Sandalwood: ʼಧೀರ ಭಗತ್‌ ರಾಯ್‌ʼಗೆ ಭೀಮ ಬಲ


Team Udayavani, Oct 28, 2024, 1:06 PM IST

ʼಧೀರ ಭಗತ್‌ ರಾಯ್‌ʼಗೆ ಭೀಮ ಬಲ

ಧೀರ ಭಗತ್‌ರಾಯ್‌ ಎಂಬ ಸಿನಿಮಾವೊಂದು ತಯಾರಾಗಿದ್ದು, ಬಿಡುಗಡೆಯ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ನಟ ದುನಿಯಾ ವಿಜಯ್‌ ಟ್ರೇಲರ್‌ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು.

ಈ ವೇಳೆ ಮಾತನಾಡಿದ ನಿರ್ದೇಶಕ ಕರ್ಣನ್‌ ಎಸ್‌. ಮಾತನಾಡುತ್ತ, ಎರಡು ವರ್ಷಗಳ ಶ್ರಮ. ಒಂದು ಒಳ್ಳೆಯ ಸಿನಿಮಾದ ಟ್ರೇಲರ್‌ನ್ನು ಒಬ್ಬ ಸ್ಟಾರ್‌ ನಟರ ಕೈಯಲ್ಲಿ ಬಿಡುಗಡೆ ಮಾಡಿಸಬೇಕು ಎಂದುಕೊಂಡಾಗ, ನಮ್ಮ ಕಣ್ಮುಂದೆ ಬಂದಿದ್ದು ದುನಿಯಾ ವಿಜಯ್‌ ಅವರು. ಅವರದ್ದು ತಾಯಿಯಂಥ ಮನಸ್ಸು. ಪ್ರೀತಿಯಿಂದ ಮಾತನಾಡಿಸುತ್ತಾರೆ. ಟ್ರೇಲರ್‌ ನೋಡಿ ಮೆಚ್ಚಿಕೊಂಡರು. “ಸಿನಿಮಾ ಟ್ರೇಲರ್‌ನಲ್ಲೇ ಗೆದ್ದಿದೆ. ಈಗ ಸಿನಿಮಾ ಗೆಲ್ಲಬೇಕು. ಅದಕ್ಕಾಗಿ ನಾನು ನಿನ್ನ ಜೊತೆ ಇರುತ್ತೇನೆ’ ಎಂದು ಪ್ರೋತ್ಸಾಹಿಸಿದ್ದಾರೆ. ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ. ಚಿತ್ರದ ಸಂಕಲನಕಾರ ವಿಶ್ವ ಅವರಿಂದ ಇದು ಚೆನ್ನಾಗಿ ಮೂಡಿಬಂದಿದೆ. ಅವರು ಸಿನಿಮಾದ ಎರಡನೇ ನಿರ್ದೇಶಕ ಎನ್ನಬಹುದು. ಜೊತೆಗೆ ಇಡೀ ತಾಂತ್ರಿಕ ವರ್ಗದವರು ಶ್ರಮವಹಿಸಿದ್ದಾರೆ. ಈ ಸಿನಿಮಾ ನಮ್ಮ ಕಥೆಯಲ್ಲ. ಪ್ರೇಕ್ಷಕರ ಕಥೆ. ನಿಮ್ಮ ಕಥೆಯನ್ನು ನೀವೇ ಚಿತ್ರಮಂದಿರಕ್ಕೆ ಬಂದು ನೋಡಬೇಕು. ಡಿಸೆಂಬರ್‌ನಲ್ಲಿ ಸಿನಿಮಾ ತೆರೆಗೆ ಬರಲಿದೆ ಎನ್ನುತ್ತಾರೆ ನಿರ್ದೇಶಕ ಕರ್ಣನ್‌.

