KEA: ಪರೀಕ್ಷೆ ವೇಳೆ ತುಂಬು ತೋಳಿನ ಶರ್ಟ್ಗೆ ಕತ್ತರಿ!
ಕೊಪ್ಪಳದಲ್ಲಿ ಮಹಿಳೆಯರ ಮಾಂಗಲ್ಯ, ಓಲೆ ಬಿಚ್ಚಿಸಿ ಪರೀಕ್ಷೆ ; ದಾವಣಗೆರೆಯಲ್ಲಿ ಹಿಜಾಬ್ ತೆಗೆಯಲು ನಿರಾಕರಣೆ
Team Udayavani, Oct 28, 2024, 1:09 AM IST
ಕೊಪ್ಪಳ/ದಾವಣಗೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ನಡೆದ ಗ್ರಾಮ ಆಡಳಿತಾಧಿ ಕಾರಿ ಪರೀಕ್ಷೆ ಅಭ್ಯರ್ಥಿಗಳ ಶರ್ಟ್ನ ತುಂಬು ತೋಳನ್ನು ಕತ್ತರಿಸಲಾಗಿದೆ.
ಅಲ್ಲದೆ ಮಹಿಳೆಯರ ಮಾಂಗಲ್ಯ, ಓಲೆಗಳನ್ನು ಬಿಚ್ಚಿಸಿ ಪರೀಕ್ಷಿಸಲಾಗಿದೆ. ಅಲ್ಲದೆ ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ಅಭ್ಯರ್ಥಿ ಗಳನ್ನು ಕೇಂದ್ರದ ಹೊರಗಡೆ ನಿಲ್ಲಿಸಲಾಗಿದೆ. ಮಹಿಳೆಯರ ಮಾಂಗಲ್ಯ, ಕೊರಳಲ್ಲಿನ ಆಭರಣದ ಚೈನ್ ಹಾಗೂ ಕಿವಿಯೋಲೆ ಬಿಚ್ಚಿ ಪರೀಕ್ಷೆ ಮಾಡಲಾಗಿದೆ.
ದಾವಣಗೆರೆಯ ಖಾಸಗಿ ಕಾಲೇಜಿನಲ್ಲಿ ಭಾನುವಾರ ಗ್ರಾಮ ಆಡಳಿತ ಅ ಧಿಕಾರಿ ಹುದ್ದೆಗೆ ನಡೆದ ಸ್ಪರ್ಧಾತ್ಮಕ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿ ಯೊಬ್ಬರು ಹಿಜಾಬ್ ತೆಗೆಯಲು ನಿರಾಕರಿಸಿದ್ದಲ್ಲದೆ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು. ಮುಖ್ಯ ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾರ್ಥಿ ಹಿಜಾಬ್ ಧರಿಸಿ ಬಂದಿದ್ದರು.
ಪರೀಕ್ಷಾ ನಿಯ ಮಾನುಸಾರ ಅವಕಾಶ ಇಲ್ಲ ಎಂದು ಪೊಲೀಸರು ತಿಳಿಸಿದರು. ಹಿಜಾಬ್ ತೆಗೆಯಲು ನಿರಾಕರಿಸಿದ್ದಲ್ಲದೆ ವಾಗ್ವಾದ ನಡೆಸಿದರು. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೋಷಕರು ಸಹ ವಾಗ್ವಾದ ನಡೆಸಿದರು. ಹಿರಿಯ ಪೊಲೀಸ್ ಅ ಧಿಕಾರಿಗಳು ಸ್ಥಳಕ್ಕೆ ಅಗಮಿಸಿ ಪರೀಕ್ಷಾ ನಿಯಮಗಳ ಮನವರಿಕೆ ಮಾಡಿಕೊಟ್ಟ ಅನಂತರ ಹಿಜಾಬ್ ತೆಗೆದು ಪರೀಕ್ಷೆ ಬರೆದರು.
ಪರೀಕ್ಷೆಗೆ ಶೇ. 20 ಗೈರು
ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ (ವಿಎಒ) 1 ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರವಿವಾರ ನಡೆಸಿದ ಲಿಖಿತ ಪರೀಕ್ಷೆ ಗೆ ಶೇ. 80ರಷ್ಟು ಮಂದಿ ಹಾಜರಾಗಿದ್ದರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.
ಬೆಂಗಳೂರಿನ 88 ಕೇಂದ್ರ ಸೇರಿದಂತೆ ರಾಜ್ಯದ 1,173 ಕೇಂದ್ರಗಳಲ್ಲಿ ಯಾವುದೇ ತೊಂದರೆ ಇಲ್ಲದೆ ಪರೀಕ್ಷೆ ನಡೆಯಿತು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 4.79 ಲಕ್ಷ ಅಭ್ಯರ್ಥಿಗಳ ಪೈಕಿ 4.16 ಲಕ್ಷ ಮಂದಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡಿದ್ದರು. ಅವರಲ್ಲಿ ಶೇ. 80ರಷ್ಟು ಮಂದಿ ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ವಿವರಿಸಿದರು. ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳನ್ನು ಅತಿ ಸೂಕ್ಷ್ಮಎಂದು ಪರಿಗಣಿಸಿದ್ದ ಕಾರಣ ಆ ಜಿಲ್ಲೆಗಳಲ್ಲಿ ಹೆಚ್ಚಿನ ವಿಶೇಷ ನಿಗಾ ವ್ಯವಸ್ಥೆ ಮಾಡಲಾಗಿತ್ತು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koppala: ಮರಕುಂಬಿ ಪ್ರಕರಣದ ಅಪರಾಧಿ ಆಸ್ಪತ್ರೆಯಲ್ಲಿ ಸಾವು
ಬಸ್ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ್ಯು, ಓರ್ವನಿಗೆ ಗಾಯ
Dinesh GunduRao:ಶಾಸಕ ರಾಯರೆಡ್ಡಿ ಸಿಎಂ ಪಕ್ಕ ಇರುವುದರಿಂದ ಹೆಚ್ಚು ಅಭಿವೃದ್ದಿ ನಡೆಯುತ್ತವೆ
Koppala: ಒಳ ಮೀಸಲಾತಿಗೆ ಒತ್ತಾಯಿಸಿ ವಕೀಲರಿಂದ ಪ್ರತಿಭಟನೆ
ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ
MUST WATCH
ಹೊಸ ಸೇರ್ಪಡೆ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.