Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Team Udayavani, Oct 28, 2024, 12:37 PM IST
ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದಲ್ಲಿ ತಯಾರಾಗುತ್ತಿರುವ “45′ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ. ಈಗ ಚಿತ್ರತಂಡದಿಂದ ಹೊಸ ಅಪಡೇಟ್ ಬಂದಿದೆ. ಅದು ಚಿತ್ರದ ಆಡಿಯೋ ರೈಟ್ಸ್ ಕುರಿತಾಗಿದ್ದು.
45 ಚಿತ್ರದ ಆಡಿಯೋ ರೈಟ್ಸ್ ಅನ್ನು ಆನಂದ್ ಆಡಿಯೋ ಸಂಸ್ಥೆಯವರು ಪಡೆದುಕೊಂಡಿದ್ದಾರೆ. ಚಿತ್ರದ ನಿರ್ದೇಶಕರೂ ಆಗಿರುವ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರೆ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಭಾರಿ ಮೊತ್ತಕ್ಕೆ ಆಡಿಯೋ ರೈಟ್ಸ್ ಮಾರಾಟವಾಗಿದ್ದು ಸದ್ಯದಲ್ಲೇ ಹಾಡುಗಳು ಬಿಡುಗಡೆಯಾಗಲಿದೆ.
ಇನ್ನು, ಚಿತ್ರದ ಬಗ್ಗೆ ಮಾತನಾಡುವ ಶಿವರಾಜ್ ಕುಮಾರ್, “ಈ ಚಿತ್ರದಲ್ಲಿ ನಾವು ಮೂವರು ನಟಿಸಿದ್ದೇವೆ. ಅವರು ಮುಂದು. ಇವರು ಮುಂದು ಅಂತ ಇಲ್ಲ. ಇಲ್ಲಿ ಎಲ್ಲರು ಒಂದೇ. ಉಪೇಂದ್ರ ಅವರ ಜೊತೆ ನಟಿಸಲು ನಾನು ಯಾವಾಗಲೂ ಸಿದ್ಧ. ರಾಜ್ ಬಿ ಶೆಟ್ಟಿ ಅವರ ಜೊತೆಗೆ ನಟಿಸಿದ್ದು ಸಂತೋಷವಾಗಿದೆ. ಅರ್ಜುನ್ ಜನ್ಯ ಅವರ ಮೊದಲ ನಿರ್ದೇಶನದ ಚಿತ್ರ ಅಂತ ಹೇಳಲಿಕ್ಕೆ ಆಗಲ್ಲ. ಅಷ್ಟು ಅದ್ಭುತ ನಿರ್ದೇಶನ ಅವರದು. ಅಷ್ಟೇ ಅದ್ಧೂರಿಯಾಗಿ ರಮೇಶ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ. ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಮೂಡಿಬಂದಿರುವ ಸಾಹಸ ಸನ್ನಿವೇಶಗಳು ಅದ್ಭುತವಾಗಿವೆ. 45 ಇಡೀ ಭಾರತೀಯರೇ ಮೆಚ್ಚುವಂತಹ ಆ್ಯಕ್ಷನ್ ಚಿತ್ರವಾಗಲಿದೆ’ ಎಂದರು.
ನಿರ್ಮಾಪಕ ರಮೇಶ್ ರೆಡ್ಡಿ ಅವರಿಗೆ ಸಿನಿಮಾ ಆರಂಭವಾಗಿ 10 ದಿನಗಳವರೆಗೆ ಏನೋ, ಹೇಗೋ ಎಂಬ ಭಯ ಇತ್ತಂತೆ. ಆದರೆ, ಅರ್ಜುನ್ ಇಡೀ ಸಿನಿಮಾವನ್ನು ಅನಿಮೇಶನ್ನಲ್ಲಿ ಮಾಡಿದಂತೆ ಚಿತ್ರೀಕರಣ ಕೂಡಾ ಮಾಡಿದ್ದರಿಂದ ಧೈರ್ಯ ಬಂದು ಅರ್ಜುನ್ ಕೇಳಿದ್ದನ್ನೆಲ್ಲಾ ನೀಡಿದರಂತೆ. ಜೊತೆಗೆ ಪ್ರತಿ ದಿನ ಆದ ಚಿತ್ರೀಕರಣವನ್ನು ಕಳುಹಿಸಿಕೊಟ್ಟು ನಿರ್ಮಾಪಕರಿಗೆ ಧೈರ್ಯ ತುಂಬಿದರಂತೆ ಅರ್ಜುನ್. ಚಿತ್ರಕ್ಕೆ ಸತ್ಯ ಹೆಗಡೆ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ
Son of Muthanna; ಮುತ್ತಣ್ಣನಿಗೆ ಶಿವಣ್ಣ ಸಾಥ್: ತಂದೆ-ಮಗನ ಬಾಂಧವ್ಯದ ಸುತ ಸಿನಿಮಾ
Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ
Sandalwood: ʼಧೀರ ಭಗತ್ ರಾಯ್ʼಗೆ ಭೀಮ ಬಲ
Actor Darshan: ನಟ ದರ್ಶನ್ ಜಾಮೀನು ಅರ್ಜಿ ಹೈಕೋರ್ಟ್ನಲ್ಲಿ ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
Renukaswamy Case: ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿ ಮುಂದೂಡಿಕೆ
BBK11: 11 ವರ್ಷದ ಬಿಗ್ಬಾಸ್ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.