Bengaluru: ಕಟ್ಟಡ ಕುಸಿತಕ್ಕೆ ಗುತ್ತಿಗೆದಾರನೂ ಬಲಿ!

ಬಾಬುಸಾಪಾಳ್ಯ ಕಟ್ಟಡ ದುರಂತದಲ್ಲಿ ಸತ್ತವರ ಸಂಖ್ಯೆ 9ಕ್ಕೆ ಏರಿಕೆ ; 22 ಕಾರ್ಮಿಕರ ಪೈಕಿ 13 ಮಂದಿ ರಕ್ಷಣೆ

Team Udayavani, Oct 26, 2024, 3:25 PM IST

16-bng

ಬೆಂಗಳೂರು: ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಉಂಟಾದ ದುರಂತದಲ್ಲಿ ಅವಶೇಷ ಗಳಡಿ ನಾಪತ್ತೆಯಾಗಿದ್ದ ಗುತ್ತಿಗೆದಾರ ಏಳುಮಲೈ ಶವ ಶುಕ್ರವಾರ ಪತ್ತೆಯಾಗಿದೆ. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ (ಐಐಎಸ್‌ಸಿ)ಯಿಂದ ಮೆಟಿರಿಯಲ್‌ ಸೈನ್ಸ್‌ನವರನ್ನು ಕರೆತಂದು ಕಟ್ಟಡದ ಅವಷೇಷಗಳ ಸ್ಯಾಂಪಲ್‌ ಸಂಗ್ರಹಿಸಿ ಕಾರ್ಯಾಚರಣೆ ಮಾಡಲಾಗಿದೆ. ಕಟ್ಟಡದೊಳಗೆ ಸಿಲುಕಿದ್ದ ಏಳುಮಲೈಗಾಗಿ ಶುಕ್ರವಾರ ಬೆಳಗ್ಗಿನಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಗುತ್ತಿಗೆದಾರ ಏಳುಮಲೈ ಮೊಬೈಲ್‌ ರಿಂಗ್‌ ಆಗುತ್ತಿತ್ತು. ಅವರ ಲೊಕೇಶನ್‌ ಟ್ರೇಸ್‌ ಮಾಡಿದಾಗ ಕಟ್ಟಡದ ಅವಶೇಷಗಳಡಿ ತೋರಿಸುತ್ತಿತ್ತು. ಇದರ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದಾಗ ಕಟ್ಟಡದ ಅವಶೇಷಗಳ ಒಳಗೆ ಏಳುಮಲೈ ಶವ ಪತ್ತೆಯಾಗಿದೆ. ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಕಟ್ಟಡ ದುರಂತದಲ್ಲಿ ಇದುವರೆಗೆ ಏಳುಮಲೈ ಸೇರಿದಂತೆ ಒಟ್ಟು 9 ಮಂದಿ ಮೃತಪಟ್ಟಿದ್ದಾರೆ.

ಕಾರ್ಯಾಚರಣೆ ಮುಕ್ತಾಯ: ಇನ್ನುಳಿದಂತೆ ಕಟ್ಟಡದ ಒಳಗೆ ಬೇರೆ ಯಾರೂ ಸಿಲುಕಿರುವ ಸಾಧ್ಯತೆಗಳಿಲ್ಲ. ಹೀಗಾಗಿ ಕಾರ್ಯಾಚರಣೆಯನ್ನು ಮುಕ್ತಾಯಗೊ ಳಿಸಲಾಗಿದೆ ಎಂದು ಪೊಲೀಸ್‌ ಮೂಲ ಗಳು ತಿಳಿಸಿವೆ. ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡವರಿಗಾಗಿ 4 ದಿನಗಳಿಂದಲೂ 30ಕ್ಕೂ ಹೆಚ್ಚು ಅಗ್ನಿಶಾಮಕ ದಳದ ಅಧಿ ಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. 13 ಮಂದಿಯನ್ನು ಇದುವರೆಗೂ ರಕ್ಷಿಸಲಾಗಿದೆ. ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ರಕ್ಷಣಾ ಕಾರ್ಯಾಚರಣೆ ಸ್ಥಗಿತಗೊಳಿಸಿ ಶುಕ್ರವಾರ ಮುಂಜಾನೆಯಿಂದ ಮತ್ತೆ ಶೋಧ ಕಾರ್ಯ ಆರಂಭಿಸಲಾಗಿತ್ತು. ಸಂಬಂಧ ಕಟ್ಟಡ ಮಾಲಿಕ ಹಾಗೂ ಅವರ ಪುತ್ರ ಸೇರಿದಂತೆ ಮೂವರ ಮೇಲೆ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂವರನ್ನು ಬಂಧಿಸಲಾಗಿದೆ.

