Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್‌ ಸಿಂಗ್‌

ಕೆಎಂಸಿಯಲ್ಲಿ ವಿಪತ್ತು ಔಷಧ ಕುರಿತಾದ ರಾಷ್ಟ್ರೀಯ ಆರೋಗ್ಯ ಸಮ್ಮೇಳನ "ಡೈಮೆಡ್ಕಾನ್‌ - 2024'

Team Udayavani, Oct 28, 2024, 3:18 AM IST

KMC-MNG

ಮಂಗಳೂರು: ಪ್ರವಾಹ, ಭೂಕುಸಿತ, ಅಪಘಾತ ಅಥವಾ ಇತರ ಯಾವುದೇ ರೀತಿಯ ವಿಪತ್ತು ಸಂಭವಿಸುವ ಸಂದರ್ಭದಲ್ಲಿ ಪರಿಣಾಮಕಾರಿಯಾದ ರಕ್ಷಣ ಕಾರ್ಯಗಳು ನಡೆಯಬೇಕಾದರೆ ವಿವಿಧ ಇಲಾಖೆಗಳ ನಡುವೆ ಸಮನ್ವಯತೆ ಅತೀ ಅಗತ್ಯ. ಇದಕ್ಕಾಗಿ ಎಸ್‌ಒಪಿ(ಮಾರ್ಗಸೂಚಿ) ರೂಪಿಸಬೇಕಾದ ಅಗತ್ಯವಿದೆ ಎಂದು ಪಶ್ಚಿಮ ವಲಯ ಡಿಐಜಿಪಿ ಅಮಿತ್‌ ಸಿಂಗ್‌ ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರಿನ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನಲ್ಲಿ ತುರ್ತು ಚಿಕಿತ್ಸಾ ವಿಭಾಗ, ವಿಪತ್ತು ನಿರ್ವಹಣ ಕೇಂದ್ರದ ವತಿಯಿಂದ ರವಿವಾರ ಜರಗಿದ ವಿಪತ್ತು ಔಷಧ ಕುರಿತಾದ ರಾಷ್ಟ್ರೀಯ ಆರೋಗ್ಯ ಸಮ್ಮೇಳನ “ಡೈಮೆಡ್ಕಾನ್‌ – 2024′ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಪತ್ತು ಯಾವಾಗ ಎಲ್ಲಿ ಬೇಕಾದರೂ ಸಂಭವಿಸಬಹುದು. ಅಂತಹ ಸಂದರ್ಭದಲ್ಲಿ ಪೊಲೀಸ್‌, ಆರೋಗ್ಯ ಇಲಾಖೆ, ರಕ್ಷಾ ತಂಡಗಳು ಸಹಿತ ಸಂಬಂಧಿಸಿದ ಎಲ್ಲ ತಂಡಗಳು ಕೂಡ ಸಮನ್ವಯತೆ, ಅಗತ್ಯ ಸಲಕರಣೆ, ಸೌಲಭ್ಯಗಳೊಂದಿಗೆ ಕಾರ್ಯಾಚರಣೆಗಿಳಿಯಬೇಕು.

ವಿಪತ್ತು ನಿರ್ವಹಣೆ ಕೂಡ ವೈದ್ಯಕೀಯ ಶಿಕ್ಷಣ ಪಠ್ಯದಲ್ಲಿ ಪ್ರಮುಖ ವಿಷಯವಾಗಬೇಕಾಗಿದೆ. ಅಲ್ಲದೆ ಈ ಹಿಂದೆ ದೇಶದಲ್ಲಿ ಸಂಭವಿಸಿರುವ ವಿಪತ್ತುಗಳು, ಅವುಗಳನ್ನು ನಿಭಾಯಿಸಿರುವುದಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ಅಧ್ಯಯನ ಮಾಡಿ ಪ್ರಸ್ತುತ ಯಾವ ರೀತಿಯ ಸಿದ್ಧತೆ, ತರಬೇತಿಯ ಅಗತ್ಯವಿದೆ, ಇನ್ನಷ್ಟು ಪರಿಣಾಮಕಾರಿ ಕಾರ್ಯಾಚರಣೆ ಹೇಗೆ ಮಾಡಬಹುದು ಎಂಬ ಬಗ್ಗೆ ಕಾರ್ಯಯೋಜನೆ ರೂಪಿಸಬೇಕಾಗಿದೆ ಎಂದು ಅಮಿತ್‌ ಸಿಂಗ್‌ ಹೇಳಿದರು.

