ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

50000ಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ.

Team Udayavani, Oct 25, 2024, 4:37 PM IST

ಮುಧೋಳ: 36 ಹಳ್ಳಿ ಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

ಉದಯವಾಣಿ ಸಮಾಚಾರ
ಮುಧೋಳ: ನಾಗಾಲೋಟದಲ್ಲಿ ಬೆಳೆಯುತ್ತಿರುವ ಮುಧೋಳ ತಾಲೂಕಿಗೆ ಅವಶ್ಯವಿರುವ ಗ್ರಾಮೀಣ ಪೊಲೀಸ್‌ ಠಾಣೆಯ ನಿರೀಕ್ಷೆ ಇದೀಗ ಮತ್ತಷ್ಟು ಹೆಚ್ಚಾಗಿದೆ. ಅ.21ರಂದು ಬೆಂಗಳೂರಿನಲ್ಲಿ ಪೊಲೀಸ್‌ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ 100 ಹೊಸ ಪೊಲೀಸ್‌ ಠಾಣೆ ಮಂಜೂರು ಮಾಡುವ ಇಂಗಿತ ವ್ಯಕ್ತಪಡಿಸಿರುವ ಬೆನ್ನಲ್ಲೇ ಮುಧೋಳ ಮತಕ್ಷೇತ್ರದ ಶಾಸಕರು, ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಆರ್‌.ಬಿ. ತಿಮ್ಮಾಪುರ ಅವರು ಮುಧೋಳಕ್ಕೆ ಗ್ರಾಮೀಣ ಪೋಲೀಸ್‌ ಠಾಣೆ ಮಂಜೂರು ಮಾಡಿಸಲು ಅವಿರತವಾಗಿ ಶ್ರಮಿಸುತ್ತಿದ್ದಾರೆ.

ಸದ್ಯದ ಪರಿಸ್ಥಿತಿಯಲ್ಲಿ ಮುಧೋಳದಲ್ಲಿ ಒಂದೇ ಪೊಲೀಸ್‌ ಠಾಣೆಯಿರುವುದರಿಂದ ಇಲ್ಲಿನ ಪೊಲೀಸ್‌ ಸಿಬ್ಬಂದಿ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸಬೇಕಿದೆ. ಪ್ರತಿನಿತ್ಯ ಕುಂದುಕೊರತೆ ಹೇಳಿಕೊಂಡು ಠಾಣೆಗೆ ಬರುವ ನೂರಾರು ಜನರನ್ನು ನಿಭಾಯಿಸುವಲ್ಲಿ
ಹೈರಾಣಾಗಿರುವ ಪೊಲೀಸ್‌ ಸಿಬ್ಬಂದಿ ವಿಶ್ರಾಂತಿರಹಿತ ಕೆಲಸ ಮಾಡುವಂತಾಗಿದೆ. ಕ್ಷೇತ್ರದ ಸಮಸ್ಯೆ ಅರಿತಿರುವ ಜಿಲ್ಲಾ ಉಸ್ತುವಾರಿ ಸಚಿವರು ಇದೀಗ ಗ್ರಾಮೀಣ ಪೊಲೀಸ್‌ ಠಾಣೆ ಮಂಜೂರಿಗೆ ಪ್ರಯತ್ನಿಸುತ್ತಿರುವುದು ಶೀಘ್ರವೇ ಸಿಹಿ ಸುದ್ದಿ ದೊರೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾತ್ರಿ ಗಸ್ತಿಗೆ ತೊಂದರೆ: ಮುಧೋಳದಲ್ಲಿ ಗ್ರಾಮೀಣ ಪೊಲೀಸ್‌ ಠಾಣೆ ಇರದ ಕಾರಣ ಕನಿಷ್ಠ 36 ಹಳ್ಳಿಗಳಿಗೆ ಒಂದೇ ಪೊಲೀಸ್‌ ಠಾಣೆಯಿಂದ ಕಾರ್ಯ ನಿರ್ವಹಿಸುವ ಅನಿವಾರ್ಯತೆ ಇದೆ. ಇನ್ನು ನಗರ 31ವಾರ್ಡ್‌ಗಳನ್ನು ಹೊಂದಿದ್ದು, 50000ಕ್ಕೂ ಅಧಿಕ ಜನಸಂಖ್ಯೆ ಹೊಂದಿದೆ. ಇದರಿಂದ ನಗರದಲ್ಲಿ ರಾತ್ರಿ ಗಸ್ತಿಗೆ ಸಿಬ್ಬಂದಿ ನೇಮಿಸುವುದೇ ಇಲ್ಲಿನ ಸಿಬ್ಬಂದಿಗೆ ದೊಡ್ಡ ತಲೆನೋವಾಗಿದೆ. ಗ್ರಾಮೀಣ ಪೊಲೀಸ್‌ ಠಾಣೆ ಮಂಜೂರಾದರೆ ಗಸ್ತು ಪ್ರಮಾಣ ಹೆಚ್ಚಿಸಿ ಕಳ್ಳತನದಂತಹ ಪ್ರಕರಣಗಳನ್ನು ಹತೋಟಿಗೆ ತರಬಹುದು ಎನ್ನುತ್ತಾರೆ ಇಲ್ಲಿನ ಸಿಬ್ಬಂದಿ.

