Mangaluru: ಪೊಲೀಸ್‌ ಅಧಿಕಾರಿ ಹೆಸರಲ್ಲಿ ಕರೆ ಮಾಡಿ 50 ಲ.ರೂ. ವಂಚನೆ

ಕಿರುಕುಳದ ಬಗ್ಗೆ ದೂರು ದಾಖಲಾಗಿದ್ದು ಠಾಣೆಗೆ ಬರಬೇಕೆಂದ

Team Udayavani, Oct 27, 2024, 7:15 AM IST

Frud

ಮಂಗಳೂರು: ಪೊಲೀಸ್‌ ಅಧಿಕಾರಿಯ ಹೆಸರಿನಲ್ಲಿ ಕರೆ ಮಾಡಿ ವ್ಯಕ್ತಿಯೋರ್ವರಿಂದ 50 ಲಕ್ಷ ರೂ.ಗಳನ್ನು ವರ್ಗಾಯಿಸಿಕೊಂಡು ವಂಚಿಸಿರುವ ಘಟನೆ ನಡೆದಿದೆ.

ಅ.11ರಂದು ಅಪರಾಹ್ನ ದೂರುದಾರರಿಗೆ ಕರೆ ಮಾಡಿದ ಅಪರಿಚಿತ ವ್ಯಕ್ತಿಯೋರ್ವ ಅತನನ್ನು ಮಹಾರಾಷ್ಟ್ರದ ಪೊಲೀಸ್‌ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ವಿನಯ ಕುಮಾರ ಎಂದು ಪರಿಚಯಿಸಿಕೊಂಡಿದ್ದ. ಕಿರುಕುಳದ ಬಗ್ಗೆ ನಿಮ್ಮ ಮೇಲೆ ದೂರು ದಾಖಲಾಗಿದ್ದು ಠಾಣೆಗೆ ಬರಬೇಕು ಎಂದು ತಿಳಿಸಿದ. ಆಗ ದೂರುದಾರರು ತಾನು ಠಾಣೆಗೆ ಬರುವುದಿಲ್ಲ ಎಂದಾಗ, ಮೇಲಧಿಕಾರಿಗಳು ಕರೆ ಮಾಡುತ್ತಾರೆ ಎಂದ. ಬಳಿಕ ಆಕಾಶ ಕುಲ್ಲಹಾರಿ ಎಂದು ಪರಿಚಯಿಸಿಕೊಂಡ ವ್ಯಕ್ತಿಯೋರ್ವ ತಾನು ಸಿಬಿಐನಿಂದ ಕರೆ ಮಾಡುತ್ತಿರುವುದಾಗಿ ತಿಳಿಸಿದ. ನರೇಶ್‌ ಗೋಯೆಲ್‌ ಎಂಬವರ ಮನೆಯನ್ನು ಜಪ್ತಿ ಮಾಡುವಾಗ ನಿಮ್ಮ ಎಟಿಎಂ ಕಾರ್ಡ್‌ ಸಿಕ್ಕಿದೆ.

ಅದರಲ್ಲಿ 20 ಜನರು ಒಟ್ಟು 2 ಕೋ.ರೂ.ಗಳನ್ನು ನಿಮ್ಮ ಮುಂಬಯಿಯ ಖಾತೆಯಲ್ಲಿ ಹೂಡಿಕೆ ಮಾಡಿದ್ದಾರೆ. ಆ ಬಗ್ಗೆ ಮನಿ ಲ್ಯಾಂಡರಿಂಗ್‌ ಪ್ರಕರಣ ಕೂಡ ನಿಮ್ಮ ಮೇಲೆ ದಾಖಲಾಗಿದೆ. ಹಾಗಾಗಿ ಸಿಬಿಐನವರು ಬಂಧಿಸುತ್ತಾರೆ. ನಿಮ್ಮ ದಾಖಲಾತಿಗಳನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಸಬೇಕು. ನಿಮಗೆ ಬರಲು ಅಸಾಧ್ಯವಾದರೆ ನಾನೇ ಆನ್‌ಲೈನ್‌ ಮೂಲಕ ತನಿಖೆ ಮಾಡುತ್ತೇನೆ ಎಂದು ದೂರುದಾರರಿಗೆ ಹೇಳಿದ.