ಸಲಕರಣೆ‌ ಕೊರತೆಯಾಗದಿರಲಿ
ರಾಜ್ಯ ಜೈವಿಕ ವಿಪತ್ತು ಮತ್ತು ಭಯೋತ್ಪಾದನೆ ರಾಜ್ಯ ತಾಂತ್ರಿಕ ಸಲಹಾ ಸಮಿತಿಯ ಸದಸ್ಯ ಪ್ರದೀಪ್‌ ಕೆ.ಕೆ. ಅವರು ಮಾತನಾಡಿ, ಘಟನೆಗಳು ನಡೆದ ಕೆಲವೇ ಸಮಯದೊಳಗೆ ವಿವಿಧ ತಂಡಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಅದಕ್ಕಾಗಿ ವಾಟ್ಸ್‌ ಆ್ಯಪ್‌ ಗ್ರೂಪ್‌ನಂತಹ ವ್ಯವಸ್ಥೆಯನ್ನು ಮಾಡಿ ತ್ವರಿತ ಸಂಹವನ ನಡೆಸಬೇಕು. ಆ್ಯಂಬುಲೆನ್ಸ್‌ಗಳ ಕೊರತೆಯಾಗದಂತೆಯೂ ಗಮನಹರಿಸಬೇಕು. ಇಂತಹ ತಂಡಗಳು ವಿಪತ್ತು ನಿರ್ವಹಣೆ ತರಬೇತಿಯ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದು ಹೇಳಿದರು.

ಕೆಎಂಸಿ ವೈದ್ಯಕೀಯ ಕಾಲೇಜಿನ ಡೀನ್‌ ಡಾ| ಬಿ. ಉನ್ನಿಕೃಷ್ಣನ್‌ ಅಧ್ಯಕ್ಷತೆ ವಹಿಸಿದ್ದರು. ಸಿಇಡಿಎಂಎಂ ಕೋ- ಆರ್ಡಿನೇಟರ್‌ ಡಾ| ಸಂದೀಪ್‌ ಶಿವರಾಮನ್‌, ಅಮೆರಿಕನ್‌ ಹಾರ್ಟ್‌ ಅಸೋಸಿಯೇಶನ್‌ನ ರೀಜನಲ್‌ ಡೈರೆಕ್ಟರ್‌ ಡಾ| ಸಚಿನ್‌ ಮೆನನ್‌, ಸಂಘಟನ ಸಮಿತಿ ಚೇರ್ಮನ್‌ಗಳಾದ ಡಾ| ಮಧುಸೂದನ್‌ ಉಪಾಧ್ಯ, ಡಾ| ವಿವೇಕ್‌ ಗೋಪಿನಾಥನ್‌, ಕೆಎಂಸಿ ಮಂಗಳೂರಿನ ತುರ್ತು ಚಿಕಿತ್ಸಾ ವಿಭಾಗದ ಸ. ಪ್ರಾಧ್ಯಾಪಕ ಮತ್ತು ಡೈಮೆಡಾRನ್‌ -2024ರ ಸಂಘಟನ ಕಾರ್ಯದರ್ಶಿ ಡಾ| ನಿಖೀಲ್‌ ಪೌಲ್‌, ಡಾ| ಜಯರಾಜ್‌, ಡಾ| ವಿಮಲ್‌ ಕೃಷ್ಣನ್‌ ಎಸ್‌. ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

1-NAAS

NASA; ಮಂಗಳನ ಮೇಲೆ ಹಸುರು ಪ್ರದೇಶ: ಜೀವಕಳೆ ಶಂಕೆ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

18

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಇರಲಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

Textail

Deepavali: ಹಬ್ಬದ ಋತುವಿನಲ್ಲಿ ಹೊಸ ಸ್ಟಾಕ್‌ನೊಂದಿಗೆ ಸಿದ್ಧವಾಗಿದೆ ವಸ್ತ್ರೋದ್ಯಮ

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Ashok-Rai

Rai Estate: ಪುತ್ತೂರಿನಲ್ಲಿ ನ. 2ರಂದು “ಅಶೋಕ ಜನ- ಮನ’ ಕಾರ್ಯಕ್ರಮ

Campco

Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

DK-CM

Assembly By Election: ಗೆದ್ದು ಬನ್ನಿ; ಕಾಂಗ್ರೆಸ್‌ ಸಚಿವರಿಗೆ ರಣದೀಪ್‌ ಸುರ್ಜೇವಾಲ ಹುಕುಂ

courts

Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ

BJP-waqf

Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.