ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ದಿನದಿಂದ ದಿನಕ್ಕೆ ಯುವಕರು ನೇಕಾರಿಕೆಯತ್ತ ಸಾಗುವಲ್ಲಿ ಹಿಂದೇಟು

Team Udayavani, Oct 25, 2024, 6:14 PM IST

ರಬಕವಿ-ಬನಹಟ್ಟಿ: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಉದಯವಾಣಿ ಸಮಾಚಾರ
ರಬಕವಿ-ಬನಹಟ್ಟಿ: ಕಳೆದೆರಡು ಶತಮಾನಗಳ ಇತಿಹಾಸ ಹೊಂದಿರುವ ರಬಕವಿ-ಬನಹಟ್ಟಿ ಪಟ್ಟಣಗಳಲ್ಲಿ ಇದೀಗ ಜವಳಿ ಉದ್ಯಮ ಅಳಿವಿನಂಚಿನಲ್ಲಿದೆ. ಒಂದೆಡೆ ಮಾರುಕಟ್ಟೆ ನೆಲೆ ಸಿಗದೆ ವ್ಯಾಪಾರ ಹೀನಾಯ ಸ್ಥಿತಿಯಲ್ಲಿದ್ದರೆ, ಮತ್ತೂಂದೆಡೆ ನವೀಕರಣಗೊಳ್ಳದ ಕಾರಣ ಅದೇ ಹಳೆ ಕಾಲದ ಮಗ್ಗಗಳಿಂದಲೇ ಸೀರೆ ಉತ್ಪಾದನೆ ದೊಡ್ಡ ಸವಾಲಾಗಿದೆ.

ಕೈಮಗ್ಗ ನಂತರ ಅಟೋಮೆಟಿಕ್‌ ನಂತರ ಪಾವರ್‌ಲೂಮ್‌ಗೆ ಪರಿವರ್ತನೆ ಹೊಂದಿದ್ದ ನೇಕಾರರು ಕಳೆದ 50 ವರ್ಷಗಳಿಂದ ಕಿಂಚಿತ್‌ ಬದಲಾವಣೆಯಾಗದೆ ಅದೇ ಹಳೆಯ ಮಗ್ಗಗಳನ್ನೇ ಅವಲಂಬಿಸಿದ್ದರಿಂದ ಹೊಸ ನೈಪುಣ್ಯತೆ, ವಿನ್ಯಾಸದೊಂದಿಗೆ ಬದಲಾವಣೆ ಆಗದಿರುವುದೇ ಜವಳಿ ಹಿನ್ನೆ‌ಡೆಗೆ ಪ್ರಮುಖ ಕಾರಣ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ರಬಕವಿ-ಬನಹಟ್ಟಿ ತಾಲೂಕಿಗೆ ಪೂರಕ ಮೂಲಸೌಕರ್ಯ ಒದಗಿಸುವಲ್ಲಿ
ವಿಫಲಗೊಂಡಿವೆ. ಪ್ರಮುಖವಾಗಿ ಸೈಜಿಂಗ್‌, ವಾರ್ಪಿಂಗ್‌, ಕೋನ್‌ ಡೈಯಿಂಗ್‌, ನೂಲು ಅದಷ್ಟೇ ಅಲ್ಲದೆ ಜವಳಿ ಪಾರ್ಕ್‌ ಕೂಡ
ಸ್ಥಾಪನೆಗೊಂಡಿಲ್ಲ. ಈಗಾಗಲೇ ಅನುಭವ ಹೊಂದಿರುವ ನೇಕಾರ ಮಾಲಿಕರು ಅನ್ಯ ಉದ್ಯೋಗಗಳತ್ತ ವಾಲಿದ್ದಾರೆ. ಜವಳಿ ಕ್ಷೇತ್ರದಿಂದ ದೂರವಾಗುವಲ್ಲಿ ಕಾರಣವಾಗಿದ್ದರೆ, ಮತ್ತೂಂದೆಡೆ ದಿನದಿಂದ ದಿನಕ್ಕೆ ಯುವಕರು ನೇಕಾರಿಕೆಯತ್ತ ಸಾಗುವಲ್ಲಿ ಹಿಂದೇಟು ಹಾಕುತ್ತಿದ್ದಾರೆ.

