Inflation; ಬಡವರ ಕನಸುಗಳನ್ನು ಕಸಿದುಕೊಳ್ಳಲಾಗಿದೆ: ವಿಡಿಯೋ ಹಂಚಿಕೊಂಡ ರಾಹುಲ್
ಆದಾಯ ಕುಸಿತ, ಹೆಚ್ಚುತ್ತಿರುವ ಹಣದುಬ್ಬರ.. ಸಾಮಾನ್ಯ ಕಟ್ಟಿಂಗ್ ಶಾಪ್ ನಲ್ಲಿ ಕಾಂಗ್ರೆಸ್ ನಾಯಕ
Team Udayavani, Oct 25, 2024, 9:02 PM IST
ಹೊಸದಿಲ್ಲಿ: ಆದಾಯ ಕುಸಿತ ಮತ್ತು ಹೆಚ್ಚುತ್ತಿರುವ ಹಣದುಬ್ಬರದಿಂದಾಗಿ ಕಷ್ಟಪಟ್ಟು ದುಡಿಯುವ ಬಡ ಜನರ ಕನಸುಗಳನ್ನು ಕಸಿದುಕೊಳ್ಳಲಾಗಿದೆ. ಉಳಿತಾಯವನ್ನು ಮನೆಗೆ ತೆಗೆದುಕೊಂಡು ಹೋಗಲು ಅನುವು ಮಾಡಿಕೊಡುವ ಹೊಸ ಯೋಜನೆಗಳ ಅಗತ್ಯವಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸಂವಾದದಲ್ಲಿ ಹೇಳಿಕೊಂಡಿದ್ದಾರೆ.
ಸಾಮಾನ್ಯ ಕ್ಷೌರದ ಅಂಗಡಿಯೊಂದರಲ್ಲಿ ಕ್ಷೌರ ಮಾಡಿಸಿಕೊಂಡ ವಿಡಿಯೋ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ರಾಹುಲ್ ‘ಅಜಿತ್ ಭಾಯ್ ಅವರ ಈ ನಾಲ್ಕು ಮಾತುಗಳು ಮತ್ತು ಅವರ ಕಣ್ಣೀರು ಇಂದು ಭಾರತದ ಪ್ರತಿಯೊಬ್ಬ ಬಡ ಮತ್ತು ಮಧ್ಯಮ ವರ್ಗದ ಕಷ್ಟಪಟ್ಟು ದುಡಿಯುವ ವ್ಯಕ್ತಿಯ ಕಥೆಯನ್ನು ಹೇಳುತ್ತದೆ. ಕ್ಷೌರಿಕರಿಂದ ಚಮ್ಮಾರರು, ಕುಂಬಾರರಿಂದ ಬಡಗಿಗಳ ಆದಾಯ ಕುಸಿತ ಮತ್ತು ಹೆಚ್ಚುತ್ತಿರುವ ಹಣದುಬ್ಬರ ಕಾರ್ಮಿಕ ವರ್ಗದ ಸ್ವಂತ ಅಂಗಡಿಗಳ, ಮನೆಗಳ ಮತ್ತು ಸ್ವಾಭಿಮಾನದ ಕನಸುಗಳನ್ನು ಕಸಿದುಕೊಂಡಿದೆ” ಎಂದು ಹೇಳಿಕೊಂಡಿದ್ದಾರೆ.
“कुछ नहीं बचता है!”
अजीत भाई के ये चार शब्द और उनके आसूं आज भारत के हर मेहनतकश गरीब और मध्यमवर्गीय की कहानी बयां कर रहे हैं।
नाई से लेकर मोची, कुम्हार से लेकर बढ़ई – घटती आमदनी और बढ़ती महंगाई ने हाथ से काम करने वालों से अपनी दुकान, अपना मकान और स्वाभिमान तक के अरमान छीन लिए… pic.twitter.com/1gYGdui2ll
— Rahul Gandhi (@RahulGandhi) October 25, 2024
“ಇಂದು ಜನನಾಯಕ ರಾಹುಲ್ ಗಾಂಧಿ ಅವರು ದೆಹಲಿಯಲ್ಲಿ ಅಜಿತ್ ಅವರ ಅಂಗಡಿಗೆ ಹೋಗಿ ಅವರ ಜೀವನದ ಹೋರಾಟಗಳನ್ನು ಅರ್ಥಮಾಡಿಕೊಂಡರು” ಎಂದು ಕಾಂಗ್ರೆಸ್ ಪಕ್ಷ ಹೇಳಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70+ Ayushman; ಅ. 29ರಂದು ಮೋದಿ ಚಾಲನೆ
Defamation case; ಸಂಜಯ್ ರಾವತ್ಗೆ ಸೆಷನ್ಸ್ ಕೋರ್ಟ್ ನಿಂದ ಜಾಮೀನು, ಶಿಕ್ಷೆ ಅಮಾನತು
Maharashtra Election; 5 ಸೀಟು ಕೊಡಿ, ಇಲ್ಲದಿದ್ದರೆ 25 ರಲ್ಲಿ ಹೋರಾಟ ಎಂದ ಎಸ್ ಪಿ
Germany visas; ಭಾರತೀಯ ಉದ್ಯೋಗಿಗಳಿಗೆ 20,000 ದಿಂದ 90,000ಕ್ಕೆ ಏರಿಕೆ: ಪ್ರಧಾನಿ ಮೋದಿ
Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.