ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಸಂಸ್ಕೃತಿ ಉಳಿವಿಗಾಗಿ ಕಿತ್ತೂರು ಚೌಕಿಮಠದ ಅಭಿವೃದ್ಧಿಯಾಗಬೇಕು

Team Udayavani, Oct 26, 2024, 5:04 PM IST

ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ

ಉದಯವಾಣಿ ಸಮಾಚಾರ
ಚನ್ನಮ್ಮನ ಕಿತ್ತೂರು: ಮಕ್ಕಳನ್ನು ಮತ್ತು ಯುವಕರನ್ನು ಇಂತಹ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ತೊಡಗಿಸಿಕೊಂಡು
ಕಾಯಕ್ರಮಗಳನ್ನು ಮಾಡಬೇಕು. ಇದರಿಂದ ಅವರಲ್ಲಿ ಇತಿಹಾಸ ಪ್ರಜ್ಞೆ, ದೇಶಾಭಿಮಾನ ಬೆಳೆಯುತ್ತದೆ ಶಾಸಕ ಬಾಬಾಸಾಹೇಬ
ಪಾಟೀಲ ಹೇಳಿದರು.

ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಡೆದ ಕಿತ್ತೂರು ರಾಣಿ ಚನ್ನಮ್ಮಾಜಿಯ 200ನೇ ವಿಜಯೋತ್ಸವದ ಸಂಭ್ರಮಾಚಾರಣೆಯ ಕಿತ್ತೂರು ಉತ್ಸವದ ಅಂಗವಾಗಿ “ಕಿತ್ತೂರು ರಾಣಿ ಸಂಸ್ಥಾನ’ದ ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ ಕಾಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಶೋಧಕ ಡಾ| ಸಂತೋಷ ಹಾನಗಲ್ಲ ಆಶಯ ನುಡಿಗಳನ್ನಾಡಿ, ಕೆಲವರು ರಾಣಿ ಚನ್ನಮ್ಮಳನ್ನು ಒಂದು ಸಮುದಾಯಕ್ಕೆ ಮಾತ್ರ ಸೀಮಿತಗೊಳಿಸುತ್ತಿದ್ದಾರೆ. ಇಂತಹ ಆಲೋಚನೆಗಳನ್ನು ಕೈಬಿಡಬೇಕು ಎಂದರು. ದೂರದ ವಿಜಯಪುರದಲ್ಲಿರುವ ರಾಣಿ
ಚನ್ನಮ್ಮ ಅಧ್ಯಯನ ಪೀಠವನ್ನು ಕಿತ್ತೂರು ನಾಡಿಗೆ ಸ್ಥಳಾಂತರಿಸಿದರೆ, ಕಿತ್ತೂರು ಇತಿಹಾಸವನ್ನು ಮತ್ತಷ್ಟು ಹೆಕ್ಕಿ ತೆಗೆಯಲು
ಅನುಕೂಲವಾಗುವುದು ಎಂದು ಹೇಳಿದರು.

ರಾಣಿ ಚನ್ನಮ್ಮಳ ತವರೂರು ಕಾಕತಿಯಲ್ಲಿ ಇರುವ ಮನೆ ಸಂಪೂರ್ಣ ಹಾಳಾಗಿದ್ದು, ಅದನ್ನು ಅಭಿವೃದ್ಧಿ ಮಾಡುವ ಕಾರ್ಯ
ತ್ವರಿತವಾಗಿ ಪ್ರಾರಂಭವಾಗಬೇಕು ಎಂದ ಅವರು, ಗುರು ಸಂಸ್ಕೃತಿ ಉಳಿವಿಗಾಗಿ ಕಿತ್ತೂರು ಚೌಕಿಮಠದ ಅಭಿವೃದ್ಧಿಯಾಗಬೇಕು
ಎಂದು ತಮ್ಮ ಅಭಿಪ್ರಾಯ ವ್ಯಕ್ತ ಪಡಿಸಿದರು.

