VHP ಆವರಣದ ಸಂಘರ್ಷ: ಸಮಸ್ಯೆ ಇತ್ಯರ್ಥಕ್ಕೆ ಹಿರಿಯರ ನೇತೃತ್ವಕ್ಕೆ ಸಂಘದ ಮುಖಂಡರ ಸೂಚನೆ?


Team Udayavani, Oct 26, 2024, 6:45 AM IST

1-VHP

ಪುತ್ತೂರು: ವಿಹಿಂಪ ಜಿಲ್ಲಾ ಕಾರ್ಯಾಲಯದ ಭೂಮಿ ಪೂಜೆಯಲ್ಲಿ ಕಾರ್ಯಕರ್ತರೊಳಗೆ ಉಂಟಾದ ಸಂಘರ್ಷವನ್ನು ಶಾಶ್ವತ ಶಮನಗೊಳಿಸಲು ಹಿರಿಯರು ನೇತೃತ್ವ ವಹಿಸಿಕೊಳ್ಳುವಂತೆ ಸಂಘ ಪರಿವಾರದ ಪ್ರಮುಖರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಒಂದು ಕಾಲದಲ್ಲಿ ವಿಹಿಂಪ, ಬಜರಂಗದಳದಲ್ಲಿ ಗುರುತಿಸಿಕೊಂಡಿದ್ದ ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಹಿಂದೂ ಪರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸಂಘಟನೆಯ ಕೆಲವು ಕಾರ್ಯಕರ್ತರ ನಡುವೆ ಬುಧವಾರ ಸಂಘಟನೆಯ ಶಕ್ತಿ ಸ್ಥಳದಲ್ಲೇ ಉಂಟಾದ ಘರ್ಷಣೆ ಸಂಘ ಪರಿವಾರಕ್ಕೆ ತೀವ್ರ ಮುಜುಗರ ಉಂಟು ಮಾಡಿದೆ.

ವಿಹಿಂಪ ಕೇಂದ್ರಿಯ ಕಾರ್ಯದರ್ಶಿ ಆಕ್ರೋಶ
ವಿಹಿಂಪ ಕೇಂದ್ರಿಯ ಕಾರ್ಯದರ್ಶಿ ಗೋಪಾಲ್‌ ಜಿ ಅವರು ಭಾಗವಹಿಸಿದ್ದ ಕಾರ್ಯಕ್ರಮದಲ್ಲೇ ಈ ರೀತಿಯ ಘಟನೆ ನಡೆದಿದ್ದು, ಈ ಬಗ್ಗೆ ತುರ್ತು ಬೈಠಕ್‌ನಲ್ಲಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವುದಾಗಿ ತಿಳಿದು ಬಂದಿದೆ. ಎಲ್ಲ ಗ್ರಾಮಗಳಲ್ಲಿ ವಿಹಿಂಪ ಶಾಖೆ ಹೊಂದಿರುವ ಪುತ್ತೂರು ತಾಲೂಕು ಸಂಘ ಪರಿವಾರದ ಸಂಘಟನ ಶಕ್ತಿ ಕೇಂದ್ರವಾಗಿದ್ದು, ಇಲ್ಲಿನ ಈ ಬೆಳವಣಿಗೆಯಿಂದ ಎಲ್ಲೆಡೆ ತಪ್ಪು ಸಂದೇಶ ರವಾನಿಸಿದಂತಾಗಿದೆ ಎನ್ನುವ ಅಂಶ ಬೈಠಕ್‌ನಲ್ಲಿ ಪ್ರಸ್ತಾವವಾಗಿದೆ.

ಮುಂದುವರಿದ ಸಂದೇಶ ಸಂಘರ್ಷ..!
ಘಟನೆ ಬಗ್ಗೆ ಅರುಣ್‌ ಪುತ್ತಿಲ ಹಾಗೂ ಮುರಳಿಕೃಷ್ಣ ಹಸಂತಡ್ಕ ಬಹಿರಂಗ ಹೇಳಿಕೆ ನೀಡಿದ್ದು, ಇದರಲ್ಲಿ ಉಲ್ಲೇಖವಾಗಿರುವ ಅಂಶಗಳ ಬಗ್ಗೆ ಸಂದೇಶ ಸಂಘರ್ಷ ಮುಂದುವರಿದಿದೆ. ಇಬ್ಬರು ಮುಖಂಡರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕೆಸರೆರಚಾಟ ಮುಂದುವರಿಸಿದ್ದಾರೆ. ಕಟು ಪದಗಳಲ್ಲಿ ಟೀಕೆ ಮುಂದುವರಿದಿದೆ.

