ ಕೆಲ ದಿನಗಳ ಹಿಂದೆ ಪಾಸ್ ತೋರಿಸುವ ವಿಚಾರಕ್ಕಾಗಿ ಕಂಡಕ್ಟರ್ ಜತೆ ಮಾತಿನ ಚಕಮಕಿ ನಡೆದಿದ್ದರಿಂದ ಕೋಪಗೊಂಡು ಹಲ್ಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಆರೋಪಿ ತಂದೆಯೂ ಕೂಡ ಬಿಎಂಟಿಸಿ ನಿವೃತ್ತ ಬಸ್ ಕಂಡಕ್ಟರ್ ಆಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ: ತಾಯಿ, ಮಗನ ವಿರುದ್ಧ ಎಫ್ಐಆರ್
Bengaluru: ನಗರದಲ್ಲಿ ಶಂಕಿತ ನಕ್ಸಲ್ ಬಂಧನ ಪ್ರಕರಣ: ಎನ್ಐಎಗೆ ವರ್ಗಾವಣೆ
Bengaluru: ದೀಪಾವಳಿ ಪ್ರಯುಕ್ತ 14 ರೈಲುಗಳಿಗೆ ಹೆಚ್ಚುವರಿ ಬೋಗಿ
Bengaluru: ನಗರದಲ್ಲಿ ಅನಧಿಕೃತ ಕಟ್ಟಡ ಪತ್ತೆಗೆ ಅ.28ರಿಂದ ಸಮೀಕ್ಷೆ : ಡಿಕೆಶಿ
Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್: ಅಶೋಕ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!
By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್
Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.