Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

ಕೆಲವು ಮಳಿಗೆಗಳು ನವರಾತ್ರಿಗೆ ಆರಂಭಿಸಿರುವ ಕೊಡುಗೆಗಳ ದೀಪಾವಳಿವರೆಗೂ ಮುಂದುವರಿಸಿವೆ

Team Udayavani, Oct 28, 2024, 7:19 AM IST

Textail

ಮಂಗಳೂರು/ಉಡುಪಿ : ಹಬ್ಬಕ್ಕೆ ಒಂದು ಜತೆ ಹೊಸ ಬಟ್ಟೆ ಖರೀದಿಸಿ ಉಡುವ ಸಂಪ್ರದಾಯ ಹಿಂದಿನಿಂದಲೂ ರೂಢಿಯಲ್ಲಿದೆ. ಇದರಲ್ಲಿ ಬಡವ ಶ್ರೀಮಂತ ಎನ್ನುವ ಬೇಧವಿಲ್ಲ. ಆದರೆ ಖರೀದಿ ಮಾಡುವ ವಸ್ತ್ರಮಳಿಗೆಗಳು ಮಾತ್ರ ಬೇರೆ ಬೇರೆ ಇರಬಹುದು. ಹಾಗಾಗಿ ಅತ್ಯಂತ ಪಾರಂಪರಿಕ ಉದ್ಯಮಗಳಲ್ಲಿ ಒಂದಾ ಗಿರುವ ವಸ್ತ್ರೋದ್ಯಮಕ್ಕೆ ಮೊದಲಿ ನಿಂದಲೂ ಬಹು ಬೇಡಿಕೆಯಿದೆ.

ಹಬ್ಬದ ಋತು ಈಗಾಗಲೇ ಆರಂಭವಾಗಿದ್ದು, ಎಲ್ಲ ವಹಿವಾಟುಗಳು ಜಿಗಿತುಕೊಳ್ಳುತ್ತವೆ. ಮುಖ್ಯವಾಗಿ ವಸ್ತ್ರೋದ್ಯಮ ಕ್ಷೇತ್ರದ ವ್ಯಾಪಾರ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಇನ್ನಷ್ಟು ವೃದ್ಧಿಯಾಗುವ ವಿಶ್ವಾಸವಿದೆ ಎನ್ನುವುದು ಮಳಿಗೆಗಳ ಪ್ರಮುಖರ ಮಾತು.

ಮಂಗಳೂರಿನ ಪ್ರಮುಖ ವಸ್ತ್ರ ಮಳಿಗೆಗಳಲ್ಲಿ ಒಂದಾಗಿರುವ ಎಂ.ಪಿ.ಸಿಲ್ಕ್ಸ್‌ನ ಮಾಲಕರಾಗಿರುವ ದಿನೇಶ್‌ ಅವರ ಅಭಿಪ್ರಾಯದಂತೆ, ಮಳಿಗೆಯಲ್ಲಿ ರುವ ಬಟ್ಟೆಗಳ ವೈವಿಧ್ಯತೆ ಮತ್ತು ದರವನ್ನು ನೋಡಿಕೊಂಡು ಜನರು ಭೇಟಿ ನೀಡುತ್ತಾರೆ. ಈ ಬಾರಿ ದಸರಾ ಮತ್ತು ದೀಪಾವಳಿ ಒಂದೇ ತಿಂಗಳಿನಲ್ಲಿ ಬಂದಿದೆ. ಕೆಲವರು ದಸರಾಕ್ಕೆ ಖರೀದಿ ಮಾಡಿದ್ದಾರೆ. ಹಾಗಾಗಿ ದೀಪಾವಳಿಯ ಟ್ರೆಂಡ್‌ ಇನ್ನಷ್ಟೇ ಆರಂಭವಾಗಬೇಕಿದೆ. ಗ್ರಾಹಕರಿಗಾಗಿ ವಿಶೇಷ ಡಿಸ್ಕೌಂಟ್‌ ಸೇಲ್‌ಗ‌ಳನ್ನು ಹಮ್ಮಿಕೊಳ್ಳಲಾಗಿದೆ.

