Madikeri: ತಲಕಾವೇರಿಯಲ್ಲಿ ಸ್ವಾಮೀಜಿಗಳಿಂದ ವಿಶೇಷ ಪೂಜೆ
Team Udayavani, Oct 26, 2024, 4:18 PM IST
ಮಡಿಕೇರಿ: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವಣ ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಆರಂಭಗೊಂಡು ಶತಮಾನ ಪೂರೈಸಿದೆ. ಈ ಸಂಕಷ್ಟದಿಂದ ಜನರು ನೆಮ್ಮದಿಯನ್ನು ಕಳೆೆದುಕೊಂಡಿದ್ದು, ಸುದೀರ್ಘ ಅವಧಿಯಿಂದ ನಡೆದುಕೊಂಡು ಬಂದಿರುವ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಬೇಕಾಗಿದೆ ಎಂದು ಮೈಸೂರು ಆದಿ ಚುಂಚನಗಿರಿ ಶಾಖಾ ಮಠದ ಶ್ರೀ ಸೋಮನಾಥ ಸ್ವಾಮೀಜಿ ತಿಳಿಸಿದ್ದಾರೆ.
ತಲಕಾವೇರಿಯಲ್ಲಿ ಕಾವೇರಿ ನದಿ ರಕ್ಷಣ ಸಮಿತಿಯಿಂದ ಆಯೋಜಿತ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು, ಮಾತೆ ಕಾವೇರಿಗೆ ಪೂಜೆ ನೆರವೇರಿಸಿ, ನದಿ ವಿವಾದ ಪರಿಹಾರಕ್ಕೆ ನೋಂದಾವಣೆ ಮಾಡಿರುವ ಸಮಿತಿಗೆ ಶುಭ ಹಾರೈಸಿ ಅವರು ಮಾತನಾಡಿದರು.
ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ರಾಜ್ಯದ ವಿವಿಧ ಮಠಾಧೀಶರು, ಸರ್ವೋಚ್ಚ ನ್ಯಾಯಾಲಯ ಮತ್ತು ರಾಜ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ನೀರಾವರಿ ತಜ್ಞರು, ಕಾನೂನು ತಜ್ಞರನ್ನು ಒಳಗೊಂಡ ನೂರು ಮಂದಿಯ ವಿಶೇಷ ಸಮಿತಿಯನ್ನು ರಚಿಸಿ ನೋಂದಾವಣೆ ಮಾಡಲಾಗಿದೆ. ಈ ಸಮಿತಿ, ಕಾವೇರಿ ನದಿ ನೀರಿನ ಹಂಚಿಕೆ ವಿವಾದ ಪರಿಹಾರಕ್ಕೆ ಮುಂದಾಗಿರುವುದಾಗಿ ಮಾಹಿತಿ ನೀಡಿದರು. ಕಾವೇರಿ ನದಿ ವಿವಾದ ಪರಿಹಾರಕ್ಕೆ ರಚಿಸಲಾಗಿರುವ ಕಾವೇರಿ ನದಿ ರಕ್ಷಣ ಸಮಿತಿಯನ್ನು ಬೆಂಗಳೂರಿನಲ್ಲಿ ನೋಂದಾವಣೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್ಗೆ ಬರ್ತಾರೆ: ಮಧು
By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಗೆಲುವು; ಬೇಳೂರು
Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು
Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ
Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.