ವಿಹಿಂಪ ಕಾಯಕ್ರಮದಲ್ಲಿ ಶಾಸಕ ರೈ: ಕಾಂಗ್ರೆಸ್‌ ಕಾರ್ಯಕರ್ತರ ಅಸಮಾಧಾನ?
ಪುತ್ತೂರು: ವಿಶ್ವ ಹಿಂದೂ ಪರಿಷದ್‌ ಜಿಲ್ಲಾ ಕಾರ್ಯಾಲಯದ ಕಟ್ಟಡದ ಭೂಮಿ ಪೂಜೆಯಲ್ಲಿ ಪಾಲ್ಗೊಂಡ ಶಾಸಕ ಅಶೋಕ್‌ ಕುಮಾರ್‌ ರೈ ಅವರ ನಡೆ ವಿರುದ್ಧ ಕಾಂಗ್ರೆಸ್‌ನಲ್ಲಿ ಕೆಲವರು ಅಸಮಾಧಾನ ವ್ಯಕ್ತಪಡಿಸಿರುವ ಅಂಶ ಬೆಳಕಿಗೆ ಬಂದಿದೆ.

ಎರಡು ದಶಕಗಳ ಕಾಲ ಬಿಜೆಪಿಯಲ್ಲಿದ್ದ ಅಶೋಕ್‌ ರೈ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರಿ ಶಾಸಕರಾಗಿ ಆಯ್ಕೆಯಾಗಿದ್ದರು. ಅವರ ಗೆಲುವಿನಲ್ಲಿ ಅಲ್ಪಸಂಖ್ಯಾಕ ಸಮುದಾಯದ ಮತಗಳು ಪ್ರಧಾನ ಪಾತ್ರ ವಹಿಸಿತ್ತು.

ಬುಧವಾರ ನಡೆದ ಭೂಮಿ ಕಾರ್ಯಕ್ರಮದಲ್ಲಿ ವಿಹಿಂಪ ಮುಖಂಡರ ಆಹ್ವಾನದಂತೆ ಆಗಮಿಸಿದ್ದರು. ಇದೇ ವಿಚಾರ ಈಗ ಕೈ ಪಾಳಯದಲ್ಲಿ ಚರ್ಚಾ ವಸ್ತುವಾಗಿದೆ. ಅಶೋಕ್‌ ರೈ ಭಾಗವಹಿಸಿರುವ ಬಗ್ಗೆ ಕೆಲವು ಮುಖಂಡರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಹೈಕಮಾಂಡ್‌ನ‌ ಗಮನಕ್ಕೂ ತಂದಿದ್ದಾರೆ. ಸಂಘ ಪರಿವಾರ ಸಂಘಟನೆಗಳಿಂದ ಕಾಂಗ್ರೆಸ್‌ ಅಂತರ ಕಾಯ್ದುಕೊಂಡಿರುವಾಗ ತಮ್ಮ ಶಾಸಕರು ವಿಹಿಂಪ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಕಾರ್ಯಕರ್ತರಿಗೆ ಬೇಸರ ತರಿಸಿದೆ ಎಂದು ಹೇಳಲಾಗಿದೆ.

ಕಳೆದ ವಿಧಾನಸಭಾ ಚುನಾವಣೆಯ ಬಳಿಕದ ಬೆಳವಣಿಗೆಯಿಂದ ಸಂಘದ ತತ್ವ ಸಿದ್ಧಾಂತದಡಿಯಲ್ಲಿ ಕೆಲಸ ಮಾಡುವ ಕೆಲವು ಕಾರ್ಯಕರ್ತರು ನೋವನುಭವಿಸಿದ್ದರು. ಸಂಘ, ಸಂಘಟನೆಯ ಹಿರಿಯರ ಮೇಲಿನ ಟೀಕೆಗಳಿಂದ ಅವರು ನೊಂದಿದ್ದು, ಇದು ಈ ಘಟನೆಗೆ ಕಾರಣವಿರಬಹುದು. ಈ ಎಲ್ಲ ಗೊಂದಲಗಳನ್ನು ಬಗೆಹರಿಸಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗುವ ಕಾರ್ಯ ಹಿರಿಯರ ನೇತೃತ್ವದಲ್ಲಿ ನಡೆಯಲಿದೆ.
– ಮುರಳಿಕೃಷ್ಣ ಹಸಂತಡ್ಕ ,ಹಿಂದೂ ಸಂಘಟನೆ ಮುಖಂಡ