ಸಾಂಪ್ರದಾಯಿಕ ಬಟ್ಟೆಗಳಾದ ಸೀರೆ, ಕುರ್ತಾಗಳು, ಪುರುಷರ ಪಂಚೆ, ಶರ್ಟ್‌ಗಳು, ಮಕ್ಕಳ ಬಟ್ಟೆಗಳಿಗೆ ದೀಪಾವಳಿಗೆ ಬೇಡಿಕೆಯಿದೆ. ಮನೆಯವರಿಗೆ, ಕುಟುಂಬಸ್ಥರಿಗಾಗಿ ಈ ವೇಳೆ ಬಟ್ಟೆ ಖರೀದಿಸುತ್ತಾರೆ. ಕೆಲವರು ಬ್ರಾಂಡೆಡ್‌ ಬಟ್ಟೆಗಳನ್ನು ಕೇಳಿ ಪಡೆಯುತ್ತಾರೆ. ಹೊಸ ಸ್ಟಾಕ್‌ ಈಗಾಗಲೇ ಬಂದಿದ್ದು, ಗ್ರಾಹಕರ ನಿರೀಕ್ಷೆಯಲ್ಲಿದ್ದೇವೆ ಎಂದು ನಗರದ ಪ್ರಸಿದ್ಧ ಸೌರಾಷ್ಟ್ರ ಮಳಿಗೆ ಪ್ರವರ್ತಕರು ಮಾಹಿತಿ ನೀಡಿದರು.

ಆಕರ್ಷಕ ಆಫರ್‌ಗಳು, ಡಿಸ್ಕೌಂಟ್‌
ಈಗಾಗಲೇ ಹೊಸ ಸ್ಟಾಕ್‌ಗಳು ಬಂದಿದ್ದು, ವ್ಯಾಪಾರ ಆರಂಭವಾಗಿವೆ. ದೀಪಾವಳಿ ಆಫರ್‌ ಆರಂಭವಾಗಿದ್ದು, ಕೆಲವು ಮಳಿಗೆಗಳು ನವರಾತ್ರಿಗೆ ಆರಂಭಿಸಿರುವ ಕೊಡುಗೆಗಳನ್ನು ದೀಪಾವಳಿವರೆಗೂ ಮುಂದುವರಿಸಿವೆ. ಒಂದು ಕೊಂಡರೆ ಒಂದು ಉಚಿತ ಸ್ಲೋಗನ್‌ನೊಂದಿಗೆ ಗ್ರಾಹಕರನ್ನು ಮಳಿಗೆಗಳು ಆಕರ್ಷಿಸುತ್ತಿದ್ದರೆ, ಬ್ರ್ಯಾಂಡೆಡ್‌ ವಸ್ತ್ರಗಳಿಗೆ ಶೇ.25-30ರಷ್ಟು ರಿಯಾಯಿತಿ, ನಮ್ಮಲ್ಲೇ ಅತೀ ಕಡಿಮೆ ದರ ಎಂದು ಕೆಲವು ಮಳಿಗೆಗಳು ಮಾಲಕರು ಈಗಾಗಲೇ ಪ್ರಕಟನೆಗಳನ್ನು ಹೊರಡಿಸಿದ್ದಾರೆ.

