Pakistan; ನಾಯಕತ್ವ ತೊರೆದ ಬಾಬರ್ ಅಜಂ: ವೈಟ್ ಬಾಲ್ ಕಪ್ತಾನನಾಗಿ ರಿಜ್ವಾನ್

ಟ್ವೀಟ್ ಮಾಡಿದ್ದ ಫಖರ್ ಕೈಬಿಟ್ಟ ಆಯ್ಕೆ ಮಂಡಳಿ.. ಬಾಬರ್ ಅಜಂ ರಾಜೀನಾಮೆಗೆ ಒತ್ತಾಯಿಸಿತೆ ಪಿಸಿಬಿ?

Team Udayavani, Oct 27, 2024, 7:09 PM IST

1-a-PK

ಲಾಹೋರ್: ಆಸ್ಟ್ರೇಲಿಯ ಮತ್ತು ಜಿಂಬಾಬ್ವೆಯ ವೈಟ್ ಬಾಲ್ ಪ್ರವಾಸಗಳಿಗೆ ಪಾಕಿಸ್ಥಾನ ತಂಡವನ್ನು ಘೋಷಿಸಲಾಗಿದ್ದು, ಬಾಬರ್ ಅಜಮ್ ಬದಲಿಗೆ ವಿಕೆಟ್ ಕೀಪರ್-ಬ್ಯಾಟರ್ ಮುಹಮ್ಮದ್ ರಿಜ್ವಾನ್ ಅವರನ್ನು ಏಕದಿನ ಮತ್ತು ಟಿ20 ನಾಯಕರನ್ನಾಗಿ ನೇಮಿಸಲಾಗಿದೆ. ಸಲ್ಮಾನ್ ಅಲಿ ಅಘಾ ಅವರನ್ನು ಉಪನಾಯಕನನ್ನಾಗಿ ನೇಮಿಸಲಾಗಿದೆ.

ಆಸ್ಟ್ರೇಲಿಯ ಪ್ರವಾಸದಲ್ಲಿ ಪಾಕಿಸ್ಥಾನ ಮೂರು ODI ಗಳು ಮತ್ತು ಟಿ20 ಗಳನ್ನು ಆಡಲಿದೆ. ನವೆಂಬರ್ 4 ರಂದು ಮೆಲ್ಬೋರ್ನ್‌ನಲ್ಲಿ ಮೊದಲ ಪಂದ್ಯ ನಡೆಯಲಿದ್ದು ನಾಯಕನಾಗಿ ರಿಜ್ವಾನ್‌ನ ತಂಡ ಮುನ್ನಡೆಸಲಿದ್ದಾರೆ.

ನವೆಂಬರ್ 24 ರಿಂದ ಡಿಸೆಂಬರ್ 5 ರವರೆಗೆ ಜಿಂಬಾಬ್ವೆ ಪ್ರವಾಸದಲ್ಲಿ ಮೂರು ODIಗಳು ಮತ್ತು ಮೂರು ಟಿ20 ಆಡಲಿದ್ದು, ಮೊದಲ ಪಂದ್ಯ ಬುಲವಾಯೊದಲ್ಲಿ ಆಡಲಾಗುತ್ತದೆ.

ಮಾಜಿ ನಾಯಕ ಬಾಬರ್ ಅಜಂ, ವೇಗಿಗಳಾದ ಶಾಹೀನ್ ಶಾ ಆಫ್ರಿದಿ ಮತ್ತು ನಸೀಮ್ ಶಾ ಅವರು ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್‌ಗಳಿಂದ ಹೊರಗುಳಿದ ನಂತರ ಆಸ್ಟ್ರೇಲಿಯ ಪ್ರವಾಸಕ್ಕಾಗಿ ತಂಡಕ್ಕೆ ಮರಳಿದ್ದಾರೆ. ಆದರೆ, ಜಿಂಬಾಬ್ವೆ ಪ್ರವಾಸಕ್ಕೆ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಹಲವು ಹೊಸ ಮುಖಗಳನ್ನು ತಂಡಕ್ಕೆ ಸೇರಿಸಲಾಗಿದ್ದು, ಹಿರಿಯ ಆಟಗಾರರಾದ ಫಖರ್ ಜಮಾನ್ ಮತ್ತು ಶಾದಾಬ್ ಖಾನ್ ಆಯ್ಕೆಯಿಂದ ವಂಚಿತರಾಗಿದ್ದಾರೆ. ಇಂಗ್ಲೆಂಡ್ ಟೆಸ್ಟ್‌ಗೆ ಆಯ್ಕೆಗಾರರು ಬಾಬರ್ ಅವರನ್ನು  ಕೈಬಿಡುವ ಮೊದಲು  ಬೆಂಬಲಿಸಿ ಟ್ವೀಟ್ ಮಾಡಿದ್ದಕ್ಕಾಗಿ ಫಖರ್ ಅವರು ಪಾಕಿಸ್ಥಾನ ಕ್ರಿಕೆಟ್ ಮಂಡಳಿಯಿಂದ ವಿಚಾರಣೆಯನ್ನು ಎದುರಿಸುತ್ತಿದ್ದಾರೆ.

ಪಿಸಿಬಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ”ಬಾಬರ್ ಅಜಂ ಅವರು ನಾಯಕರಾಗಿ ಮುಂದುವರಿಯಲು ಬಯಸಲಿಲ್ಲ. ಯಾರೂ ಅವರನ್ನು ನಾಯಕತ್ವಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಲಿಲ್ಲ” ಎಂದು ಹೇಳಿದ್ದಾರೆ.

“ಬಾಬರ್ ಒಂದು ಆಸ್ತಿ. ಅವರು ನನ್ನೊಂದಿಗೆ ಮಾತನಾಡಿ, ನಾಯಕನಾಗಿ ಮುಂದುವರಿಯಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಯಾರೂ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಾಯಿಸಲಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಇದು ಅವರ ವೈಯಕ್ತಿಕ ನಿರ್ಧಾರ. ರಾಜೀನಾಮೆ ನೀಡುವ ಮುನ್ನ ಸಲಹೆ ಕೇಳಿದ್ದರು. ಅವರು ತಮ್ಮ ಬ್ಯಾಟಿಂಗ್ ಮೇಲೆ ಕೇಂದ್ರೀಕರಿಸಲು ಬಯಸುತ್ತಾರೆ” ಎಂದು ಹೇಳಿದರು.

ಆಸ್ಟ್ರೇಲಿಯ ಪ್ರವಾಸ ಏಕದಿನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಲಿ ಅಘಾ (ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಅರಾಫತ್ ಮಿನ್ಹಾಸ್, ಬಾಬರ್ ಅಜಮ್, ಫೈಸಲ್ ಅಕ್ರಮ್, ಹ್ಯಾರಿಸ್ ರೌಫ್, ಹಸೀಬುಲ್ಲಾ (ವಿಕೆಟ್ ಕೀಪರ್), ಕಮ್ರಾನ್ ಗುಲಾಮ್, ಮೊಹಮ್ಮದ್ ಹಸ್ನೈನ್, ಮುಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಸೈಮ್ ಅಯೂಬ್, ಶಾಹೀನ್ ಶಾ ಅಫ್ರಿದಿ.

 ಟಿ20 ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಲಿ ಅಘಾ (ಉಪನಾಯಕ), ಅರಾಫತ್ ಮಿನ್ಹಾಸ್, ಬಾಬರ್ ಅಜಮ್, ಹ್ಯಾರಿಸ್ ರೌಫ್, ಹಸೀಬುಲ್ಲಾ (ವಿಕೆಟ್ ಕೀಪರ್), ಜಹಂದಾದ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮುಹಮ್ಮದ್ ಇರ್ಫಾನ್ ಖಾನ್, ನಸೀಮ್ ಶಾ, ಒಮೈರ್ ಬಿನ್ ಯೂಸುಫ್, ಸಾಹಿಬ್ಜಾದಾ ಫರ್ಹಾನ್, ಶಾಹೀನ್ ಶಾ ಆಫ್ರಿದಿ, ಸುಫ್ಯಾನ್ ಮೊಕಿಮ್, ಉಸ್ಮಾನ್ ಖಾನ್.

ಜಿಂಬಾಬ್ವೆ ಪ್ರವಾಸಕ್ಕೆ ಏಕದಿನ ತಂಡ: ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಲಿ ಅಘಾ (ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಅಬ್ರಾರ್ ಅಹ್ಮದ್, ಅಹ್ಮದ್ ದಾನಿಯಾಲ್, ಫೈಸಲ್ ಅಕ್ರಮ್, ಹ್ಯಾರಿಸ್ ರೌಫ್, ಹಸೀಬುಲ್ಲಾ (ವಿಕೆಟ್ ಕೀಪರ್), ಕಮ್ರಾನ್ ಗುಲಾಮ್, ಮೊಹಮ್ಮದ್ ಮುಹಮ್ಮದ್ ಇರ್ಫಾನ್ ಖಾನ್, ಸೈಮ್ ಅಯೂಬ್, ಶಾನವಾಜ್ ದಹಾನಿ ಮತ್ತು ತಯ್ಯಬ್ ತಾಹಿರ್.

