Kundapura: ಟೆನಿಸ್‌ ಬಾಲ್‌ ಕ್ರಿಕೆಟ್‌ ಆಡುತ್ತಿದ್ದ ಹುಡುಗನೀಗ ರಣಜಿ ಆಟಗಾರ

ಮೂಡುಗಿಳಿಯಾರಿನ ಅಭಿಲಾಷ್‌ ಶೆಟ್ಟಿಗೆ ಅವಕಾಶ;ಅಭಿಮನ್ಯು ಮಿಥುನ್‌ ಗರಡಿಯಲ್ಲಿ ಬೆಳೆದ ಎಡಗೈ ವೇಗಿ

Team Udayavani, Oct 27, 2024, 2:20 PM IST

2

ಕುಂದಾಪುರ: ಕುಂದಾಪುರ ಭಾಗದಲ್ಲಿ ಹೆಸರುವಾಸಿಯಾದ ಟೆನಿಸ್‌ಬಾಲ್‌ ಕ್ರಿಕೆಟ್‌ ಆಡುತ್ತ ಮೇಲೇರಿದ ಮೂಡುಗಿಳಿಯಾರಿನ ಎಡಗೈ ವೇಗದ ಬೌಲರ್‌ ಅಭಿಲಾಷ್‌ ಶೆಟ್ಟಿ ಈಗ ರಾಜ್ಯ ರಣಜಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

‘ಫ್ರೆಂಡ್ಸ್‌ ಗಿಳಿಯಾರು’ ಕ್ರಿಕೆಟ್‌ ತಂಡದ ಆಟಗಾರನಾಗಿದ್ದ ಅಭಿಲಾಷ್‌ ಶೆಟ್ಟಿ, ಆಳ್ವಾಸ್‌ನಲ್ಲಿ ಪಿಯುಸಿಗೆ ಸೇರಿದ ಅನಂತರದಿಂದ ಕ್ರಿಕೆಟ್‌ ಅನ್ನು ಗಂಭೀರವಾಗಿ ಪರಿಗಣಿಸಿದರು. ಅಲ್ಲಿಂದ ಮಂಗಳೂರು ವಲಯ, ರಾಜ್ಯ ಜೂನಿಯರ್‌ ತಂಡ, ಅಂಡರ್‌-23, ಅಂಡರ್‌-25, ಮಹಾರಾಜ ಟ್ರೋಫಿ ಟಿ20 ಪಂದ್ಯಾವಳಿ… ಹೀಗೆ ಹಂತ ಹಂತವಾಗಿ ಒಂದೊಂದೇ ಮೆಟ್ಟಿಲು ಹತ್ತುತ್ತ ಸಾಗಿದ 26 ವರ್ಷದ ಅಭಿಲಾಷ್‌ ಈಗ ರಣಜಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಮೂಡುಗಿಳಿಯಾರಿನ ರಾಮ ಶೆಟ್ಟಿ-ಗುಣರತ್ನಾ ಶೆಟ್ಟಿ ದಂಪತಿಯ ಪುತ್ರನಾಗಿರುವ ಅಭಿಲಾಷ್‌, ಮೂಡುಗಿಳಿಯಾರು ಶಾಲೆಯಲ್ಲಿ ಪ್ರಾಥಮಿಕ, ಕೋಟ ವಿವೇಕದಲ್ಲಿ ಪ್ರೌಢ, ಆಳ್ವಾಸ್‌ನಲ್ಲಿ ಪಿಯುಸಿ ಹಾಗೂ ಬಿಕಾಂ ಪದವಿ ಪಡೆದಿದ್ದಾರೆ. ತಂದೆ ಊರಲ್ಲಿ ಪುಟ್ಟ ಕ್ಯಾಂಟೀನ್‌ ನಡೆಸುತ್ತಿದ್ದಾರೆ. ಇವರ ಸಾಧನೆಯ ಹಿಂದೆ ಕೋಚ್‌ಗಳಾದ ಜಯಪ್ರಕಾಶ್‌ ಅಂಚನ್‌, ನಿತಿನ್‌ ಕುಂದಾಪುರ ಅವರ ಪರಿಶ್ರಮ ಬಹಳಷ್ಟಿದೆ. ಮಾವಂದಿರಾದ ಅರುಣ್‌ ಕುಮಾರ್‌ ಶೆಟ್ಟಿ ಹಾಗೂ ರತ್ನಾಕರ್‌ ಶೆಟ್ಟಿ ಆರ್ಥಿಕವಾಗಿ ಬೆಂಬಲವಾಗಿದ್ದರು.