ಮರುದಿನ ಮತ್ತೆ ಕರೆ ಮಾಡಿದ ಆಕಾಶ ಕುಲ್ಲಹಾರಿ ಬ್ಯಾಂಕ್‌ ಖಾತೆ ವಿವರಗಳನ್ನು ಕೇಳಿದ. ದೂರುದಾರರು ಎಲ್ಲ ವಿವರಗಳನ್ನು ನೀಡಿದ್ದರು. ಆಗ ಕರೆ ಮಾಡಿ ನಿಮ್ಮ ಖಾತೆಯಲ್ಲಿರುವ ಎಲ್ಲ ಹಣವನ್ನು ಆರ್‌ಬಿಐಗೆ ವರ್ಗಾಯಿಸಬೇಕಾಗಿದೆ. ಆದರೆ ಆ ರೀತಿ ವರ್ಗಾಯಿಸಿದರೆ ನಿಮ್ಮ ಮೇಲೆ ಸಂದೇಹ ಬರುತ್ತದೆ. ಹಾಗಾಗಿ ಶಿವಾನಿ ಎಂಟರ್‌ಪ್ರೈಸಸ್‌ನ ಖಾತೆಗೆ ವರ್ಗಾವಣೆ ಮಾಡಿ ಎಂದು ಬ್ಯಾಂಕ್‌ ಖಾತೆ ಸಂಖ್ಯೆ ನೀಡಿದ.

ದೂರುದಾರರು ಅ. 19ರಂದು ಅವರ ಖಾತೆಯಿಂದ 50 ಲಕ್ಷ ರೂ. ಹಣವನ್ನು ಆಕಾಶ ಕುಲ್ಲಹಾರಿ ನೀಡಿದ ಖಾತೆಗೆ ವರ್ಗಾವಣೆ ಮಾಡಿದ್ದರು. ಹಣ ವರ್ಗಾವಣೆಯ ರಶೀದಿಯನ್ನು ದೂರುದಾರರು ಆಕಾಶ ಕಲ್ಲಹಾರಿಗೆ ವಾಟ್ಸ್‌ಆ್ಯಪ್‌ಮೂಲಕ ಕಳುಹಿಸಿದ್ದರು. ಆಗ ನಿಮ್ಮ ಹಣವನ್ನು ಮೂರು ದಿನಗಳ ಅನಂತರ ಮರುಪಾವತಿ ಮಾಡುತ್ತೇನೆಂದು ತಿಳಿಸಿದ.

ಅ. 23ರಂದು ದೂರುದಾರರು ಆಕಾಶ ಕುಲ್ಲಹಾರಿಗೆ ಕರೆ ಮಾಡಿ ಹಣದ ಬಗ್ಗೆ ವಿಚಾರಿಸಿದಾಗ ಹಣವನ್ನು ನಿಮ್ಮ ಖಾತೆಗೆ ವರ್ಗಾವಣೆ ಮಾಡುತ್ತೇನೆ. ಆದರೆ ನೀವು ಬೇರೊಂದು ಬ್ಯಾಂಕ್‌ ಖಾತೆಗೆ ಕೆಲವು ಮೊತ್ತವನ್ನು ವರ್ಗಾವಣೆ ಮಾಡಬೇಕೆಂದು ತಿಳಿಸಿದ. ಆ ಸಂದರ್ಭದಲ್ಲಿ ದೂರುದಾರರಿಗೆ ಸಂದೇಹ ಉಂಟಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!

JioHotstar domain: ಜಿಯೋ ಹಾಟ್‌ಸ್ಟಾರ್‌ ಡೊಮೈನ್‌ ನಮ್ಮದು: ದುಬೈ ಮಕ್ಕಳ ವಾದ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು

Mangaluru: ಸಿ.ಟಿ. ರವಿ, ಯತ್ನಾಳ್‌, ಸೂಲಿಬೆಲೆ ವಿರುದ್ದ ದೂರು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Mangaluru: ಜೈನಮಂದಿರದ ಮೂರ್ತಿಗಳ ಚಿನ್ನದ ಸರ ಕಳವು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Surathkal:ಯುವಕನಿಂದ ಬೆದರಿಕೆ,ಆಶ್ಲೀಲ ಮೆಸೇಜ್‌:ಯುವತಿ ಆತ್ಮಹ*ತ್ಯೆಗೆ ಯತ್ನ;ಅಪಾಯದಿಂದ ಪಾರು

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಅತ್ಯಾ*ಚಾರ ಪ್ರಕರಣ: ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

Mangaluru: ಸೈಟ್‌ ತೋರಿಸುವ ನೆಪದಲ್ಲಿ ಲೈಂಗಿಕ ಕಿರುಕುಳ: ಬಿಲ್ಡರ್‌ ವಿರುದ್ಧ ಮಹಿಳೆ ದೂರು

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Stampede at Mumbai’s Bandra train station

Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

MUDA Case: Lokayukta notice to CM Siddaramaiah after Diwali?

MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್‌?

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

Manipal: ಬೆಳ್ಳಂಬೆಳಗ್ಗೆ ಕಾರು ಅಪಘಾತ

New Delhi: An unemployed youth who made a fake bmb call to the airport was arrested

New Delhi: ವಿಮಾನ ನಿಲ್ದಾಣಕ್ಕೆ ನಕಲಿ ಬಾಂಬ್‌ ಬೆದರಿಕೆ ಹಾಕಿದ್ದ ನಿರುದ್ಯೋಗಿ ಯುವಕನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.