ಶೇ.10-15  ಮಂದಿ ಮಾತ್ರ ಆನ್‌ಲೈನ್‌ ಮೊರೆ
ಬಟ್ಟೆ ಎನ್ನುವುದು ನಾವು ಮುಟ್ಟಿ ಅದನ್ನು ಫೀಲ್‌ ಮಾಡಿ ಖರೀದಿಸುವಂತದ್ದು. ಆನ್‌ಲೈನ್‌ನಲ್ಲಿ ಚಿತ್ರ ನೋಡಿ ಖರೀದಿಸಲು ಸಾಧ್ಯವಿಲ್ಲ. ಕೆಲವೊಮ್ಮೆ ಅಲ್ಲಿರುವ ಚಿತ್ರಕ್ಕೂ ಬರುವ ಉತ್ಪನ್ನಕ್ಕೂ ಸಂಬಂಧವೇ ಇರುವುದಿಲ್ಲ. ಚಿನ್ನ ಮತ್ತು ಬಟ್ಟೆಯನ್ನು ಅಂಗಡಿಗೆ ಹೋಗಿ ಖರೀದಿಸಿದರೆ ನೆಮ್ಮದಿ ಎನ್ನುವ
ಅಭಿಪ್ರಾಯ ಹಲವರಲ್ಲಿದೆ. ಯುವ ಸಮುದಾಯದಲ್ಲಿ ಶೇ.10-15 ಮಂದಿ ಮಾತ್ರ ಆನ್‌ಲೈನ್‌ ಮೊರೆ ಹೋಗುತ್ತಾರೆ ಎನ್ನುವುದು ಪ್ರಮುಖರ ಮಾತು.
ಮುಂದಕ್ಕೆ ಕ್ರಿಸ್ಮಸ್‌, ಹೊಸ ವರ್ಷ, ಸಂಕ್ರಾಂತಿ ಹಬ್ಬಗಳು, ಮದುವೆ ಸೇರಿದಂತೆ ಶುಭ ಸಮಾರಂಭಗಳ ಸೀಸನ್‌ ಆರಂಭವಾಗುವುದರಿಂದ ಈ ಬಾರಿಯೂ ಹೆಚ್ಚಿನ ವ್ಯಾಪಾರ ನಿರೀಕ್ಷೆಯಲ್ಲಿ ವ್ಯಾಪಾರಿಗಳಿದ್ದಾರೆ.

ಸೀರೆ, ಪೈಜಾಮ ಆಕರ್ಷಣೆ
ದೀಪಾವಳಿಯನ್ನು ಬಹುತೇಕ ಮನೆಗಳಲ್ಲಿ ಸಾಂಪ್ರದಾಯಕವಾಗಿ ಆಚರಿಸಿಕೊಂಡು ಬರುತ್ತಿದ್ದಾರೆ. ಹೀಗಾಗಿಯೇ ಹೊಸ ಸಾಂಪ್ರದಾಯಿಕ ಧಿರಿಸಿನಲ್ಲಿಯೇ ಅನೇಕರು ಹಬ್ಬ ಆಚರಿಸುತ್ತಾರೆ. ಇದಕ್ಕಾಗಿ ಮಹಿಳೆಯರು, ಯುವತಿಯರು ಸೀರೆ, ಲಂಗದಾವಣಿ, ಚೂಡಿದಾರ್‌ ಇತ್ಯಾದಿಗಳ ಖರೀದಿಗೆ ಹೆಚ್ಚು ಆಸಕ್ತಿ ತೋರಿದರೆ, ಪುರುಷರು ಪಂಚೆ ಶಲ್ಯ ಸಹಿತ ಧಿರಿಸು, ಕುರ್ತಾ, ಪೈಜಾಮ, ಮಕ್ಕಳು ಹೊಸ ವಿನ್ಯಾಸದ ಸಾಂಪ್ರದಾಯಿಕ ಬಟ್ಟೆಗಳ ಖರೀದಿಗೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ ಎಂದು ಖಾಸಗಿ ಜವುಳಿ ಮಳಿಗೆಯ ಮಾಲಕರೊಬ್ಬರು ಮಾಹಿತಿ ನೀಡಿದರು.