ಬಂದೋಬಸ್ತ್ ಕಿರಿಕಿರಿ: ಮುಧೋಳ ರಾಜ್ಯದಲ್ಲಿಯೇ ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿದೆ. ಇಲ್ಲಿನ ಪ್ರತಿಯೊಂದು ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಬಂದೋಬಸ್ತ್ ಅವಶ್ಯಕತೆಯಿರುತ್ತದೆ. ಗಣೇಶ ಹಬ್ಬ, ಈದ್‌ ಮಿಲಾದ್‌ ಸೇರಿದಂತೆ ಎಲ್ಲ ಧರ್ಮಗಳ ಹಬ್ಬದ ಸಂಭ್ರಮಾಚರಣೆ ವೇಳೆ ಮುಧೋಳ ತಾಲೂಕನ್ನು ಸೂಕ್ಷ್ಮ ಪ್ರದೇಶವೆಂದು ಗುರುತಿಸಲಾಗಿದೆ. ಇಲ್ಲಿನ
ಬಂದೋಬಸ್ತ್ ಗಾಗಿ ರಾಜ್ಯದ ಬೇರೆ ಬೇರೆ ಕಡೆಯಿಂದ ಸಿಬ್ಬಂದಿ ನಿಯೋಜಿಸುವ ಅನಿವಾರ್ಯತೆ ಇದೆ. ಒಂದೇ ಒಂದು ಠಾಣೆಯಿರುವುದರಿಂದ ಬಂದೋ ಬಸ್ತ್‌ ನಂತಹ ಸಂದರ್ಭದಲ್ಲಿ ಇಲ್ಲಿನ ಸಿಬ್ಬಂದಿತೀವ್ರ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಾರೆ.
ಗ್ರಾಮೀಣ ಪೊಲೀಸ್‌ ಠಾಣೆ ನಿರ್ಮಿಸಿದರೆ ಸಿಬ್ಬಂದಿ ಮೇಲಿನ ಒತ್ತಡ ಕಡಿಮೆಗೊಳಿಸಬಹುದು.

ಟ್ರಾಫಿಕ್‌ ಕಿರಿಕಿರಿ: ಮುಧೋಳ ನಗರ ವಾಣಿಜ್ಯೀಕರಣದಿಂದ ಹೆಚ್ಚು ಅಭಿವೃದ್ಧಿ ಹೊಂದಿದೆ. ಸಕ್ಕರೆ, ಸಿಮೆಂಟ್‌, ಸುಣ್ಣ, ಬೆಲ್ಲ ತಯಾರಿಕೆಯಲ್ಲಿ ರಾಜ್ಯದಲ್ಲಿ ಮುಂಚೂಣಿ ಸ್ಥಾನದಲ್ಲಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ನಗರದಲ್ಲಿ ಸಂಚರಿಸುವುದರಿಂದ ಇಲ್ಲಿನ ಪೊಲೀಸ್‌ ಸಿಬ್ಬಂದಿಗೆ ಟ್ರಾಫಿಕ್‌ ನಿವಾರಣೆಯೇ ದೊಡ್ಡ ತಲೆನೋವಾಗಿದೆ. ಇನ್ನು ನವೆಂಬರ್‌ದಿಂದ ಕಬ್ಬು ನುರಿಸುವ ಹಂಗಾಮು ಶುರುವಾದರೆ ಮಿತಿಮೀರಿದ ಟ್ರಾಕ್ಟರ್‌ಗಳ ಓಡಾಟದಿಂದ ನಗರ ಪ್ರತಿನಿತ್ಯ ಜನಜಂಗುಳಿಯಿಂದ ಕೂಡಿರುತ್ತದೆ. ಬಂದೋಬಸ್ತ್, ಗಸ್ತು, ಬೀಟ್‌ ವ್ಯವಸ್ಥೆಯನ್ನು ಸರಿದೂಗಿಸಿಕೊಂಡು ಟ್ರಾಫಿಕ್‌ ಸಮಸ್ಯೆ ನಿವಾರಿಸುವುದು ಪೊಲೀಸ್‌ ಸಿಬ್ಬಂದಿಗೆ ಅಸಾಧ್ಯದ ಕೆಲಸವಾಗಿದೆ. ಗ್ರಾಮೀಣ ಠಾಣೆ ಮಂಜೂರಾದರೆ ಸಿಬ್ಬಂದಿ ಹೆಚ್ಚಳದಿಂದ ಟ್ರಾಫಿಕ್‌ ಕಿರಿಕಿರಿಯನ್ನು ಸರಾಗವಾಗಿ ನಿಭಾಯಿಸಬಹುದು. ಇದರಿಂದ ರಸ್ತೆ ಅಪಘಾತಗಳನ್ನು ನಿಯಂತ್ರಣಕ್ಕೆ ತರಲು ಸಾಧ್ಯವಾಗುತ್ತದೆ ಎನ್ನುತ್ತಾರೆ ಇಲ್ಲಿನ ಸಿಬ್ಬಂದಿ.