ಅಭಿಮನ್ಯು ಮಿಥುನ್‌ ಶಿಷ್ಯ
ರಾಜ್ಯದ ಶ್ರೇಷ್ಠ ಬೌಲರ್‌ ಅಭಿಮನ್ಯು ಮಿಥುನ್‌ ಅವರು ಅಭಿಲಾಷ್‌ ಕ್ರಿಕೆಟ್‌ ಬದುಕಿಗೆ ಬೆಂಬಲವಾಗಿ ನಿಂತಿದ್ದಾರೆ. ‘ನನ್ನ ಬೌಲಿಂಗ್‌ನಲ್ಲಿ ಸ್ವಿಂಗ್‌, ಪೇಸ್‌, ಏನೇ ಬಂದಿದ್ದರೂ ಅದಕ್ಕೇ ಮಿಥುನ್‌ ಅಣ್ಣನೇ ಕಾರಣ. ಅವರೇ ನನ್ನ ಪಾಲಿನ ಗುರು. ಪ್ರತೀ ದಿನ ಅವರೊಂದಿಗೆ ಮಾತನಾಡುತ್ತೇನೆ’ ಎನ್ನುತ್ತಾರೆ ಅಭಿಲಾಷ್‌.

11 ಪಂದ್ಯಗಳಲ್ಲಿ 22 ವಿಕೆಟ್‌
2023ರ ಮಹಾರಾಜ ಟಿ20 ಕ್ರಿಕೆಟ್‌ ಪಂದ್ಯಾವಳಿಯ ಅದ್ಭುತ ಬೌಲಿಂಗ್‌ ಪ್ರದರ್ಶನದಿಂದ ಅಭಿಲಾಷ್‌ ಶೆಟ್ಟಿ ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದರು. 11 ಪಂದ್ಯಗಳಲ್ಲಿ 22 ವಿಕೆಟ್‌ ಉರುಳಿಸಿ ಜಂಟಿ ಅಗ್ರಸ್ಥಾನಿಯಾಗಿದ್ದರು. ಈ ಬಾರಿಯ ಟೂರ್ನಿಯಲ್ಲೂ ಮಂಗಳೂರು ಪರ ಆಡಿ, 10 ಪಂದ್ಯಗಳಿಂದ 11 ವಿಕೆಟ್‌ ಪಡೆದಿದ್ದರು.

ರೋಹಿತ್‌ ಶರ್ಮ ಮೆಚ್ಚುಗೆ
ಐಪಿಎಲ್‌ ತಂಡಗಳಾದ ಸಿಎಸ್‌ಕೆ, ಮುಂಬೈ, ಕೆಕೆಆರ್‌ ನೆಟ್‌ ಬೌಲರ್‌ ಆಗಿಯೂ ಅಭಿಲಾಷ್‌ ಗುರುತಿಸಿಕೊಂಡಿದ್ದರು.

ಮುಂಬೈ ನೆಟ್‌ ಬೌಲರ್‌ ಆಗಿದ್ದಾಗ ಭಾರತ ತಂಡದ ನಾಯಕ ರೋಹಿತ್‌ ಶರ್ಮ ಇವರ ರನ್‌ಅಪ್‌, ಔಟ್‌ ಸ್ವಿಂಗರ್, ಇನ್‌ ಸ್ವಿಂಗರ್, ಉತ್ತಮ ವೇಗವನ್ನೆಲ್ಲ ಮೆಚ್ಚಿದ್ದರು.

ಕಳೆದ ರಣಜಿ ಆವೃತ್ತಿಯ ಕೊನೆಯ ಎರಡು ಪಂದ್ಯಗಳಿಗೆ ಅಭಿಲಾಷ್‌ ಆಯ್ಕೆಯಾದರೂ, ಅಂತಿಮ 11ರಲ್ಲಿ ಅವಕಾಶ ಸಿಕ್ಕಿರಲಿಲ್ಲ. ಈಗ ನಡೆಯುತ್ತಿರುವ ಪಂದ್ಯಾವಳಿಯ ಮೊದಲ ಮೂರು ಪಂದ್ಯಗಳಲ್ಲಿ ಅವರಿಗೆ ಅವಕಾಶ ಸಿಕ್ಕಿಲ್ಲ. ಮುಂದೆ ಸಿಗುವ ನಿರೀಕ್ಷೆ ಇದೆ.

