Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Team Udayavani, Oct 28, 2024, 3:42 AM IST
ಮಂಗಳೂರು: ಕ್ಯಾಂಪ್ಕೊ ಸಂಸ್ಥೆಯ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಅವರ ನೇತೃತ್ವದ ನಿಯೋಗ ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್ಒ) ಮಾಜಿ ವಿಜ್ಞಾನಿ ಡಾ| ಸೌಮ್ಯ ಸ್ವಾಮಿನಾಥನ್ ಅವರನ್ನು ಚೆನ್ನೈನಲ್ಲಿ ಅ. 25ರಂದು ಭೇಟಿ ಮಾಡಿತು.
ಈ ಸಂದರ್ಭದಲ್ಲಿ ಅಡಿಕೆಯ ಬಗೆಗಿನ ತಪ್ಪು ತಿಳಿವಳಿಕೆಯನ್ನು ದೂರ ಮಾಡುವ ಸಲುವಾಗಿ 20ಕ್ಕೂ ಅಧಿಕ ಸಂಶೋಧನ ವರದಿಗಳನ್ನು ಮಂಡಿಸಲಾಯಿತು. ಈ ಬಗ್ಗೆ ಮಾಹಿತಿ ಪಡೆದ ಡಾ| ಸೌಮ್ಯ ಸ್ವಾಮಿನಾಥನ್ ಅವರು ಇಂತಹ ವಿಶ್ವಾಸಾರ್ಹ ದಾಖಲೆಗಳನ್ನು ಇಂಟರ್ನ್ಯಾಶನಲ್ ಏಜೆನ್ಸಿ ಫಾರ್ ರಿಸರ್ಚ್ ಐಎಆರ್ಸಿ ಮತ್ತು ಡಬ್ಲ್ಯುಎಚ್ಒನಲ್ಲಿ ಮಂಡಿಸಿ ತಪ್ಪು ತಿಳಿವಳಿಕೆ ಹೋಗಲಾಡಿಸಲು ಭಾರತ ಸರಕಾರದ ಮೂಲಕ ಒತ್ತಡ ಹೇರುವಂತೆ ಸಲಹೆ ನೀಡಿದರು.
ರೈತರ ಸಮಸ್ಯೆಗಳ ನಿವಾರಣೆಗೆ ಕ್ಯಾಂಪ್ಕೊ ನಡೆಸುತ್ತಿರುವ ಪ್ರಯತ್ನಕ್ಕೆ ಪೂರ್ಣ ಬೆಂಬಲ ವ್ಯಕ್ತಪಡಿಸಿದ ಅವರು ಈ ಬಗ್ಗೆ ಕೇಂದ್ರ ಕೃಷಿ ಮತ್ತು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖಾ ಸಚಿವಾಲಯಕ್ಕೆ ತನ್ನ ಅಭಿಪ್ರಾಯ ಸಲ್ಲಿಸುವುದಾಗಿ ಭರವಸೆ ನೀಡಿದರು. ನಿಯೋಗದಲ್ಲಿ ಕ್ಯಾಂಪ್ಕೊ ವ್ಯವಸ್ಥಾಪಕ ನಿರ್ದೇಶಕ ಡಾ| ಸತ್ಯನಾರಾಯಣ, ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ| ಕೇಶವ ಭಟ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್
ಡಾಲರ್ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?
Assembly By Election: ಗೆದ್ದು ಬನ್ನಿ; ಕಾಂಗ್ರೆಸ್ ಸಚಿವರಿಗೆ ರಣದೀಪ್ ಸುರ್ಜೇವಾಲ ಹುಕುಂ
Puttur: ಲಾರಿ-ದೋಸ್ತ್ ವಾಹನ ನಡುವೆ ಢಿಕ್ಕಿ; ಆರೋಪಿಗೆ ಶಿಕ್ಷೆ ಪ್ರಕಟ
Waqf Property: ವಕ್ಫ್ ಭೂ ವಿವಾದ: ಬಿಜೆಪಿ ಗಡುವು, ಹೋರಾಟದ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.