Dravidian model ಹೆಸರಲ್ಲಿ ಲೂಟಿ; ಮೊದಲ ಬೃಹತ್ ರ್‍ಯಾಲಿಯಲ್ಲಿ ಅಬ್ಬರಿಸಿದ ವಿಜಯ್

ದೇವರ ವಿರೋಧಿ ನಿಲುವು ಒಪ್ಪುವುದಿಲ್ಲ..3 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರನ್ನು ಸೇರಿಸಿ ಹವಾ ಎಬ್ಬಿಸಿದ ನಟ,ಟಿವಿಕೆ ಸಂಸ್ಥಾಪಕ

Team Udayavani, Oct 28, 2024, 6:58 AM IST

1-wqewqe

ಚೆನ್ನೈ: ರಾಜಕೀಯ ರಂಗದಲ್ಲಿ ಸಂಪೂರ್ಣ ವಾಗಿ ತೊಡಗಿಸಿಕೊಳ್ಳುವ ಸೂಚನೆ ನೀಡಿರುವ ಪ್ರಖ್ಯಾತ ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಅಧ್ಯಕ್ಷ ವಿಜಯ್, ಭಾನುವಾರ, (ಅ27) ರಂದು ಬೃಹತ್ ರ್‍ಯಾಲಿ ನಡೆಸಿ ಹವಾ ಎಬ್ಬಿಸಿದ್ದಾರೆ.

ವಿಲ್ಲುಪುರಂ ಜಿಲ್ಲೆಯ ವಿಕ್ರವಾಂಡಿ ಬಳಿ ಟಿವಿಕೆ ಮೊದಲ ರಾಜ್ಯ ಮಟ್ಟದ ಸಮಾವೇಶದಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ವಿಜಯ್ ಅವರು ಸ್ಪಷ್ಟವಾಗಿ ಯಾವುದೇ ಹೆಸರು ಉಲ್ಲೇಖಿಸದೆ “ಪಂಥೀಯ ಮತ್ತು ಭ್ರಷ್ಟ ಶಕ್ತಿಗಳ” ವಿರುದ್ಧ ತಮ್ಮ ಪಕ್ಷವನ್ನು ಸ್ಥಾಪಿಸಿಕೊಂದಿರುವುದಾಗಿ ಹೇಳಿದರು.
ತಮ್ಮ ಪಕ್ಷವು ಸೈದ್ಧಾಂತಿಕವಾಗಿ ದ್ರಾವಿಡ ಮಾದರಿ ಹೆಸರಿನಲ್ಲಿರುವ ಭ್ರಷ್ಟ ಶಕ್ತಿಗಳ ವಿರುದ್ಧ, ರಾಜಕೀಯವಾಗಿ ಪ್ರಚೋದಿಸುವ ಮತೀಯ ಶಕ್ತಿಗಳ ವಿರುದ್ಧ ಹೋರಾಡುತ್ತದೆ ಎಂದು ಘೋಷಿಸಿದ್ದಾರೆ.ತಮಿಳುನಾಡಿನಲ್ಲಿ 2026 ರ ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ  ಅಧಿಕಾರಕ್ಕೇರಲು ಸಿದ್ಧವಾಗುತ್ತಿದೆ ಎಂದರು.

‘ಪಿರಪೊಕ್ಕುಂ ಎಲ್ಲ ಉಯಿರುಕ್ಕುಂ’ (ಹುಟ್ಟಿನಿಂದ ಎಲ್ಲಾ ಜೀವಿಗಳು ಸಮಾನರು) ಎಂದು ನಾವು ನಮ್ಮ ಸಿದ್ಧಾಂತದ ಅಡಿಪಾಯವೆಂದು ಘೋಷಿಸಿದ ಕ್ಷಣ, ನಾವು ಪಂಥೀಯ ರಾಜಕೀಯದ ವಿರುದ್ಧ ನಮ್ಮನ್ನು ಸ್ಪಷ್ಟವಾಗಿ ನಿಲ್ಲಿಸಿದ್ದೇವೆ ಮಾತ್ರವಲ್ಲದೆ, ನಮ್ಮ ಸೈದ್ಧಾಂತಿಕ ಶತ್ರುಗಳನ್ನು ಬಹಿರಂಗಪಡಿಸಿದ್ದೇವೆ. ತಮಿಳುನಾಡು ಜಾತ್ಯತೀತ ತತ್ವಗಳ ನಾಡಾಗಿರುವುದರಿಂದ ಇಲ್ಲಿಗೆ ಯಾರು ಬರಬೇಕು ಮತ್ತು ಯಾರು ಬರಬಾರದು ಎಂಬುದು ನಮ್ಮ ಜನರಿಗೆ ಚೆನ್ನಾಗಿ ತಿಳಿದಿದೆ” ಎಂದರು.