ಭಾರತ ತಂಡದ ಪರ ಆಡಬೇಕು ಅನ್ನುವ ಅಭಿಲಾಷೆಯಿದೆ. ಹಾಗಂತ ಆ ಬಗ್ಗೆ ಜಾಸ್ತಿ ಯೋಚನೆ ಮಾಡುತ್ತಿಲ್ಲ. ಸಿಕ್ಕ ಅವಕಾಶಗಳನ್ನು ಚೆನ್ನಾಗಿ ಸದುಪಯೋಗಪಡಿಸಿಕೊಂಡು, ಉತ್ತಮ ಪ್ರದರ್ಶನ ನೀಡುವುದಷ್ಟೇ ನನ್ನ ಕೆಲಸ. ಕ್ರಿಕೆಟ್‌ ಆರಂಭಿಸಿದಂದಿನಿಂದ ರಣಜಿ ಆಡುವ ಕನಸು ಇತ್ತು. ಅದೀಗ ನನಸಾಗುವ ಕಾಲ ಹತ್ತಿರವಾಗಿದೆ.
– ಅಭಿಲಾಷ್‌ ಶೆಟ್ಟಿ, ಮೂಡುಗಿಳಿಯಾರು

-ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

1-mp-lungi

Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

14

ಶೋಭಿತಾ ಜತೆ ಮದುವೆ ಹಿನ್ನೆಲೆ ಮಾಜಿ ಪತ್ನಿ ಜತೆಗಿನ ಕೊನೆಯ ಫೋಟೋ ಡಿಲೀಟ್‌ ಮಾಡಿದ ನಾಗಚೈತನ್ಯ

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

Allu Arjun: ʼಪುಷ್ಪ-2ʼಗಾಗಿ ಇದುವರೆಗೆ ಯಾರು ಕೇಳದ್ದಷ್ಟು ಸಂಭಾವನೆ ಕೇಳಿದ ಅಲ್ಲು ಅರ್ಜುನ್?

IPL 2025: Here is the list of players that Chennai Super Kings will retain

IPL 2025: ಇಲ್ಲಿದೆ ನೋಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12(1)

Kota: ದುರಸ್ತಿಗಾಗಿ ಕಾಯುತ್ತಿವೆ ಹೆದ್ದಾರಿ ಗುಂಡಿಗಳು

11

Kaup ಕೊಳಚೆ ನೀರಿಗೆ ಇಲ್ಲಿದೆ ಪರಿಹಾರ!

10

Malpe: ಸಿದ್ಧಗೊಳ್ಳುತ್ತಿವೆ ಸಾಂಪ್ರದಾಯಿಕ ಗೂಡುದೀಪಗಳು

9(2)

Udupi: ಮೂಲೆಗುಂಪಾದ ಹೊಸ ಅಗ್ನಿಶಾಮಕ ಠಾಣೆ ಬೇಡಿಕೆ

8(1)

Udupi: ಅಳಿವಿನಂಚಿನಲ್ಲಿರುವ ಪ್ರಾಚೀನ ಸ್ಮಾರಕಗಳ ರಕ್ಷಣೆಗೆ ಟೀಮ್‌ ತೌಳವ

MUST WATCH

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

ಹೊಸ ಸೇರ್ಪಡೆ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

1-mp-lungi

Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

BBK11: ಶಾಕಿಂಗ್.! ಫಿನಾಲೆವರೆಗೂ ಬರ್ತಾರೆ ಅನ್ಕೊಂಡಿದ್ದ‌ ಆ ಸ್ಪರ್ಧಿ ಇವತ್ತೇ ಮನೆಯಿಂದ ಔಟ್?

MB Patil 2

Waqf; ವಿಜಯಪುರದಲ್ಲಿ ಗೆಜೆಟ್ ದೋಷದಿಂದ ರೈತರ ಜಮೀನಿನಲ್ಲಿ ಗೊಂದಲ: ಎಂ.ಬಿ.ಪಾಟೀಲ

13

Dandeli: ಕುಡಿದ ನಶೆಯಲ್ಲಿ ಮಾತಿಗೆ ಮಾತು ಬೆಳೆದು ಹಲ್ಲೆ; ಓರ್ವನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.