Ex-minister ಗುತ್ತೇದಾರ್ ಬ್ಲ್ಯಾಕ್ಮೇಲ್: ನಲಪಾಡ್ ಬ್ರಿಗೇಡ್ ಅಧ್ಯಕ್ಷೆ, ಪತಿ ಸೆರೆ
20 ಲಕ್ಷ ರೂ.ಗಳಿಗೆ ಬೇಡಿಕೆ : ಏನಿದು ಪ್ರಕರಣ?
Team Udayavani, Oct 27, 2024, 6:48 AM IST
ಬೆಂಗಳೂರು: ನಿಂದನೆಯ ವೀಡಿಯೋ ಮತ್ತು ಆಡಿಯೋಗಳನ್ನು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ಹರಿಬಿಡುವುದಾಗಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಕಲು ಬರಗಿ ಘಟಕದ ನಲಪಾಡ್ ಬ್ರಿಗೇಡ್ನ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಬೆಂಗ ಳೂರು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಮಂಜುಳಾ ಪಾಟೀಲ್ ಹಾಗೂ ಆಕೆಯ ಪತಿ ಶಿವರಾಜ್ ಪಾಟೀಲ್ ಬಂಧಿತರು. ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್ ಅವರ ಪುತ್ರ ರಿತೇಶ್ ಗುತ್ತೇದಾರ್ ತಮ್ಮ ತಂದೆಯನ್ನು ಈ ದಂಪತಿ ಬ್ಲ್ಯಾಕ್ವೆುàಲ್ ಮೂಲಕ ಹಣ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಶನಿವಾರ ನಗರದ ಗರುಡಾ ಮಾಲ್ ಬಳಿ ಬಂಧಿಸಿದರು. ಬಳಿಕ ವೈದ್ಯಕೀಯ ಪರೀಕ್ಷೆಗೊಳಪಡಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಬಳಿಕ ಕೋರಿಕೆ ಮೇರೆಗೆ ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಆರೋಪಿಗಳನ್ನು 8 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಹಣಕ್ಕೆ ಬೇಡಿಕೆ
ಆರೋಪಿಗಳು ಮಾಲಿಕಯ್ಯ ಗುತ್ತೇದಾರ್ ತಮ್ಮನ್ನು ನಿಂದಿಸಿರುವ ಆಡಿಯೋ ಮತ್ತು ವೀಡಿಯೋಗಳ ಸಂಬಂಧ 20 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದರು. ಆರಂಭದಲ್ಲಿ ಇದನ್ನು ರಿತೇಶ್ ಗುತ್ತೆದಾರ್ ನಿರ್ಲಕ್ಷಿಸಿದ್ದರು. ಆದರೆ ಆರೋಪಿಗಳು ಅ. 23 ಹಾಗೂ 24ರಂದು ಪದೇ ಪದೆ ಕರೆ ಮಾಡಿ ಹಣ ನೀಡಿದರೆ ನಿಂದನೆ ಸಂದೇಶಗಳನ್ನು ಅಳಿಸುತ್ತೇವೆ. ಇಲ್ಲದಿದ್ದರೆ ಬಹಿರಂಗಪಡಿಸುವುದಾಗಿ ಬೆದರಿಸಿದ್ದರು.
ಏನಿದು ಪ್ರಕರಣ?
ಅ. 21ರಂದು ರಿತೇಶ್ ಗುತ್ತೇದಾರ್ಗೆ ಕರೆ ಮಾಡಿದ್ದ ಆರೋಪಿ ಮಂಜುಳಾ, ತಾನು ನಲಪಾಡ್ ಬ್ರಿಗೇಡ್ ಅಧ್ಯಕ್ಷೆ ಎಂದು ಪರಿಚಯಿಸಿಕೊಂಡಿದ್ದಳು. ನಿಮ್ಮ ತಂದೆ ಮಾಲಿಕಯ್ಯ ಗುತ್ತೇದಾರ್ ತನಗೆ ನಿಂದನೆಯ ಸಂದೇಶ ಕಳುಹಿಸುತ್ತಿದ್ದಾರೆ. ಈ ಸಂಬಂಧ ತುರ್ತಾಗಿ ನಿಮ್ಮೊಂದಿಗೆ ಚರ್ಚಿಸಬೇಕೆಂದು ಕೇಳಿಕೊಂಡಿದ್ದಳು. ಅನಂತರ ನಗರದ ಕೊಡಿಗೇಹಳ್ಳಿಯ ಖಾಸಗಿ ಹೊಟೇಲ್ನಲ್ಲಿ ಆರೋಪಿಗಳು ರಿತೇಶ್ ಅವರನ್ನು ಭೇಟಿ ಮಾಡಿದ್ದರು ಎಂದು ರಿತೇಶ್ ಗುತ್ತೇದಾರ್ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Assembly By Election: ನಿಖಿಲ್ ಗೆಲುವಿಗೆ ಬಿಜೆಪಿ-ಜೆಡಿಎಸ್ ಜಂಟಿ ಕಾರ್ಯತಂತ್ರ
By election ಹೊಸ್ತಿಲಲ್ಲಿ ಕಾಂಗ್ರೆಸ್ಗೆ ಮುಜುಗರ ತಂದ ಸೈಲ್ ಪ್ರಕರಣ
Belagavi; ಬಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು
Deepavali, ರಾಜ್ಯೋತ್ಸವ ಪ್ರಯುಕ್ತ ಸಾಲು ಸಾಲು ರಜೆ : ಖಾಸಗಿ ಬಸ್ ಯಾನ ದರ ದುಪ್ಪಟ್ಟು!
MUST WATCH
ಹೊಸ ಸೇರ್ಪಡೆ
Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ
WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ
New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.