BJP: ಹೈಕಮಾಂಡ್ ಸೂಚಿಸಿರುವ ಅಭ್ಯರ್ಥಿ ಪರ ಕೆಲಸ: ನಿರಾಣಿ
Team Udayavani, Oct 26, 2024, 12:41 AM IST
ಹುಬ್ಬಳ್ಳಿ: ಶಿಗ್ಗಾಂವಿ ಉಪಚುನಾವಣೆಗೆ ನಾನು ಆಕಾಂಕ್ಷಿಯಾಗಿರಲಿಲ್ಲ. ಈ ಕುರಿತು ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಹೈಕಮಾಂಡ್ ಸೂಚಿಸಿರುವ ಅಭ್ಯರ್ಥಿ ಪರವಾಗಿ ನಾವೆಲ್ಲ ಕೆಲಸ ಮಾಡುತ್ತೇವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಚುನಾವಣೆ ಮುಗಿಯುವವರೆಗೂ ಶಿಗ್ಗಾಂವಿ ಕ್ಷೇತ್ರದಲ್ಲಿ ಉಳಿದು ಗೆಲ್ಲಿಸುವ ಕೆಲಸ ಮಾಡುತ್ತೇವೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದ ದುರಾಡಳಿತದ ಬಗ್ಗೆ ಕಾಂಗ್ರೆಸ್ ಶಾಸಕರೇ ಭ್ರಮನಿರಸರಾಗಿದ್ದಾರೆ. ಯಾವುದೇ ಅಭಿವೃದ್ಧಿ ಆಗದಿರುವ ಹಿನ್ನೆಲೆಯಲ್ಲಿ ಅವರ ಪಕ್ಷದವರೇ ಅಸಮಾಧಾನದಲ್ಲಿದ್ದಾರೆ. ಹೀಗಾಗಿ ಮೂರು ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ದೊಡ್ಡ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.
ಗ್ಯಾರಂಟಿಗಳು ಫಲಾನುಭವಿಗಳಿಗೆ ಮುಟ್ಟಿಲ್ಲ. ಹೀಗಾಗಿ ಜನರು ಕಾಂಗ್ರೆಸ್ ವಿರೋಧವಾಗಿದ್ದಾರೆ. ಬಸವರಾಜ ಬೊಮ್ಮಾಯಿ ಇಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Polls; ಭಾವನಾತ್ಮಕ ಮಾತು, ಕಣ್ಣೀರು ನೋಡಿ ಜನರು ಬೇಸತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
Hubli: ಬಿಜೆಪಿಯಿಂದ ಹೆಚ್ಚಿನ ಶಾಸಕರು ಕಾಂಗ್ರೆಸ್ ಗೆ ಬರಬಹುದು: ಈಶ್ವರ ಖಂಡ್ರೆ
PM Modi: ಕಟ್ಟಡ ಕುಸಿತ: ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ 2 ಲಕ್ಷ ರೂ. ಪರಿಹಾರ
Hubli: ಟೀಕೆ ಮಾಡುತ್ತಿದ್ದವರೇ ಕುಟುಂಬ ರಾಜಕಾರಣಕ್ಕೆ ಬಲಿಯಾಗಿದ್ದಾರೆ: ಸತೀಶ ಜಾರಕಿಹೊಳಿ
ಧಾರವಾಡ : ಹೆಸರು ಬೆಳೆ ಬಂಪರ್..ಬೆಲೆ ಪಾಪರ್..!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.