ಹೈಟೆಕ್‌ ಮಗ್ಗಗಳು ಮೂಲೆಗುಂಪು: ಹೊಸ ವಿನ್ಯಾಸ, ತಾಂತ್ರಿಕತೆಯೊಂದಿಗೆ ರ್ಯಾಪಿಯರ್‌, ಕಂಪ್ಯೂಟರ್‌ ಜಕಾರ್ಡ್‌ ಸೇರಿದಂತೆ ಅನೇಕ ಮಗ್ಗಗಳು ಈಗಷ್ಟೇ ಅವಳಿ ನಗರದತ್ತ ದಾಪುಗಾಲು ಹಾಕಿವೆ. ಇವುಗಳ ನಿರ್ವಹಣೆ ದೊಡ್ಡ ಸವಾಲಾಗಿದ್ದು, ನೇಯ್ಗೆಯ ನೈಪುಣ್ಯತೆ ಹೊಂದಿರದ ಕಾರಣ ಮಾಲಿಕರು ಆರ್ಥಿಕ ಸಂಕಷ್ಟ ಎದುರಿಸುವುದರ ಜತೆಗೆ ಮಗ್ಗಗಳು ಧೂಳು ತಿನ್ನುತ್ತಿವೆ.

ಬೆರಳಣಿಕೆಯಷ್ಟು ಮಾಲಿಕರು ಮಾತ್ರ ಮಗ್ಗಗಳನ್ನು ಖರೀದಿಸಿದ್ದರಿಂದ ಇವರ ಹಾನಿ ಅನುಭವಿಸಿದ್ದರಿಂದ ಇತರೆ ಮಾಲಿಕರು
ಮಗ್ಗಗಳ ಖರೀದಿಗೆ ಹಿಂದೇಟು ಹಾಕುವಂತಾಗಿದೆ. ಸೀರೆ ಉತ್ಪಾದನೆಯಾಗಬೇಕಾದರೆ ಸುಮಾರು ಐದಾರು ವಿಭಾಗಗಳ ಘಟಕಗಳು ಅವಶ್ಯವಿದ್ದವು. ಪ್ರಮುಖವಾಗಿ ವಾರ್ಪಿಂಗ್‌, ಸೈಜಿಂಗ್‌, ನೂಲು ಸುತ್ತುವಿಕೆ ಸೇರಿದಂತೆ ಅನೇಕವಿದ್ದವು. ಇದೀಗ ಸೀರೆ ನೇಯ್ಗೆಗೆ ಮಾರುಕಟ್ಟೆಯಲ್ಲಿ ತಯಾರಿ ನೂಲು ದೊರಕುತ್ತಿರುವುದರಿಂದ ಕಚ್ಚಾ ಸಾಮಗ್ರಿಗಳ ಘಟಕಗಳು ನೇಪಥ್ಯಕ್ಕೆ ಸರಿಯುವುದಕ್ಕೆ ಕಾರಣವಾಗಿದೆ.

ಹಲವಾರು ಸಮಸ್ಯೆಗಳನ್ನು ಹೊತ್ತು ನಿಂತಿರುವ ಜವಳಿ ಕ್ಷೇತ್ರಕ್ಕೆ ಅಸಂಘಟನೆಯಿಂದ ಹೋರಾಟ ಅಥವಾ ಬೇಡಿಕೆಗಳಿಗೆ ಸ್ಪಂದನೆಗೆ ಸಮಸ್ಯೆ ಎದುರಾಗಿದೆ. ಪ್ರತಿ ಬಾರಿ ಸರ್ಕಾರದ ವಿರುದ್ಧ ಸಿಡಿದೇಳುತ್ತಿದ್ದ ನೇಕಾರರು ಕಳೆದೊಂದು ದಶಕದಿಂದ ಪ್ರಮುಖ ಹೋರಾಟಗಳಿಂದ ದೂರ ಉಳಿದಿದ್ದಾರೆ.