ಈ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ ಸುಮಾರು 22 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿ ದ್ದರು. ಕಟ್ಟಡ ಬಿದ್ದಿರುವ ವಿಚಾರ ಗೊತ್ತಾಗು ತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ, ಎನ್‌ಡಿಆರ್‌ ಎಫ್, ಎಸ್‌ಡಿಆರ್‌ಎಫ್ ಪಡೆ ಹಾಗೂ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಕಾರ್ಮಿಕರ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು.

ನಂಜಪ್ಪ ಗಾರ್ಡನ್‌ನಲ್ಲಿ ವಾಲಿದ್ದ 5 ಅಂತಸ್ತಿನ ಕಟ್ಟಡ ನೆಲಸಮ!

ಬೆಂಗಳೂರು: ಮಹದೇವಪುರ ವಲಯದ ಹೊರಮಾವಿನ ನಂಜಪ್ಪ ಗಾರ್ಡನ್‌ನಲ್ಲಿ ಪುಟ್ಟಪ್ಪ ಎಂಬುವರು 10×25 ಅಡಿಯಲ್ಲಿ ಜಾಗದಲ್ಲಿ ನಿರ್ಮಿಸಿದ್ದ 5 ಅಂತಸ್ತಿನ ಕಟ್ಟಡ ವಾಲಿದ್ದರಿಂದ ಆ ಮನೆಯನ್ನೂ ಶುಕ್ರವಾರ ನೆಲಸಮ ಮಾಡಲಾಗಿದೆ. ಅಕ್ಕಪಕ್ಕದಲ್ಲಿ ಮನೆಗಳು ಇರುವ ಕಾರಣ ಕೆಲಸಗಾರರು ಸುತ್ತಿಗೆಯಿಂದ ಬಡಿದು ಕಟ್ಟಡವನ್ನು ಒಡೆದರು. ಮೇಲ್ಭಾಗ ಕಟ್ಟಡ ತೆರವು ಮುಗಿದ ಬಳಿಕ ಜೆಸಿಬಿ ಯಂತ್ರದಿಂದ ಕಾರ್ಯಾಚರಣೆ ಮಾಡಲಾಯಿತು.

ಕಟ್ಟಡ ತೆರವು ಮಾಡದಿದ್ದರೆ ಕ್ರಿಮಿನಲ್‌ ಪ್ರಕರಣ ದಾಖಲಿಸುವುಗಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ಮಾಲಿಕರೇ ಈ ಕಟ್ಟಡವನ್ನು ತೆರವು ಮಾಡಿದರು.

ಟಾಪ್ ನ್ಯೂಸ್

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

BJP 2

Maharashtra Elections; ಬಿಜೆಪಿ 2ನೇ ಪಟ್ಟಿ ಬಿಡುಗಡೆ: ಇಬ್ಬರು ಎಂಎಲ್ ಎ ಗಳಿಗೆ ಕೊಕ್

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು

Israel-Iran Tensions: ಇಸ್ರೇಲ್‌ ವೈಮಾನಿಕ ದಾಳಿಗೆ ಇರಾನ್‌ ನ ಇಬ್ಬರು ಸೈನಿಕರ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Bengaluru: 3 ಅಂತಸ್ತಿನ ಅನಧಿಕೃತ ಮನೆ ಸಂಪೂರ್ಣ ಧ್ವಂಸ

12-

Kengeri ಉಪನಗರ- ಆರ್ವಿ ಕಾಲೇಜು ರಸ್ತೆ ಬಳಿ ಕಸದ ರಾಶಿ

11-dinesh

Bengaluru: ತುಪ್ಪದ 5 ಸ್ಯಾಂಪಲ್‌ಗಳಲ್ಲಿ ಅಪಾಯದ ಅಂಶಗಳು ಪತ್ತೆ: ಸಚಿವ ಗುಂಡೂರಾವ್‌

10-

Bengaluru: ಕಲಬೆರಕೆ ಆಹಾರ ಪತ್ತೆಗೆ ಮ್ಯಾಜಿಕ್‌ ಬಾಕ್ಸ್‌ ಅಳವಡಿಕೆ

9-hc

Bengaluru: ಗ್ರ್ಯಾಚುಟಿ ಮೊತ್ತಕ್ಕೆ ವಿಮೆ ಕಡ್ಡಾಯ ಆದೇಶ ರ‌ದ್ದತಿಗೆ ಮನವಿ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

1-JMM

Jharkhand; ಬಿಜೆಪಿ ನಾಯಕಿ ವಿರುದ್ಧ ನಾಲಗೆ ಹರಿ ಬಿಟ್ಟ ಕಾಂಗ್ರೆಸ್ ಶಾಸಕ ಅನ್ಸಾರಿ

ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Belekeri Port Scam: ಏನಿದು ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ; ಶಾಸಕ ಸೈಲ್‌ ಪಾತ್ರವೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.