Bengaluru: ಗ್ರ್ಯಾಚುಟಿ ಮೊತ್ತಕ್ಕೆ ವಿಮೆ ಕಡ್ಡಾಯ ಆದೇಶ ರ‌ದ್ದತಿಗೆ ಮನವಿ

"ಕರ್ನಾಟಕ ಕಡ್ಡಾಯ ಗ್ರ್ಯಾಚುಟಿ ವಿಮಾ ನಿಯಮ' ಬಗ್ಗೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

Team Udayavani, Oct 26, 2024, 12:15 PM IST

9-hc

ಬೆಂಗಳೂರು: ಖಾಸಗಿ ಸಂಸ್ಥೆಗಳಲ್ಲಿ ದುಡಿಯುವ ಉದ್ಯೋಗಿಗಳ ಗ್ರ್ಯಾಚುಟಿ ಮೊತ್ತಕ್ಕೆ ವಿಮೆಯ ರಕ್ಷಣೆ ಒದಗಿಸಲು ಸಂಬಂಧ ರಾಜ್ಯ ಸರ್ಕಾರ ಜಾರಿಗೆ ತಂದಿರುವ “ಕರ್ನಾಟಕ ಕಡ್ಡಾಯ ಗ್ರ್ಯಾಚುಟಿ ವಿಮಾ ನಿಯಮಗಳು-2024′ ಇದನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಈ ವಿಚಾರವಾಗಿ ಬೃಹತ್‌ ಬೆಂಗಳೂರು ಹೋಟೆಲ್ಸ್‌ ಅಸೋಸಿಯೇಷನ್‌ ಸಲ್ಲಿಸಿರುವ ತಕರಾರು ಅರ್ಜಿಯು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಶುಕ್ರವಾರ ವಿಚಾರಣೆಗೆ ಬಂದಿತ್ತು.

ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಆಗಿ ಅವರ ವಾದ ಆಲಿಸದೆ ಯಾವುದೇ ಮಧ್ಯಂತರ ಆದೇಶ ನೀಡಲಾಗುವುದಿಲ್ಲ ಎಂದು ಹೇಳಿ, ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

ಖಾಸಗಿ ಸಂಸ್ಥೆಗಳಲ್ಲಿ ದುಡಿಯುವ ಉದ್ಯೋಗಿಗಳ ಗ್ರ್ಯಾಚುಟಿ ಮೊತ್ತಕ್ಕೆ ವಿಮೆಯ ರಕ್ಷಣೆ ಒದಗಿಸಲು “ಕರ್ನಾಟಕ ಕಡ್ಡಾಯ ಗ್ರ್ಯಾಚ್ಯುಟಿ ವಿಮಾ ನಿಯಮಗಳು-2024 ಜಾರಿಗೊಳಿಸಿ ರಾಜ್ಯ ಸರ್ಕಾರ 2024ರ ಜ.10ರಂದು ಅಧಿಸೂಚನೆ ಹೊರಡಿಸಿತ್ತು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. ಉದ್ಯೋಗದಾತರೊಂದಿಗೆ ಸಮಾಲೋಚನೆ ನಡೆಸದೆ ಈಗ ಏಕಾಏಕಿ ನಿಯಮಗಳನ್ನು ಜಾರಿಗೆ ತರಲಾಗಿದೆ.

