Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು


Team Udayavani, Oct 28, 2024, 12:43 PM IST

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

ಬೆಂಗಳೂರು: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿದ್ದು, ಇದೀಗ ಮಳೆಯಿಂದಾಗಿ ಮತ್ತಷ್ಟು ರಸ್ತೆ ಹಾಳಾಗಿದೆ. ಧನ್ವಂತರಿ ರಸ್ತೆ ಹಾಗೂ ಗುಬ್ಬಿ ತೋಟದಪ್ಪ ರಸ್ತೆ ಮೂಲಕ ಬಿಎಂಟಿಸಿ ಬಸ್‌ ನಿಲ್ದಾಣದ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿಂದಲೇ ತುಂಬಿಕೊಂಡಿದೆ. ಭಾರೀ ಪ್ರಮಾಣದಲ್ಲಿ ಹದಗೆಟ್ಟಿರುವ ಇದೇ ರಸ್ತೆ ಮೂಲಕವೇ ಬಿಎಂಟಿಸಿ ಬಸ್‌ಗಳೆಲ್ಲಾ ಬಿಎಂಟಿಸಿ ಬಸ್‌ ನಿಲ್ದಾಣವನ್ನು ಪ್ರವೇಶಿಸಬೇಕು. ಗುಂಡಿಗಳನ್ನು ತಪ್ಪಿಸಲು ಬಿಎಂಟಿಸಿ ಬಸ್‌ ಚಾಲಕರು ಹೈರಾಣಾಗುತ್ತಿದ್ದಾರೆ.

ಇತ್ತೀಚೆಗೆ  ನಿರಂತರವಾಗಿ ಸುರಿದ ಭಾರಿಯಿಂದ ದೊಡ್ಡ ದೊಡ್ಡ ಗಾತ್ರದ ಗುಂಡಿಗಳು ಬಿದ್ದಿವೆ. ಮಳೆ ಸುರಿದರೆ ಗುಂಡಿಗಳು ನೀರಿನಿಂದ ಆವೃತವಾಗಿವೆ. ಬಸ್‌ ಚಾಲಕರಿಗೆ ಹಾಗೂ ವಾಹನ ಸವಾರರಿಗೂ ಗುಂಡಿಯ ಆಳ ತಿಳಿಯದೇ ತೊಂದರೆಗೀಡಾಗು ತ್ತಿದ್ದಾರೆ. ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ಬಿಎಂ ಟಿಸಿ ಬಸ್‌ಗಳು ಹಾಗೂ ಲಕ್ಷಾಂತರ ಪ್ರಯಾಣಿಕರು ಸಂಚರಿಸುತ್ತಾರೆ. ಆದರೂ ಗುಂಡಿಗಳನ್ನು ಮುಚ್ಚುವಲ್ಲಿ ಬಿಬಿಎಂಪಿ ವಿಫ‌ಲವಾಗಿದೆ ಎಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಎಂಟಿಸಿ ಬಸ್‌ ನಿಲ್ದಾಣದ ಮುಂಭಾಗದಲ್ಲಿರುವ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಪ್ರವೇಶಿಸುವ ರಸ್ತೆಯನ್ನು ವೈಟ್‌ ಟಾಪಿಂಗ್‌ ಮಾಡಲಾಗಿದ್ದು, ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಹೋಗುವ ರಸ್ತೆ ಗುಂಡಿಮಯವಾಗಿದೆ. ಚಾಲಕರು 1 ಗುಂಡಿಯನ್ನು ತಪ್ಪಿಸಲು ಹೋಗಿ ಮತ್ತೂಂದು ಗುಂಡಿಗೆ ಚಕ್ರಗಳನ್ನು ಇಳಿಸುತ್ತಿದ್ದಾರೆ‌. ಇದರಿಂದಾಗಿ ಪ್ರಯಾಣಿಕರಿಗೂ ತೊಂದರೆಯುಂಟಾಗುತ್ತದೆ.

ಮಳೆ ಬಂದರೆ ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಯಲ್ಲಿ ಕೊಚ್ಚೆ ನೀರು ಸಹ ನಿಂತಿರುತ್ತದೆ. ಈ ರಸ್ತೆಯಲ್ಲಿ ಓಡಾಡಬೇಕಾದರೆ, ಮೂಗು ಮುಚ್ಚಿಕೊಂಡು ಹೋಗಬೇಕು. ಜತೆಗೆ ಯಾವುದಾದರೂ ವಾಹನ ಬಂದರೆ ಮಳೆ, ಕೊಚ್ಚೆ ನೀರು ಸಿಡಿಯದಂತೆ ಎಚ್ಚರವಹಿಸಬೇಕು ಎಂದು ಕಾರ್ತಿಕ್‌ ಎಂಬ ಪ್ರಯಾಣಿಕರೊಬ್ಬರು ದೂರಿದರು.

