Bengaluru: ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ; ಮೃತರ ಸಂಖ್ಯೆ 9ಕ್ಕೆ ಏರಿಕೆ
Team Udayavani, Oct 25, 2024, 4:58 PM IST
ಬೆಂಗಳೂರು: ನಗರದ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಶುಕ್ರವಾರ(ಅ.25) ನಡೆಸಿದ ಕಾರ್ಯಾಚರಣೆ ವೇಳೆ ಅವಶೇಷಗಳಡಿ ಸಿಲುಕಿದ್ದ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾಗಿದೆ, ಇದರಿಂದ ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಏಳುಮಲೈ ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ಭಾರೀ ಮಳೆಯ ಸಂದರ್ಭದಲ್ಲಿ ಘಟನೆ ಸಂಭವಿಸಿದಾಗಿನಿಂದ ಅಗ್ನಿಶಾಮಕ ಮತ್ತು ತುರ್ತು ವಿಭಾಗ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆಗಳ ತಂಡಗಳು ಕಾರ್ಯಾಚರಣೆ ನಡೆಸುತ್ತಿತ್ತು.
ಇನ್ನು ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಟ್ಟಡದ ಮಾಲೀಕ ಸೇರಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳ ವಿರುದ್ಧ ಬಿಎನ್ಎಸ್, ಬಿಬಿಎಂಪಿ ಆರ್ಇಆರ್ಎ ನಿಯಮದಡಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
Banana Crop: ಇರಾನ್ ದೇಶಕ್ಕೆ ಜಗದಾಳ ಗ್ರಾಮದ ಬಾಳೆ ಹಣ್ಣು… 11 ತಿಂಗಳಲ್ಲಿ ಲಕ್ಷಾಂತರ ಲಾಭ
Road Mishap: ಆನಂದಪುರ ಬಳಿ ಭೀಕರ ಅಪಘಾತ… ಇಬ್ಬರು ಸ್ಥಳದಲ್ಲೇ ಮೃತ್ಯು
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ
MUST WATCH
ಹೊಸ ಸೇರ್ಪಡೆ
Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್
Defamation case; ಸಂಜಯ್ ರಾವತ್ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು
Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ
Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
Ajekar: ಕೊ*ಲೆ ಪ್ರಕರಣ; ಪತಿಗೆ ದಿನನಿತ್ಯ ವಿಷ ಪದಾರ್ಥ ನೀಡುತ್ತಿದ್ದ ಪತ್ನಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.