ವಿಶ್ವ ಹಿಂದೂ ಪರಿಷದ್‌ನ ಪ್ರಾಂತೀಯ ಉಪಾಧ್ಯಕ್ಷನಾಗಿರುವ ಯು. ಪೂವಪ್ಪ ಅವರ ಆಹ್ವಾನದಂತೆ ನಾನು ಕಾರ್ಯಕ್ರಮಕ್ಕೆ ಹೋಗಿದ್ದೆ. ನಾನು ಹಿಂದೂ ಧರ್ಮದ ಕಾರ್ಯಕರ್ತನಾಗಿ ಹೋಗಿದ್ದೇನೆ. ಅಲ್ಲಿ ಘಟನೆ ಯಾವ ರೀತಿ ಆಗಿದೆ ಅನ್ನುವ ಬಗ್ಗೆ ಎಲ್ಲರಿಗೂ ತಿಳಿದಿದೆ. ಇದು ಹಿಂದೂ ಸಮಾಜಕ್ಕೆ ನೋವನ್ನು ತಂದಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಆಗದಂತೆ ವಿಹಿಂಪ, ಬಜರಂಗದಳ ನೋಡಿಕೊಳ್ಳಬೇಕು.
– ಅರುಣ್‌ ಕುಮಾರ್‌ ಪುತ್ತಿಲ. ಹಿಂದೂ ಸಂಘಟನೆ ಮುಖಂಡ

ಟಾಪ್ ನ್ಯೂಸ್

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

3-BIGG-BOSS

BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

ISREL

Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…

2-hospete

Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

Kalladka: ಹೊಟೇಲ್‌ಗೆ ನುಗ್ಗಿದ ಕಳ್ಳ: ವೀಡಿಯೋ ವೈರಲ್‌

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

ಅಮ್ಮೆಮಾರ್‌ನಲ್ಲಿ ತಲವಾರು ದಾಳಿ ಪ್ರಕರಣ: ಘಟನಾ ಸ್ಥಳಕ್ಕೆ ಡಿಐಜಿ ಅಮಿತ್‌ ಸಿಂಗ್‌ ಭೇಟಿ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

Puttur: ರೈಲ್ವೇ ಹಳಿಯಲ್ಲಿ ಕಾಸರಗೋಡು ಮೂಲದ ಕಾರ್ಮಿಕನ ಮೃತದೇಹ ಪತ್ತೆ

9

Sullia ಆಸ್ಪತ್ರೆ ಶೆಡ್‌ನ‌ಲ್ಲಿ ನಿಲ್ಲುತ್ತಿದ್ದ 108 ಆ್ಯಂಬುಲೆನ್ಸ್‌ ಈಗ ರಸ್ತೆ ಬದಿಗೆ!

5(1)

Uppinangady-ನೆಲ್ಯಾಡಿ ಹೆದ್ದಾರಿ ಹೊಂಡಮಯ, ಧೂಳುಮಯ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

6-bng

Bengaluru: ಬ್ಯಾರಿಕೇಡ್‌ಗೆ ಬೈಕ್‌ ಡಿಕ್ಕಿ: ಟೆಕಿ ಸಾವು

5-bng

Bengaluru: ಮೂವರು ಬೈಕ್‌ ಕಳ್ಳರ ಸೆರೆ: 31 ವಾಹನ ಜಪ್ತಿ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

4-bng

Bengaluru: ಕಾರಿನಲ್ಲಿದ್ದ 13 ಲಕ್ಷ ಮೌಲ್ಯದ ಚಿನ್ನ ಕದ್ದಿದ್ದ ಆರೋಪಿ ಬಂಧನ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.