 ಟಿ20 ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಅಹ್ಮದ್ ದನಿಯಾಲ್, ಅರಾಫತ್ ಮಿನ್ಹಾಸ್, ಹ್ಯಾರಿಸ್ ರೌಫ್, ಹಸೀಬುಲ್ಲಾ (ವಿಕೆಟ್ ಕೀಪರ್), ಜಹಾಂದದ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಹಸನೈನ್, ಮುಹಮ್ಮದ್ ಇರ್ಫಾನ್ ಖಾನ್, ಒಮೈರ್ ಬಿನ್ ಯೂಸುಫ್, ಕ್ವಾಸ್ಹಿಮ್ ಯೂಸುಫ್ , ಸುಫ್ಯಾನ್ ಮೊಕಿಮ್, ತಯ್ಯಬ್ ತಾಹಿರ್ ಮತ್ತು ಉಸ್ಮಾನ್ ಖಾನ್.

ಟಾಪ್ ನ್ಯೂಸ್

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

DKsuresh–CPY

By Election: ಎಚ್‌ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್‌

Ganapathi-Sangha

Udupi: ಗಣಪತಿ ಸಹಕಾರಿ ವ್ಯವಸಾಯಕ ಸಂಸ್ಥೆ ಸ್ಥಾಪಿಸಿದರ ಹಿಂದಿನ ಪರಿಶ್ರಮ ದೊಡ್ಡದು: ವೆರೋನಿಕಾ

1-eqw-ewq

BBK11: ಬಿಗ್ ಬಾಸ್ ಮನೆಗೆ ತಿಳಿಯಿತು ಸುದೀಪ್ ಮಾತೃ ವಿಯೋಗದ ಸುದ್ದಿ

kejriwal 3

Maharashtra Polls; ನಮಗೆ ಸ್ಪರ್ಧಿಸಬಹುದಿತ್ತು, ಆದರೆ..: ಆಪ್ ಹೇಳಿದ್ದೇನು?

Krishna-27

Udupi: ದೀಪಾವಳಿ ಪ್ರಯುಕ್ತ ಗೂಡುದೀಪ ಸ್ಪರ್ಧೆ ಉದ್ಘಾಟನೆ

1-qwe

Reliance Foundation; ನೂತನ ಆರೋಗ್ಯ ಸೇವಾ ಯೋಜನೆ ಘೋಷಿಸಿದ ನೀತಾ ಅಂಬಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: Here is the list of players that Chennai Super Kings will retain

IPL 2025: ಇಲ್ಲಿದೆ ನೋಡಿ ಚೆನ್ನೈ ಸೂಪರ್‌ ಕಿಂಗ್ಸ್‌ ಉಳಿಸಿಕೊಳ್ಳಲಿರುವ ಆಟಗಾರರ ಪಟ್ಟಿ

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

Test: ಟೀಂ ಇಂಡಿಯಾ ಕೊನೆಯ ಬಾರಿಗೆ ಟೆಸ್ಟ್‌ ಸರಣಿ ವೈಟ್‌ವಾಶ್‌ ಆಗಿದ್ದು ಯಾವಾಗ ಗೊತ್ತಾ?

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

WTC 25: ಸತತ ಎರಡು ಪಂದ್ಯ ಸೋತರೂ ಭಾರತಕ್ಕಿದೆ ಫೈನಲ್‌ ತಲುಪುವ ಅವಕಾಶ; ಹೀಗಿದೆ ಲೆಕ್ಕಾಚಾರ

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

IND-W vs NZ-W: ಇಂದು ದ್ವಿತೀಯ ಏಕದಿನ:  ಸರಣಿ ಗೆಲ್ಲಲು ವನಿತೆಯರ ಸ್ಕೆಚ್‌

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

Pro Kabaddi: ಮುಂಬಾ-ಬೆಂಗಾಲ್‌ ರೋಚಕ ಟೈ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

BBK11: ನಾಲ್ಕನೇ ವಾರದಲ್ಲಿ ಬಿಗ್ ಬಾಸ್ ಮನೆಯಿಂದ ಆಚೆ ಬರುವುದು ಯಾರು?

DKsuresh–CPY

By Election: ಎಚ್‌ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್‌

2

Puttur: ಬೀಡಿ ಕಳವು; ಆರೋಪಿ ಬಂಧನ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

15

Ullal: ಬಾವಿಗೆ ಬಿದ್ದ ಹೋರಿ; ಅಗ್ನಿಶಾಮಕ ದಳದ ಸಿಬಂದಿಯಿಂದ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.