ಸೆಂಟ್ರಲ್‌ನಿಂದ ಧನ್ವಂತರಿ ರಸ್ತೆವರೆಗೆ ಬರಲು 20 ನಿಮಿಷ ತೆಗೆದುಕೊಂಡರೆ, ಧನ್ವಂತರಿ ರಸ್ತೆಯಿಂದ ಬಿಎಂಟಿಸಿ ಬಸ್‌ ನಿಲ್ದಾಣದೊಳಗೆ ತಲುಪಲು 10 ನಿಮಿಷಕ್ಕೂ ಹೆಚ್ಚು ಸಮಯ ಆಗುತ್ತದೆ. ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಬಿಎಂಟಿಸಿ ಚಾಲಕರೊಬ್ಬರು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದರು.

ಸದ್ಯ ನಿರಂತರವಾಗಿ ಮಳೆ ಬರುತ್ತಿರುವ ಕಾರಣ ಕೆಲಸ ಪ್ರಾರಂಭಿಸಲು ಸಾಧ್ಯವಾಗುತ್ತಿಲ್ಲ. ಮಳೆ ನಿಂತ ತಕ್ಷಣ ಬಿಎಂಟಿಸಿ ಬಸ್‌ ನಿಲ್ದಾಣದ ಕಡೆಗೆ ಹೋಗುವ ರಸ್ತೆಯನ್ನೂ ವೈಟ್‌ ಟಾಪಿಂಗ್‌ ಮಾಡುವ ಕಾರ್ಯವನ್ನು ಆರಂಭಿಸಲಾಗುತ್ತದೆ.-ಲೋಕೇಶ್‌, ಬಿಬಿಎಂಪಿ ಮುಖ್ಯ ಎಂಜಿನಿಯರ್‌

 

ಟಾಪ್ ನ್ಯೂಸ್

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

BBK11: ಯಾರದೋ ಮನೆಯಲ್ಲಿ ಪಾತ್ರೆ ತಿಕ್ಕುತ್ತಿದ್ದೆ.. ದೊಡ್ಮನೆಯಲ್ಲಿ ಕಣ್ಣೀರಿಟ್ಟ ಚೈತ್ರಾ

AUSvsPAK: Australia announces squad for Pak series: Team has no captain!

AUSvsPAK: ಪಾಕ್‌ ಸರಣಿಗೆ ತಂಡ ಪ್ರಕಟಿಸಿದ ಆಸ್ಟ್ರೇಲಿಯಾ: ತಂಡಕ್ಕೆ ನಾಯಕನೇ ಇಲ್ಲ!

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Shimoga: ಹೆಚ್ಚಾಯ್ತು ಕಾಟ; ಕಾಡಾನೆಗಳ ಸೆರೆಗೆ ಮುಂದಾದ ಅರಣ್ಯ ಇಲಾಖೆ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ

Bollywood: 30 ವರ್ಷದ ಬಳಿಕ ಮತ್ತೆ ಥಿಯೇಟರ್‌ಗೆ ಬರಲಿದ್ದಾರೆ ʼಕರಣ್‌ ಅರ್ಜುನ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

Bengaluru: ದುಷ್ಕರ್ಮಿಗಳಿಂದ ಬಸ್‌ ಡ್ರೈವರ್‌, ಕಂಡಕ್ಟರ್‌ಗೆ ಥಳಿತ!

6

Bengaluru: ಹಲ್ಲೆ ನಡೆದರೆ ಪೌರ ಕಾರ್ಮಿಕರು ತಕ್ಷಣವೇ ದೂರು ನೀಡಿ: ಕಮಿಷನರ್‌

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

Arrested: ಪತಿಯ ಕೊಂದಿದ್ದ ಪತ್ನಿ, ಆಕೆಯ ಪ್ರಿಯಕರ ಸೇರಿ ಐವರ ಬಂಧನ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

12

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಸಲಿ ಮತ್ತು ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

3

Mallikatte: ಸಿಟಿ ಆಸ್ಪತ್ರೆ ಜಂಕ್ಷನ್‌; ರಸ್ತೆ ಕಾಂಕ್ರೀಟ್‌ ಕಾಮಗಾರಿ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.