ಯೋಜನೆಗಳಿಗೆ ಸೀಮಿತ: ಸರ್ಕಾರದ ಯೋಜನೆಗಳಿಗೆ ಸೀಮಿತಗೊಂಡಿರುವ ನೇಕಾರರು ತಮ್ಮ ಕಾಯಕದ ನಿಷ್ಠೆ ಹಾಗೂ
ಪ್ರಯತ್ನ ತೋರುವಲ್ಲಿ ವಿಫಲಗೊಂಡಿದ್ದಾರೆ. ನೆರೆಯ ರಾಜ್ಯಗಳಲ್ಲಿನ ಅತಿ ವೇಗದ ಉದ್ಯೋಗ ಕ್ರಾಂತಿಗೆ ಕಿಂಚಿತ್‌ ಪೈಪೋಟಿ ಒಡ್ಡುವಲ್ಲಿ ಇಚ್ಛಾಶಕ್ತಿ ತೋರದಿರುವುದು ವಿಪರ್ಯಾಸ. 2005ಕ್ಕಿಂತಲೂ ಮೊದಲು ಸುಮಾರು 20 ಸಾವಿರಗಳಷ್ಟು ಮಗ್ಗಗಳು ಇದ್ದವು. ರಬಕವಿ-ಬನಹಟ್ಟಿ ಪಟ್ಟಣಕ್ಕೆ ಕಾಲಿಟ್ಟರೆ ಸಾಕು ಮಗ್ಗಗಳ ಶಬ್ದವೇ ಕೇಳುತ್ತಿತ್ತು. ಇದೀಗ ಕೇವಲ 6 ಸಾವಿರಕ್ಕೆ ಇಳಿಕೆ ಕಂಡು ಪಟ್ಟಣದ ಮಧ್ಯಭಾಗದಲ್ಲಿ ಮಗ್ಗಗಳಿಗೆ ಹುಡುಕಾಟ ನಡೆಸಬೇಕಾದ ಸ್ಥಿತಿ ಇದೆ.

ಜವಳಿ ಕ್ಷೇತ್ರದಲ್ಲಿ ಇದೀಗ ಸಾಕಷ್ಟು ಪೈಪೋಟಿ ನಡೆಯುತ್ತಿದ್ದು, ಇಂದಿನ ಯುವ ಜನಾಂಗ ಬೇರೆ ಬೇರೆ ಬಟ್ಟೆಗಳತ್ತ ಆಕರ್ಷಿತರಾಗುತ್ತಿದ್ದಾರೆ. ಜನರ ಅಭಿರುಚಿಗೆ ತಕ್ಕಂತೆ ಹೊಸ ಹೊಸ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ಸೀರೆಗಳನ್ನು ತರಲು ಪ್ರಯತ್ನಿಸಬೇಕಿದೆ. ಸರಕಾರ ಕೂಡಾ ಜವಳಿ ಪಾರ್ಕ್‌ ನಿರ್ಮಿಸಿ ಸೀರೆಗಳ ಮಾರಾಟಕ್ಕೆ ಅವಶ್ಯಕ ವಾತಾವರಣ ನಿರ್ಮಿಸಬೇಕಿದೆ.
*ಶಂಕರ ಜಾಲಿಗಿಡದ, ಅಧ್ಯಕ್ಷರು, ಪಾವರ್‌ಲೂಮ್‌ ಅಸೋಶಿಯೇಷನ್‌, ಬನಹಟ್ಟಿ.

■ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

1-a-siddu

By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ

ಮುಧೋಳ: 36 ಹಳ್ಳಿ ಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್‌ ಠಾಣೆ

14-rabakavi-1

Rabkavi Banhatti: ನವೀಕರಣವಿಲ್ಲದೆ ನೆಲೆ ಕಾಣದ ನೇಕಾರರು

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

ಕುಳಗೇರಿ ಕ್ರಾಸ್‌: ನ.1ರಂದು ನಾಡದೇವಿ ಭುವನೇಶ್ವರಿ ರಥೋತ್ಸವ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

Mudhol: ಅಕ್ರಮ ಮರಳು ಅಡ್ಡೆಗಳ ಮೇಲೆ ಅಧಿಕಾರಿಗಳ ದಾಳಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-asasa

Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್

sanjay-raut

Defamation case; ಸಂಜಯ್ ರಾವತ್‌ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು

1-eweqwewq

Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ

1-aree

Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.