WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ


Team Udayavani, Oct 27, 2024, 9:41 AM IST

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

ಪುಣೆ: ಮತ್ತೊಮ್ಮೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ (World Test Championship) ಫೈನಲ್‌ ತಲುಪುವ ಆಕಾಂಕ್ಷೆಯೊಂದಿಗೆ ಅಜೇಯವಾಗಿ ಸಾಗುತ್ತಿದ್ದ ಟೀಂ ಇಂಡಿಯಾಗೆ (Team India) ಸತತ ಎರಡು ಪಂದ್ಯಗಳಲ್ಲಿ ಸೋಲಾಗಿದೆ. ಪ್ರವಾಸಿ ನ್ಯೂಜಿಲ್ಯಾಂಡ್‌ ವಿರುದ್ದದ ತವರಿನ ಸರಣಿಯಲ್ಲೇ ರೋಹಿತ್‌ ಪಡೆ ಸೋಲು ಕಂಡಿದೆ.

ನ್ಯೂಜಿಲ್ಯಾಂಡ್‌ ವಿರುದ್ಧ 2ನೇ ಟೆಸ್ಟ್‌ ಪಂದ್ಯದಲ್ಲಿನ ಸೋಲಿನ ಬಳಿಕವೂ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಅಂಕಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲೇ ಉಳಿದಿದೆ. ಆದರೆ ಜಯದ ಪ್ರತಿಶತ ಲೆಕ್ಕಾಚಾರದಲ್ಲಿ ಕುಸಿತ ಕಂಡಿದೆ. 2ನೇ ಟೆಸ್ಟ್‌ಗೂ ಮುನ್ನ ಶೇ.68.06ರಷ್ಟಿದ್ದ ಪ್ರತಿಶತ ಪ್ರಮಾಣ ಸದ್ಯ ಶೇ.62.82ಕ್ಕಿಳಿದಿದೆ.

ಸದ್ಯ ಭಾರತ 13 ಪಂದ್ಯಗಳಿಂದ 98 ಅಂಕ ಹೊಂದಿದೆ. ಆದಾಗ್ಯೂ, ರೋಹಿತ್ ಪಡೆಯು ಇನ್ನೂ ಡಬ್ಲ್ಯುಟಿಸಿ (WTC) ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ (62.50 ಅಂಕ) ವಿರುದ್ಧ ಸಣ್ಣ ಅಂತರದಿಂದ ಮುನ್ನಡೆ ಸಾಧಿಸಿದೆ.

2012ರ ಬಳಿಕ ಮೊದಲ ತವರು ಟೆಸ್ಟ್ ಸರಣಿಯ ಸೋಲನ್ನು ಅನುಭವಿಸಿದರೂ, ಲಾರ್ಡ್ಸ್‌ ನಲ್ಲಿ ನಡೆಯಲಿರುವ ಡಬ್ಲ್ಯೂಟಿಸಿ ಫೈನಲ್‌ ಗೆ ಭಾರತದ ಅವಕಾಶಗಳು ಇನ್ನೂ ಹಿಡಿತದಲ್ಲಿಯೇ ಉಳಿದಿವೆ. ಮುಂದಿನ ಕೆಲವು ಫಲಿತಾಂಶಗಳು ಭಾರತದ ದಾರಿಯಲ್ಲಿ ಹೋದರೆ, ಮತ್ತಷ್ಟು ಪಂದ್ಯಗಳನ್ನು ಕೈಚೆಲ್ಲದಿದ್ದರೆ, ಭಾರತ ಫೈನಲ್‌ ತಲುಪಬಹುದು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯವನ್ನು ಆಡಲಿದೆ. ಇದು ನಡೆಯುತ್ತಿರುವ ಡಬ್ಲ್ಯೂಟಿಸಿ ಸೈಕಲ್‌ ನಲ್ಲಿ ಭಾರತದ ಕೊನೆಯ ತವರು ಟೆಸ್ಟ್ ಆಗಿರುತ್ತದೆ .ಈ ಪಂದ್ಯದ ನಂತರ ರೋಹಿತ್ ಶರ್ಮಾ ಮತ್ತು ಸಹ ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸುತ್ತಾರೆ.

