BBK11: ಎಲ್ಲರೂ ಊಹಿಸಿದಂತೆ ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಬಂದೇ ಬಿಟ್ರು ಆ ಸ್ಪರ್ಧಿ..
Team Udayavani, Oct 27, 2024, 7:25 AM IST
ಬೆಂಗಳೂರು: ಬಿಗ್ ಬಾಸ್ (Bigg Boss Kannada-11) ಆಟ ಶುರುವಾಗಿ ನಾಲ್ಕು ವಾರಗಳು ಕಳೆದಿವೆ. ನಾಲ್ಕನೇ ವಾರದಲ್ಲಿ ದೊಡ್ಮನೆಯಿಂದ ಒಬ್ಬ ಸ್ಪರ್ಧಿ ಎಲಿಮಿನೇಟ್ ಅಗಲಿದ್ದಾರೆ.
ಕಿಚ್ಚ ಸುದೀಪ್ (Kiccha Sudeep) ಅವರ ಅನುಪಸ್ಥಿತಿಯಲ್ಲಿ ಈ ವಾರದ ವೀಕೆಂಡ್ ನಡೆಯಲಿದೆ. ಆದರೆ ಮನೆಯಿಂದ ಆಚೆ ಹೋಗುವುದು ಮಾತ್ರ ಅಧಿಕೃತವಾಗಿದೆ.
ಆಟ ಮುಂದುವರೆಯುತ್ತಿದ್ದಂತೆ ಒಬ್ಬೊಬ್ಬ ಸ್ಪರ್ಧಿಗಳು ಬಿಗ್ ಬಾಸ್ ಟ್ರೋಫಿ ಗೆಲ್ಲುವ ರೇಸ್ ನಿಂದ ಹೊರಬೀಳುತ್ತಿದ್ದಾರೆ.
ಭವ್ಯ, ಚೈತ್ರ, ಗೌತಮಿ, ಹಂಸ, ಮಂಜು, ಮಾನಸ, ಮೋಕ್ಷಿತಾ, ಶಿಶಿರ್ ಮತ್ತು ಗೋಲ್ಡ್ ಸುರೇಶ್ ಈ ವಾರ ಮನೆಯಿಂದ ಆಚೆ ಬರಲು ನಾಮಿನೇಟ್ ಆಗಿದ್ದರು.
ಇವರುಗಳ ಪೈಕಿ ಒಬ್ಬರು ಇವತ್ತು ಬಿಗ್ ಬಾಸ್ ಮನೆಯಿಂದ ಅಚೆ ಬರಲಿದ್ದಾರೆ. ಮೂಲಗಳ ಪ್ರಕಾರ ನಾಮಿನೇಟ್ ಆಗಿರುವ ಪೈಕಿ ಮಾನಸ ಅವರಿಗೆ ಅತಿ ಕಡಿಮೆ ವೋಟ್ ಬಿದ್ದಿದ್ದು, ಅವರು ಈ ವಾರ ಮನೆಯಿಂದ ಆಚೆ ಬರಲಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಕೆಲ ದಿನದಿಂದ ಮಾನಸ ಅವರು ಬಿಗ್ ಬಾಸ್ ಮನೆಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತಿದ್ದಾರೆ. ಅವರು ಮನೆಯಲ್ಲಿ ಯಾವುದರಲ್ಲೂ ಸರಿಯಾಗಿ ಭಾಗಿಯಾಗುತ್ತಿಲ್ಲ. ಇದಕ್ಕಿಂತ ಅವರು ಮನೆಯಿಂದ ಆಚೆ ಬರುವುದೇ ಉತ್ತಮವೆಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದರು.
ಇದಲ್ಲದೆ ದೊಡ್ಮನೆಯ ಸ್ಪರ್ಧಿಗಳಲ್ಲೂ ಮಾನಸ ಅವರು ದೊಡ್ಡ ಧ್ವನಿಯಲ್ಲಷ್ಟೇ ಮಾತನಾಡುತ್ತಾರೆ. ಯಾವುದರಲ್ಲೂ ಮುಂದೆ ಬರಲ್ಲ ಎನ್ನುವ ಅಭಿಪ್ರಾಯವಿತ್ತು.
ಹೀಗಾಗಿ ಮಾನಸ ಅವರು ದೊಡ್ಮನೆಯಿಂದ ಇವತ್ತು ಆಚೆ ಬರಲಿದ್ದಾರೆ ಎನ್ನಲಾಗಿದೆ.
ಬಿಗ್ ಬಾಸ್ ಶುರುವಾದ ನಾಲ್ಕೇ ವಾರದಲ್ಲಿ ನಾಲ್ಕು ಸ್ಪರ್ಧಿಗಳು ಆಚೆ ಬಂದಿದ್ದಾರೆ. ಮೊದಲಿಗೆ ಯುಮನಾ, ಆ ಬಳಿಕ ನಿಯಮದ ಉಲ್ಲಂಘನೆ ಮಾಡಿದ ಜಗದೀಶ್, ರಂಜಿತ್ ಈಗ ಮಾನಸ ಅವರು ಆಚೆ ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಅಣ್ಣ ತಂಗಿಗೆ ಸಂಬಂಧ ಕಟ್ಟಿ ಮಾತನಾಡ್ತಾರೆ.. ಮಂಜು ವಿರುದ್ಧ ಭವ್ಯ ಗಂಭೀರ ಆರೋಪ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
BBK11: ಮಂಜು ಬಿಗ್ ಬಾಸ್ ಮನೆಯ ಫಿಟ್ಟಿಂಗ್ ಮಾಸ್ಟರ್ ಎಂದ ಚೈತ್ರಾ
BBK11: ಬಿಗ್ ಬಾಸ್ ಮನೆಗೆ ಬಂದು ಧಿಕ್ಕಾರ ಹಾಕಿದ ಜನಸಾಮಾನ್ಯರು..! ಅಂಥದ್ದೇನಾಯಿತು?
BBK11: ಬಿಗ್ ಬಾಸ್ ಮನೆಯಲ್ಲಿ ಮತ್ತೆ ಹೊಡೆದಾಟ; ಅರ್ಧದಲ್ಲೇ ನಿಂತೋಯಿತು ಟಾಸ್ಕ್
MUST WATCH
ಹೊಸ ಸೇರ್ಪಡೆ
Yello Jogappa Nin Aramane Movie; ಜೋಗಪ್ಪನ ಅರಮನೆಯಿಂದ ಮತ್ತೊಂದು ಹಾಡು ಬಂತು
Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು
Mumbai: ಬಾಂದ್ರಾ ಟರ್ಮಿನಸ್ ರೈಲು ನಿಲ್ದಾಣದಲ್ಲಿ ಕಾಲ್ತುಳಿತ; ಹಲವರಿಗೆ ಗಾಯ
WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ
MUDA Case: ದೀಪಾವಳಿ ಬಳಿಕ ಸಿಎಂ ಸಿದ್ದರಾಮಯ್ಯಗೆ ಲೋಕಾ ನೋಟಿಸ್?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.