ಮನೆಮಠ ಮರೆತು ಕೆಲಸ ನಿರ್ವಹಿಸುವ ಅನಿವಾರ್ಯತೆ:
ರಾಜಕೀಯವಾಗಿ, ಧಾರ್ಮಿಕವಾಗಿ ಸೂಕ್ಷ್ಮ ಪ್ರದೇಶವೆಂದು ಗುರುತಿಸಿಕೊಂಡಿರುವ ಮುಧೋಳ ತಾಲೂಕಿನ ಜನರು ನೆಮ್ಮದಿ ಜೀವನ ನಡೆಸುತ್ತಿರುವುದರ ಹಿಂದೆ ಇಲ್ಲಿನ ಪೊಲೀಸ್‌ ಸಿಬ್ಬಂದಿಯ ಅವಿರತ ಶ್ರಮ ಅಡಗಿದೆ. ಪ್ರತಿಯೊಂದು ಕಾರ್ಯಕ್ರಮದಲ್ಲೂ ನಗರವನ್ನು ಹದ್ದಿನ ಕಣ್ಣಿನಿಂದ ಅವಲೋಕಿಸುವ ಇಲ್ಲಿನ ಸಿಬ್ಬಂದಿ ಹಬ್ಬ ಹರಿದಿನದಂತಹ ಸಂದರ್ಭದಲ್ಲಿ ರಜೆ, ಮನೆ-ಮಠ ಮರೆತು ಕಾರ್ಯ ನಿರ್ವಹಿಸುತ್ತಾರೆ. ಅದಕ್ಕೆ ಉತ್ತಮ ಉದಾಹರಣೆಯೆಂದರೆ ಇತ್ತೀಚಿನ ಗಣೇಶ ಹಬ್ಬ. ಹಬ್ಬದ ವೇಳೆ ನಡೆಯುತ್ತಿದ್ದ ಪ್ರತಿಯೊಂದು ಘಟನೆಗಳ ಮೇಲೂ ನಿಗಾ ವಹಿಸಿದ್ದ ಪೊಲೀಸ್‌ ಇಲಾಖೆ ಹಬ್ಬವನ್ನು ಶಾಂತವಾಗಿ ಸಮಾರೋಪಗೊಳ್ಳುವಂತೆ ಮಾಡಿ ರಾಜ್ಯಕ್ಕೆ ಮುಧೋಳ ಪೊಲೀಸ್‌ ಠಾಣೆ ಸಿಬ್ಬಂದಿ ಮಾದರಿಯಾಗಿದ್ದಾರೆ.

ಒಟ್ಟಿನಲ್ಲಿ ಮುಧೋಳದ ಪೊಲೀಸರ ಒತ್ತಡ ಕಡಿಮೆಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮೀಣ ಠಾಣೆ ಮಂಜೂರು ಮಾಡುವಲ್ಲಿ ಯಶಸ್ವಿಯಾದರೆ ತಾಲೂಕಿನ ಜನರಿಗೆ ಹೆಚ್ಚು ಹಾಗೂ ಪರಿಣಾಮಕಾರಿಯಾಗಿ ಸೇವೆ ಒದಗಿಸಬಹುದು ಎಂಬ ಇಂಗಿತ ವ್ಯಕ್ತಪಡಿಸುತ್ತಾರೆ ಇಲ್ಲಿನ ಸಿಬ್ಬಂದಿ.

ಮುಧೋಳ ತಾಲೂಕಿಗೆ ಗ್ರಾಮೀಣ ಪೊಲೀಸ್‌ ಠಾಣೆ ಅವಶ್ಯಕತೆ ಕುರಿತು ಈಗಾಗಲೇ ಸರ್ಕಾರದ ಮಟ್ಟದಲ್ಲಿ ಚರ್ಚಿಸಲಾಗಿದೆ. ಈ ನಿಟ್ಟಿನಲ್ಲಿ ನಾನು ನಿರಂತರ ಪ್ರಯತ್ನದಲ್ಲಿದ್ದು, ಶೀಘ್ರವೇ ತಾಲೂಕಿನ ಜನತೆಗೆ ಸಿಹಿ ಸುದ್ದಿ ದೊರೆಯುವ ವಿಶ್ವಾಸವಿದೆ.
●ಆರ್‌.ಬಿ.ತಿಮ್ಮಾಪುರ,
ಜಿಲ್ಲಾ ಉಸ್ತುವಾರಿ ಸಚಿವರು.

*ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

14-rabakavi-1

Rabkavi Banhatti: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.