ಭಾರತ ಇತರರನ್ನು ಅವಲಂಬಿಸದೆ ಫೈನಲ್‌ಗೆ ಅರ್ಹತೆ ಪಡೆಯಲು ಬಯಸಿದರೆ, ತಂಡವು ತನ್ನ ಉಳಿದ ಆರು ಪಂದ್ಯಗಳಲ್ಲಿ ಮತ್ತೊಂದು ಸೋಲನ್ನು ಅನುಭವಿಸಲು ಸಾಧ್ಯವಿಲ್ಲ. ಕಿವೀಸ್ ವಿರುದ್ಧದ ಎರಡನೇ ಟೆಸ್ಟ್‌ನಲ್ಲಿ ಸೋತ ನಂತರ, ಭಾರತವು ಈಗ 71.05 ಅಂಕದೊಂದಿಗೆ ಫೈನಲ್‌ ತಲುಪಲು ಗರಿಷ್ಠ ಒಂದು ಡ್ರಾ ಮತ್ತು ಐದು ಗೆಲುವುಗಳನ್ನು ಮಾತ್ರ ನಿಭಾಯಿಸಬಲ್ಲದು.

ಸದ್ಯ ಭಾರತ, ಆಸ್ಟ್ರೇಲಿಯಾ, ದ.ಆಫ್ರಿಕಾಕಾ, ನ್ಯೂಜಿಲ್ಯಾಂಡ್‌ ತಂಡಗಳ ನಡುವೆ ಫೈನಲ್‌ಗೇರಲು ನೇರ ಪೈಪೋಟಿಯಿದೆ. ಭಾರತಕ್ಕಿನ್ನು 6 ಪಂದ್ಯಗಳು ಬಾಕಿಯಿದ್ದು, ಇದರಲ್ಲಿ 5 ಪಂದ್ಯ ಗೆದ್ದರೆ ನೇರವಾಗಿ ಫೈನಲ್‌ ಗೇರಲಿದೆ. ಇದರಲ್ಲಿ ವಿಫ‌ಲವಾದರೆ ಇತರೆ ತಂಡಗಳ ಪ್ರದರ್ಶನ ಆಧರಿಸಿ ಭಾರತದ ಫೈನಲ್‌ ಸ್ಥಾನ ನಿರ್ಧಾರವಾಗಲಿದೆ.

ಟಾಪ್ ನ್ಯೂಸ್

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

Kanpur: ನಾಪತ್ತೆಯಾಗಿ ನಾಲ್ಕು ತಿಂಗಳ ಬಳಿಕ ಯುವತಿಯ ಶವ ಪತ್ತೆ; ಘಟನೆ ಹಿಂದಿದೆ ರೋಚಕ ಕಥೆ

2

CID Show: 6 ವರ್ಷದ ಬಳಿಕ ಮತ್ತೆ ಶುರುವಾಗಲಿದೆ ಜನಪ್ರಿಯ ʼಸಿಐಡಿʼ ಶೋ

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು

Tragic: ಬೆಂಕಿ ಅವಘಡ; ಜತೆಯಲ್ಲಿ ಮಲಗಿದ್ದ ನಾಲ್ವರು ಸ್ನೇಹಿತರು ಸುಟ್ಟುಕರಕಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

14

Ranji Trophy: ಕರ್ನಾಟಕದ ಬೌಲಿಂಗ್‌ ದಾಳಿಗೆ ಬಿಹಾರ ತತ್ತರ

1-hockey

Sultan of Johor Cup men’s hockey: ನ್ಯೂಜಿಲ್ಯಾಂಡ್ ಗೆ ಸೋಲುಣಿಸಿ ಕಂಚು ಗೆದ್ದ ಭಾರತ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Jani Master: ಜೈಲಿನಿಂದ ಹೊರಬಂದು ʼಸತ್ಯʼ ಎಂದಿಗೂ ನಶಿಸುವುದಿಲ್ಲ ಎಂದ ಜಾನಿ ಮಾಸ್ಟರ್

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.