ಶಿಕ್ಷಣ ಇಲಾಖೆ ನಿವೃತ್ತ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಮಾತನಾಡಿ, ಇಡೀ ದೇಶಕ್ಕೆ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು
ಹಚ್ಚಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ ಎಂದ ಅವರು, ಆಧಾರ ಸಹಿತ ಸಂಶೋಧನೆ ಮಾಡಿದ ಇತಿಹಾಸಕಾರರಿಗೆ ಗೌರವ
ಸೂಚಿಸುವ ಕೆಲಸವಾಗಬೇಕು ಎಂದರು.

ಖ್ಯಾತ ವಿದ್ವಾಂಸರು ಬಾಳಣ್ಣ ಶೀಗಿಹಳ್ಳಿ ಮಾತನಾಡಿ, ಕಿತ್ತೂರಿಗೆ 239 ವರ್ಷಗಳ ಇತಿಹಾಸವಿದೆ. ನಮ್ಮ ಕಿತ್ತೂರು ಸಂಸ್ಥಾನಕ್ಕೆ
ಇರುವ ಸೌಭಾಗ್ಯ ಇಡೀ ದೇಶದಲ್ಲಿ ಬೇರೆ ಯಾವ ಸಂಸ್ಥಾನ ಇಲ್ಲ. ಕಿತ್ತೂರು ರಾಣಿ ಚನ್ನಮ್ಮ ಯುದ್ದ ಪರಿಕರಗಳನ್ನು ಬಳಸಿದ
ಪ್ರಥಮ ಭಾರತದ ಮಹಿಳೆ ಎಂದು ಹೇಳಿದರು.

ಸಾಹಿತಿ ಸಿ.ಕೆ.ಜೋರಾಪೂರ ಮಾತನಾಡಿ, ಒಂದು ಸಣ್ಣ ಸಂಸ್ಥಾನ ಸೂರ್ಯ ಮುಳುಗದ ಸಾಮ್ರಾಜ್ಯ ಎಂದು ಬೀಗುತ್ತಿದ್ದ ಬ್ರಿಟಿಷರನ್ನು ಸೋಲಿಸಿ, ಅವರಲ್ಲಿ ನಡುಕ ಹುಟ್ಟಿಸುವಂತೆ ಮಾಡಿ, ಸ್ವಾತಂತ್ರ ಸಂಗ್ರಾಮಕ್ಕೆ ಕಿಚ್ಚು ಹಚ್ಚಿದದವಳು ರಾಣಿ ಚನ್ನಮ್ಮ. ಕಿತ್ತೂರು ಮಾತ್ರ ಭೂಮಿಯಾಗಿದೆ ಎಂದರು.

ಸಾಹಿತಿ ರಾಜಶೇಖರ ಕೋಟಿ ಮಾತನಾಡಿ, ಎಷ್ಟೇ ದೊಡ್ಡ ರಾಜನಿರಲಿ, ಸಾಮ್ರಾಜ್ಯವೇ ಇರಲಿ ಅವರೆಲ್ಲರಿಗೂ ಒಬ್ಬ ಗುರುಗಳು
ಇರುತ್ತಿದ್ದರು. ಅದೇ ರೀತಿ ಕಿತ್ತೂರು ಸಂಸ್ಥಾನಕ್ಕೆ ರಾಜಗುರುಗಳು ಇದ್ದರು. 1782ರಲ್ಲಿ ಮಲ್ಲಸರ್ಜ ದೇಸಾಯಿ ಕಿತ್ತೂರು ಸಂಸ್ಥಾನ
ಪೀಠವನ್ನು ಅಲಂಕರಿಸುತ್ತಾನೆ. ಅವರ ಕಾಲದಲ್ಲಿಯೇ ಮುದಿ ಮಡಿವಾಳ ಶಿವಯೋಗಿಗಳು ಕಿತ್ತೂರು ಸಂಸ್ಥಾನದ ರಾಜಗುರುಗಳಾಗಿ ರಾಜ ಮಲ್ಲಸರ್ಜನಿಗೆ ಮಾರ್ಗದರ್ಶನ ಮಾಡುತ್ತಾರೆ ಎಂದು ತಿಳಿಸಿದರು.

