PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ


Team Udayavani, Oct 28, 2024, 12:02 PM IST

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

ಲಾಹೋರ್:‌ ಪಾಕಿಸ್ತಾನ ಕ್ರಿಕೆಟ್‌ ನಲ್ಲಿ ಯಾರು ಯಾವ ಹುದ್ದೆಯಲ್ಲಿದ್ದಾರೆಂದು ಕೇಳಿದರೆ ಪಕ್ಕನೆ ಹೇಳುವುದು ಕಷ್ಟ. ಅಷ್ಟೊಂದು ಬದಲಾವಣೆಗಳು ನಡೆಯುತ್ತಿದೆ. ಇತ್ತೀಚೆಗೆನಷ್ಟೆ ನಾಯಕನ ಬದಲಾವಣೆಯೂ ಆಗಿದೆ. ಇದರ ನಡುವೆ ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ಕೋಚ್‌ ಆಗಿ ನೇಮಕವಾಗಿದ್ದ ಗ್ಯಾರಿ ಕರ್ಸ್ಟನ್‌ (Gary Kirsten) ಅವರು ಇದೀಗ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ದಕ್ಷಿಣ ಆಫ್ರಿಕಾದ ಮಾಜಿ ಆಟಗಾರ ಗ್ಯಾರಿ ಕರ್ಸ್ಟನ್‌ ಅವರು ಕೋಚಿಂಗ್‌ ನಲ್ಲಿ ಉತ್ತಮ ಹೆಸರು ಸಂಪಾದಿಸಿದವರು. 2011ರಲ್ಲಿ ವಿಶ್ವಕಪ್‌ ಗೆದ್ದ ವೇಳೆ ಅವರು ಭಾರತ ತಂಡದ ಕೋಚ್‌ ಆಗಿದ್ದವರು. ಕಳೆದ ನಾಲ್ಕು ತಿಂಗಳ ಹಿಂದೆ ಅವರು ಪಾಕಿಸ್ತಾನದ ಏಕದಿನ ಮತ್ತು ಟಿ20 ಕ್ರಿಕೆಟ್‌ ತಂಡದ ಕೋಚ್‌ ಆಗಿ ನೇಮಕವಾಗಿದ್ದರು.

ಕರ್ಸ್ಟನ್ ಪಾಕಿಸ್ತಾನದ ಸೀಮಿತ ಓವರ್‌ ಮಾದರಿ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡ ನಂತರ ಬಹಳಷ್ಟು ಬದಲಾಗಿದೆ. ಬಾಬರ್‌ ಅಜಂ ನಾಯಕನಾಗಿ ಹಿಂದಿರುಗಿದ ವೇಗದಲ್ಲಿಯೇ ಮತ್ತೆ ರಾಜೀನಾಮೆ ನೀಡಿದ್ದಾರೆ. ಆಯ್ಕೆ ಸಮಿತಿ ಬದಲಾವಣೆಗಳಾಗಿದೆ. ಎರಡು ದಿನಗಳ ಹಿಂದಷ್ಟೇ ಮೊಹಮ್ಮದ್‌ ರಿಜ್ವಾನ್‌ ಗೆ ನಾಯಕತ್ವದ ಜವಾಬ್ದಾರಿ ನೀಡಲಾಗಿದೆ.

ಕ್ರಿಕ್‌ಬಝ್‌ ನಲ್ಲಿನ ವರದಿಯ ಪ್ರಕಾರ, ಕರ್ಸ್ಟನ್ ಮತ್ತು ಆಟಗಾರರ ನಡುವೆ ಕಳೆದ ಕೆಲವು ವಾರಗಳಲ್ಲಿ ಕೆಲವು ಗಂಭೀರವಾದ ಭಿನ್ನಾಭಿಪ್ರಾಯಗಳು ಹೊರಹೊಮ್ಮಿವೆ. ಗ್ಯಾರಿ ಕರ್ಸ್ಟನ್‌ ಅವರು ಪಾಕ್‌ ತಂಡದ ಹೈ ಪರ್ಫಾರ್ಮೆನ್ಸ್‌ ಕೋಚ್‌ ಆಗಿ ಡೇವಿಡ್ ರೀಡ್ ನೇಮಿಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಬಳಿ ವಿನಂತಿಸಿದ್ದರು. ಆದರೆ ಅದನ್ನು ಮಂಡಳಿಯು ತಿರಸ್ಕರಿಸಿತು. ಪಿಸಿಬಿ ಪರ್ಯಾಯವಾಗಿ ಕೆಲವು ಇತರ ಹೆಸರುಗಳನ್ನು ನೀಡಿತ್ತು. ಇದರಿಂದಾಗಿ ಕರ್ಸ್ಟನ್ ನಿರಾಶೆಗೊಂಡರು.

ಕರ್ಸ್ಟನ್‌ ರಾಜೀನಾಮೆ ತೆರವಾದ ಸ್ಥಾನಕ್ಕೆ ಇದುವರೆಗೆ ಯಾವುದೇ ಹೆಸರನ್ನು ಪಿಸಿಬಿ ಅಂತಿಮಗೊಳಿಸಿಲ್ಲ. ಆದರೆ ಟೆಸ್ಟ್‌ ಕೋಚ್‌ ಆಗಿರುವ ಜೇಸನ್‌ ಗಿಲ್ಲೆಸ್ಪಿ ಅವರೇ ಮೂರು ಮಾದರಿಯ ತಂಡಕ್ಕೆ ಕೋಚ್‌ ಆಗುವ ಸಾಧ್ಯತೆಯಿದ ಎನ್ನಲಾಗಿದೆ.

ಇನ್ನು ಕೆಲವೇ ತಿಂಗಳಲ್ಲಿ ಪಾಕಿಸ್ತಾನದಲ್ಲಿಯೇ ಚಾಂಪಿಯನ್ಸ್‌ ಟ್ರೋಫಿ ಕೂಟ ನಡೆಯಲಿದೆ. ಇದಕ್ಕೂ ಮೊದಲು ಬಹಳಷ್ಟು ಬದಲಾವಣೆಗಳು ತಂಡಕ್ಕೆ ಮುಳುವಾಗುವ ಸಾಧ್ಯತೆ ಹೆಚ್ಚಿದೆ.

ಟಾಪ್ ನ್ಯೂಸ್

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

1–ind-ccc

Team India; ಮುಂಬಯಿ ಟೆಸ್ಟ್‌ಗೆ ಮುನ್ನ 2 ದಿನ ಕಡ್ಡಾಯ ಅಭ್ಯಾಸ!

1-ms

Mohammed Shami ಗೈರು ಭಾರತಕ್ಕೆ ದೊಡ್ಡ ಹೊಡೆತ ಎಂದ ಆಸೀಸ್‌ ಕೋಚ್‌: ಕ್ಷಮೆ ಯಾಚಿಸಿದ ಶಮಿ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

1-a-bb

Pro Kabaddi; ಜೈಪುರ್‌-ತಮಿಳ್‌ ತಲೈವಾಸ್‌ ಪಂದ್ಯ ಟೈ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Pranam devaraj starrer Son of muthanna movie

Son of Muthanna; ಮುತ್ತಣ್ಣನಿಗೆ ಶಿವಣ್ಣ ಸಾಥ್‌: ತಂದೆ-ಮಗನ ಬಾಂಧವ್ಯದ ಸುತ ಸಿನಿಮಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

2

Mangaluru: ನಾಳೆಯಿಂದ ನೀತಿ ಸಂಹಿತೆ ಸಡಿಲಿಕೆ; ನೂತನ ಮೇಯರ್‌ ಆಡಳಿತ ಶುರು

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.