ನಮ್ಮ ಪಕ್ಷವು ಪೆರಿಯಾರ್ ಅವರಂತಹ ತಮಿಳು ಐಕಾನ್‌ಗಳ ಸಿದ್ಧಾಂತಗಳನ್ನು ಸ್ವೀಕರಿಸುತ್ತದೆ, ಆದರೆ “ದೇವರ ವಿರೋಧಿ ನಿಲುವು” ಒಪ್ಪುವುದಿಲ್ಲ ಎಂದು ಹೇಳಿದ್ದಾರೆ.

ಸೂಪರ್‌ಸ್ಟಾರ್ ನಟನ ಮೊದಲ ರಾಜಕೀಯ ರ್ಯಾಲಿಯಲ್ಲಿ 3 ಲಕ್ಷಕ್ಕೂ ಹೆಚ್ಚು ಜನರು ಸೇರಿದ್ದರು. ವಿಜಯ್ ಅವರು ಭರ್ಜರಿ ಭಾಷಣ ಮಾಡಿ ಸಿಳ್ಳೆ, ಚಪ್ಪಾಳೆ ಗಿಟ್ಟಿಸಿಕೊಂಡರು. “ನಾನು ರಾಜಕೀಯದಲ್ಲಿ ಶಿಶು ಎಂದು ಒಪ್ಪಿಕೊಳ್ಳುತ್ತೇನೆ. ಆದರೆ ಈ ಮಗು ತನ್ನ ಕೈಯಲ್ಲಿ ಹಾವು ರಾಜಕೀಯ ಹಿಡಿಯಲು ಸಿದ್ಧವಾಗಿದೆ. ನಮ್ಮ ರಾಜಕೀಯ ಯೋಜನೆ ಪಕ್ಕಾ ಪ್ರಾಯೋಗಿಕವಾಗಿದೆ ಎಂದರು.

”ಅವರು ಜನವಿರೋಧಿ ಸರಕಾರ ನಡೆಸುತ್ತಿದ್ದಾರೆ ಮತ್ತು ದ್ರಾವಿಡ ಮಾದರಿ ಸರಕಾರ ಎಂದು ಹೇಳುವ ಮೂಲಕ ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ. ಫ್ಯಾಸಿಸಂ, ಫ್ಯಾಸಿಸಂ, ಫ್ಯಾಸಿಸಂ ವಿರುದ್ಧ ಹೋರಾಡುತ್ತಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಹಾಗಾದರೆ ನೀವು ಪಾಯಸ ಆಗಿದ್ದೀರಾ?” ಎಂದು ಪ್ರಶ್ನಿಸಿದರು.

“ನಾವು ಯಾರ ಮೇಲೂ ವೈಯಕ್ತಿಕವಾಗಿ ದಾಳಿ ಮಾಡಲು ಬಂದಿಲ್ಲ. ಯೋಗ್ಯ ರಾಜಕೀಯ ದಾಳಿಗಳು ಮಾತ್ರ ಮಾಡುತ್ತೇವೆ ಎಂದರು.

ವಿಜಯ್ “ಕೂತಾಡಿ” ಎಂಬ ಪದವನ್ನು ಉಲ್ಲೇಖಿಸಿದರು.(ಕೂತಾಡಿ, ಆಡುಮಾತಿನಲ್ಲಿ ರಾಜಕೀಯಕ್ಕೆ ಪ್ರವೇಶಿಸುವ ಚಲನಚಿತ್ರ ನಟರನ್ನು ಟೀಕಿಸಲು ಬಳಸಲಾಗುತ್ತದೆ) ‘ನೀವು ನನ್ನನ್ನು ದಳಪತಿ ಎಂದು ಕರೆದರೂ ಸಹ ನಾನು ಕೆಲವರಿಗೆ ಕೇವಲ ಕೂತಾಡಿ. ಕೂತಾಡಿಗಳು ಸತ್ಯವನ್ನು ಹೇಳುತ್ತಾರೆ ಎಂದು, ಎಂ.ಜಿ. ರಾಮಚಂದ್ರನ್ ಮತ್ತು ಆಂಧ್ರಪ್ರದೇಶದ ಎನ್.ಟಿ. ರಾಮರಾವ್ ಅವರಂತಹ ನಟ-ರಾಜಕಾರಣಿಗಳ ಬಗ್ಗೆಯೂ ಮಾತನಾಡಿದರು.

ಟಾಪ್ ನ್ಯೂಸ್

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

1-D-C

German company; ಖಾಸಗಿತನ ರಕ್ಷಣೆಗಾಗಿ ಡಿಜಿಟಲ್‌ ಕಾಂಡೋಮ್‌

1-reeaa

Maharashtra election: ವರ್ಲಿ ಕ್ಷೇತ್ರದಲ್ಲಿ ಆದಿತ್ಯ vs ಮಿಲಿಂದ್‌

delhi air

Air pollution; ಅತ್ಯಂತ ಕಳಪೆಗೆ ಕುಸಿದ ದಿಲ್ಲಿ ವಾಯು ಗುಣಮಟ್ಟ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.