ಶಿಕ್ಷಣ ತಜ್ಞೆ ಡಾ| ವೀಣಾ ಬಿರಾದಾರ ಮಾತನಾಡಿ, ಕಿತ್ತೂರು ಚನ್ನಮ್ಮಳ ದೇಶಾಭಿಮಾನ ಅನನ್ಯ. ದೇಶದಲ್ಲಿ ಅನೇಕ
ರಾಜಮನೆತನಗಳು ಆಳ್ವಿಕೆ ಮಾಡಿದ್ದು, ಕಿತ್ತೂರು ಸಂಸ್ಥಾನ ದೇಶದ ಎಲ್ಲ ಮನೆತನಗಳಿಗಿಂತ ಭಿನ್ನವಾಗಿ ಆಳ್ವಿಕೆ ಮಾಡಿತ್ತು
ಎಂದರು.

ಈ ವೇಳೆ ರಾಜಶೇಖರ ಕೋಟಿ ವಿರಚಿತ “ಪವಾಡ ಪುರುಷ ಶ್ರೀ ಮಡಿವಾಳೇಶ್ವರ ಚರಿತ್ರೆ’ ಹಾಗೂ ಡಾ| ಸಿ.ಕೆ.ಜೋರಾಪೂರ ಅವರು ರಚಿಸಿದ “ಕರ್ನಾಟಕ ಇತಿಹಾಸ ಒಂದು ಇಣುಕು ನೋಟ’ ಗ್ರಂಥಗಳನ್ನು ಬಿಡುಗಡೆ ಮಾಡಲಾಯಿತು.

ಟಾಪ್ ನ್ಯೂಸ್

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Jio-Bharath

Mobile: ದೀಪಾವಳಿ ವೇಳೆ ಜಿಯೋ ಭಾರತ್ 4 ಜಿ ಫೋನ್‌ಗೆ ವಿಶೇಷ ರಿಯಾಯಿತಿ!

DK SHI NEW

Bengaluru; ಅನಧಿಕೃತ ಕಟ್ಟಡಗಳೆಲ್ಲ ನೆಲಸಮ ಮಾಡುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

1-a-rohit-bg

Test series defeat; ನಾನು ಯಾರ ಸಾಮರ್ಥ್ಯವನ್ನೂ ಅನುಮಾನಿಸುವುದಿಲ್ಲ: ರೋಹಿತ್ ಶರ್ಮ

Adulltrate-Milk

Adulterate: ಕಲಬೆರಕೆ ಹಾಲು ಮಾರಾಟಗಾರರ ಬಂಧಿಸಿದ ಪೊಲೀಸರು

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

CM Siddaramaiah: “ಮನುಷ್ಯರನ್ನು ಪ್ರೀತಿಸಿ, ದ್ವೇಷಿಸಬೇಡಿ’

CM Siddaramaiah: “ಮನುಷ್ಯರನ್ನು ಪ್ರೀತಿಸಿ, ದ್ವೇಷಿಸಬೇಡಿ’

Belagavi: Police rescued children by showing the taste of bullets to kidnappers

Belagavi: ಕಿಡ್ನ್ಯಾಪರ್ಸ್‌ ಗೆ ಗುಂಡಿನ ರುಚಿ ತೋರಿಸಿ ಮಕ್ಕಳನ್ನು ರಕ್ಷಿಸಿದ ಪೊಲೀಸರು

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

Belagavi: ಕರಾಳ ದಿನಾಚರಣೆಗೆ ಅನುಮತಿ ನೀಡಬಾರದೆಂದು ಕರವೇ ಪ್ರತಿಭಟನೆ

9-belagavi

Belagavi: ಕ್ರಾಂತಿಯ ನೆಲ ಕಿತ್ತೂರಿನಲ್ಲಿ 200ನೇ ವಿಜಯೋತ್ಸವಕ್ಕೆ ಅದ್ಧೂರಿ ಚಾಲನೆ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

Madhu Bangarappa: ಬಿಜೆಪಿಯ 18 ಶಾಸಕರು ಕಾಂಗ್ರೆಸ್‌ಗೆ ಬರ್ತಾರೆ: ಮಧು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್‌ಗೆ ಗೆಲುವು; ಬೇಳೂರು

Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar: ಗೂಡ್ಸ್ ವಾಹನ ಢಿಕ್ಕಿ; ಪಾದಚಾರಿ ಸಾವು

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

1-aree

Deepavali; ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.