ಹಬ್ಬದ ಖರೀದಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಗ್ರಾಹಕರಿಂದ ತುಂಬ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಗ್ರಾಹಕರಿಗಾಗಿ ಲಕ್ಕಿ ಕೂಪನ್‌ ಕೊಡುಗೆಯನ್ನು ಈಗಾಗಲೇ ಘೋಷಣೆ ಮಾಡಿದ್ದೇವೆ. ಹಬ್ಬಕ್ಕೆ ಬೇಕಾದ ಎಲ್ಲ ರೀತಿಯ ಬಟ್ಟೆಗಳನ್ನು ಖರೀದಿಗೂ ನಮ್ಮಲ್ಲಿ ವ್ಯವಸ್ಥೆಯಿದೆ. ಪುರುಷರ, ಮಹಿಳೆಯರ, ಮಕ್ಕಳ ಪ್ರತ್ಯೇಕ ವಿಭಾಗವೂ ಇರುವುದರಿಂದ ಗ್ರಾಹಕರು ಕುಟುಂಬ ಸಮೇತರಾಗಿ ಬಂದು ತಮ್ಮ ಆಯ್ಕೆಯ ಬಟ್ಟೆಗಳನ್ನು ಖರೀದಿ ಮಾಡಬಹುದಾಗಿದೆ ಎನ್ನುತ್ತಾರೆ ಉಡುಪಿಯ ಜಯಲಕ್ಷ್ಮೀ ಸಿಲ್ಕ್ಸ್‌ನ ಪಾಲುದಾರರಾದ ವೀರೇಂದ್ರ ಹೆಗಡೆ.

ಬಟ್ಟೆಯ ವಿಚಾರವಾಗಿ ಗ್ರಾಹಕರಿಗೆ ಮಳಿಗೆಗೆ ಬಂದು ಖರೀದಿಸಿದರೇ ಹೆಚ್ಚು ತೃಪ್ತಿ. ಬಟ್ಟೆಯನ್ನು ಖುದ್ದು ಮುಟ್ಟಿ ನೋಡಿ, ಅದರ ಗುಣಮಟ್ಟ ಅರಿತು, ತಮಗೆ ಸರಿ ಹೊಂದುವುದೇ ಎಂಬುದನ್ನು ಪರಿಶೀಲಿಸಿ ಖರೀದಿಸಲುಅವಕಾಶ ಇರುತ್ತದೆ. ಇದು ಆನ್ಲ„ನ್‌ ಖರೀದಿಯಲ್ಲಿ ಇಲ್ಲ. ಹಬ್ಬದ ಖರೀದಿ ಭರಾಟೆ ಈಗ ಆರಂಭಗೊಂಡಿದೆ ಎನ್ನುತ್ತಾರೆ ಉಡುಪಿಯ ವೇದಾಸ್‌ ವಸ್ತ್ರ ಮಳಿಗೆಯ ಮಾಲಕರಾದ ದೇವಾನಂದ ಶೆಣೈ.

ಗೀತಾಂಜಲಿ ಜವುಳಿ ಮಳಿಗೆಯ ಪಾಲುದಾರರಾದ ಸಂತೋಷ್‌ ವಾಗ್ಲೆ ಮಾತನಾಡಿ, ದೀಪಾವಳಿ ಹಬ್ಬದ ಖರೀದಿ ಆರಂಭವಾಗಿದೆ. ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಗ್ರಾಹಕರಿಗೆ ಎಲ್ಲ ಬಗೆಯೆ ಧಿರಿಸುಗಳು ಅವರ ಆಸಕ್ತಿಗೆ ಸರಿಹೊಂದುವಂತೆ ಖರೀದಿಸಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ ಎಂದರು.

ಟಾಪ್ ನ್ಯೂಸ್

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

4

Kundapura: ಕೋಣಿ ಬ್ಯಾಂಕ್‌ ಕಳ್ಳತನ ಯತ್ನ; ಅಂತರ್‌ ರಾಜ್ಯ ಕಳ್ಳರಿಬ್ಬರ ಬಂಧನ

U-Muniyalu

Karkala: ಪರಶುರಾಮನ ನಕಲಿ ವಿಗ್ರಹ ಪ್ರಕರಣದ ತನಿಖೆ ಚುರುಕುಗೊಳಿಸಿ: ಮುನಿಯಾಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.