Alvas Award: ಪಂಡಿತ್ ಎಂ. ವೆಂಕಟೇಶ್ ಕುಮಾರ್ಗೆ 2024ರ ‘ಆಳ್ವಾಸ್ ವಿರಾಸತ್’ ಪ್ರಶಸ್ತಿ
Team Udayavani, Oct 28, 2024, 1:53 AM IST
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ 30 ವರ್ಷಗಳಿಂದ ನಡೆಯುತ್ತ ಬರುತ್ತಿರುವ ಸಾಂಸ್ಕೃತಿಕ ಉತ್ಸವ ‘ಆಳ್ವಾಸ್ ವಿರಾಸತ್’ ಈ ಬಾರಿ ಡಿ. 10ರಿಂದ 15ರ ವರೆಗೆ ನಡೆಯಲಿದ್ದು ಪ್ರಸಿದ್ಧ ಹಿಂದೂಸ್ಥಾನಿ ಗಾಯಕ ಮತ್ತು ಗುರು ಪದ್ಮಶ್ರೀ ಪಂಡಿತ್ ಎಂ. ವೆಂಕಟೇಶ್ ಕುಮಾರ್ ಅವರಿಗೆ “ಆಳ್ವಾಸ್ ವಿರಾಸತ್-2024′ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಪ್ರಕಟಿಸಿದ್ದಾರೆ.
ಗುರು ಪುಟ್ಟರಾಜ ಗವಾಯಿ ಅವರಿಂದ ಗ್ವಾಲಿಯರ್ ಮತ್ತು ಕಿರಾಣಾ ಘರಾಣಾ ಶೈಲಿಯ ಎಲ್ಲ ಹೊಳಹುಗಳನ್ನು ಕಲಿತ ವೆಂಕಟೇಶ ಕುಮಾರರು ಕರ್ಣಾಟಕ ಸಂಗೀತದಲ್ಲೂ ಹೆಸರಾದವರು. ಭಕ್ತಿ ಸಂಗೀತದಲ್ಲಿ ಕನ್ನಡ ವಚನ ಮತ್ತು ದಾಸರ ಪದ ಗಾಯನದಲ್ಲಿಯೂ ಪ್ರಸಿದ್ಧರು.
ಪದ್ಮಶ್ರೀ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜೋತ್ಸವ ಪ್ರಶಸ್ತಿ, ಕರ್ನಾಟಕ ಸಂಗೀತ ನಾಟ್ಯ ಅಕಾಡೆಮಿ ಪ್ರಶಸ್ತಿ, ಭೀಮಸೇನ ಜೋಶಿ ಪ್ರಶಸ್ತಿ, ಕಾಳಿದಾಸ ಪ್ರಶಸ್ತಿಗಳೇ ಮೊದಲಾದ ಹಲವಾರು ಪ್ರಶಸ್ತಿಗಳಿಗೆ ಪಾತ್ರರಾಗಿರುವ ಅವರು ದೇಶ ವಿದೇಶಗಳ ಪ್ರಮುಖ ಸಂಗೀತ ಸಭಾಗಳಲ್ಲಿ ಕಚೇರಿ ನೀಡಿದ್ದಾರೆ ಎಂದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Goa: ದಿ ಐರನ್ ಮ್ಯಾನ್ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.