10 ಜನ ಮೇಲ್ಪಟ್ಟ ಉದ್ಯೋಗಿಗಳು ಹೊಂದಿದ ಸಂಸ್ಥೆಗಳು ಕಡ್ಡಾಯವಾಗಿ 60 ದಿನಗಳಲ್ಲಿ ವಿಮೆಯನ್ನು ಅಳವಡಿಸಿಕೊಳ್ಳಬೇಕೆಂದಿದೆ. ವಿಮಾ ಪಾಲಿಸಿ ಅಳವಡಿಸಿಕೊಳ್ಳಬೇಕಾದರೆ ಇಂಡಿಯನ್‌ ಟ್ರಸ್ಟ್‌ ಕಾಯ್ದೆ-1882ರಲ್ಲಿ ಗ್ರ್ಯಾಚ್ಯುಟಿ ಟ್ರಸ್ಟ್‌ ಸ್ಥಾಪಿಸಬೇಕು. ಹೀಗಿದ್ದಾಗ 10ಕ್ಕಿಂತ ಹೆಚ್ಚು ಉದ್ಯೋಗಿಗಳು ಇರುವ ಸಂಸ್ಥೆಗಳಿಗೆ ಗ್ರ್ಯಾಚುಟಿ ಟ್ರಸ್ಟ್‌ ಸ್ಥಾಪಿಸುವ ಹೊರೆ ಬೀಳಲಿದೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಸರ್ಕಾರದ ಅಧಿಸೂಚನೆಯನ್ನು ಕಾನೂನಿನ ದೋಷಗಳಿಂದ ಕೂಡಿದ್ದು, ವಿವೇಕ ಬಳಸದೆ ಅದನ್ನು ಜಾರಿಗೆ ತರಲಾಗಿದೆ. ಆದ್ದರಿಂದ ಅಧಿಸೂಚನೆಯನ್ನು ರದ್ದುಪಡಿಸಬೇಕು. ಅರ್ಜಿಯ ವಿಚಾರಣೆ ಮುಗಿಯುವ ತನಕ ಅಧಿಸೂಚನೆ ಜಾರಿಗೆ ಮಧ್ಯಂತರ ತಡೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಟಾಪ್ ನ್ಯೂಸ್

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Belekeri port scam:

Belekeri scam: ಶಾಸಕ ಸತೀಶ್‌ ಸೈಲ್‌ ಗೆ ಭಾರಿ ಜೈಲು ಶಿಕ್ಷೆ ಪ್ರಕಟ; ಶಾಸಕ ಸ್ಥಾನ ರದ್ದು?

INDvsNZ: India trapped by spin in Pune; Series defeat at home after 12 years

INDvsNZ: ಪುಣೆಯಲ್ಲಿ ಸ್ಪಿನ್‌ ಬಲೆಗೆ ಬಿದ್ದ ಭಾರತ; 12 ವರ್ಷಗಳ ಬಳಿಕ ತವರಲ್ಲಿ ಸರಣಿ ಸೋಲು

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Coldplay, Diljit ಕಾರ್ಯಕ್ರಮದ ನಕಲಿ ಟಿಕೆಟ್‌ ಮಾರಾಟ: ಬೆಂಗಳೂರು ಸೇರಿ ಹಲವೆಡೆ ಇ.ಡಿ ದಾಳಿ!

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

Mudhol: ಬಾಕಿ ಹಣ ನೀಡುವಂತೆ ಕಾರ್ಖಾನೆ ಎದುರು ರೈತರ ಧರಣಿ

delhi

ಮದುವೆಯಾಗು ಎಂದು ಬೆನ್ನು ಬಿದ್ದ ಗರ್ಭಿಣಿ ಪ್ರೇಯಸಿಯನ್ನೇ ಹತ್ಯೆಗೈದು ಹೂತು ಹಾಕಿದ ಪ್ರಿಯಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

15-bng

Bengaluru: 3 ಅಂತಸ್ತಿನ ಅನಧಿಕೃತ ಮನೆ ಸಂಪೂರ್ಣ ಧ್ವಂಸ

12-

Kengeri ಉಪನಗರ- ಆರ್ವಿ ಕಾಲೇಜು ರಸ್ತೆ ಬಳಿ ಕಸದ ರಾಶಿ

11-dinesh

Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್‌

10-

Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

Polluted Yamuna: ಭಿನ್ನವಾಗಿ ಪ್ರತಿಭಟಿಸಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

ಯಮುನಾ ನದಿಯಲ್ಲಿ ಮುಳುಗಿ ಪ್ರತಿಭಟಿಸಲು ಹೋಗಿ ಆಸ್ಪತ್ರೆಗೆ ದಾಖಲಾದ ಬಿಜೆಪಿ ರಾಜ್ಯಾಧ್ಯಕ್ಷ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

Maruti Suzuki: ನ.11ರಂದು ಭಾರತದಲ್ಲಿ ಮಾರುತಿ ಸುಜುಕಿಯ ನೂತನ ಡಿಜೈರ್‌ ಬಿಡುಗಡೆ

badavara makkalu belibeku kanrayya movie

Sandalwood: ʼಬಡವ್ರ ಮಕ್ಕಳು ಬೇಳಿಬೇಕು ಕಣ್ರಯ್ಯʼ ಟ್ರೇಲರ್‌ ಶೀಘ್ರ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.