“ಭೂ ಸುಧಾರಣೆ ಕಾಯ್ದೆ ಬಂದಾಗ, ಜಮೀನಾರನೊಬ್ಬ ರೈತರ ಭೂಮಿ ಕಬ್ಜ ಮಾಡುತ್ತಾನೆ. ಅವರ ವಿರುದ್ಧ ನಾಯಕ ಕಾನೂನು ಹೋರಾಟ ಮಾಡುತ್ತಾನೆ. ಈ ಹೋರಾಟದಲ್ಲಿ ಸಾಕಷ್ಟು ತಿರುವು, ಅಸೂಯೇ, ದ್ವೇಷ, ಸಂಘರ್ಷಗಳಿವೆ. ಎಲ್ಲರಿಗೂ ಬದುಕುವ ಹಕ್ಕು ಸಂವಿಧಾನ ಕೊಟ್ಟಿದೆ. ಆ ಸಂವಿಧಾನದ ಒಂದು ಅಂಶವೇ ನಮ್ಮ ಸಿನಿಮಾ. ಸರ್ಕಾರವನ್ನು ಪ್ರಶ್ನಿಸುವ ಕೆಲಸ ಈ ಸಿನಿಮಾದಲ್ಲಾಗಿದೆ. ತಮಿಳಿನ ಜೈ ಭೀಮ್‌, ಅಸುರನ್‌ ಶೈಲಿಯಲ್ಲಿ ಈ ಸಿನಿಮಾ ಮೂಡಿಬಂದಿದೆ’ ಎನ್ನಲು ಅವರು ಮರೆಯುವುದಿಲ್ಲ.

ರಂಗಭೂಮಿ ಕಲಾವಿದ ರಾಕೇಶ್‌ ದಳವಾಯಿ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ. ರಾಜನ್‌ ಅವರ ಪಾತ್ರದ ಹೆಸರು. ಭಗತ್‌ ಸಿಂಗ್‌ ಪ್ರೇರಣೆ, ಹೋರಾಟದ ಮನೋಭಾವ, ಯಾರಿಗೂ ಹೆದರದ ವ್ಯಕ್ತಿತ್ವ ಇದು ನಾಯಕನ ಪಾತ್ರ ವೈಶಿಷ್ಟ್ಯ. ವೃತ್ತಿಯಿಂದ ಎಚ್‌ಆರ್‌ ಮ್ಯಾನೇಜರ್‌ ಆಗಿರುವ ಸುಚಾರಿತಾ ಅವರು ಚಿತ್ರಕ್ಕೆ ನಾಯಕಿ. ಉಳಿದಂತೆ ಶರತ್‌ ಲೋಹಿತಾಶ್ವ, ನೀನಾಸಂ ಅಶ್ವತ್ಥ, ಎಂ.ಕೆ. ಮಠ, ಹರಿರಾಮ್‌, ಸಂದೇಶ್‌ ನಟಿಸಿದ್ದಾರೆ.

ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ, ಸೆಲ್ವಂ ಜಾನ್‌ ಛಾಯಾಗ್ರಹಣ, ಎನ್‌.ಎಂ. ವಿಶ್ವ ಸಂಕಲನ, ಥ್ರಿಲ್ಲರ್‌ ಮಂಜು ಹಾಗೂ ವಿಕ್ರಮ್‌ ಮೊರ್‌ ಅವರ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಸಿನಿಮಾದಲ್ಲಿ ಐದು ಆ್ಯಕ್ಷನ್‌ ಸನ್ನಿವೇಶಗಳಿವೆ. ಮೂರು ಹಾಡುಗಳಿಗೆ ವಿಜಯ್‌ ಪ್ರಕಾಶ್‌, ಸಾಕ್ಷಿ ಕಲ್ಲೂರ್‌, ಪ್ರಭು ಸ್ವಾಮಿ, ಪಂಚಮ್‌ ಧ್ವನಿಯಾಗಿದ್ದಾರೆ.

ಟಾಪ್ ನ್ಯೂಸ್

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

BBK11: 11 ವರ್ಷದ ಬಿಗ್‌ಬಾಸ್‌ ಜರ್ನಿಯಲ್ಲಿ ಕಿಚ್ಚ ಗೈರಾಗಿದ್ದು ಎಷ್ಟು ಬಾರಿ, ಯಾಕೆ?

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!

Railways’ ವಾರ್ಷಿಕ ಆದಾಯ ಎಷ್ಟು ಗೊತ್ತಾ?2023-24ನೇ ಸಾಲಿನ ಪ್ರಯಾಣಿಕರ ಸಂಖ್ಯೆ 648 ಕೋಟಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Renukaswamy Case: ಹೈಕೋರ್ಟ್‌ ನಲ್ಲಿ ದರ್ಶನ್‌ ಜಾಮೀನು ಅರ್ಜಿ ಮುಂದೂಡಿಕೆ

Pranam devaraj starrer Son of muthanna movie

Son of Muthanna; ಮುತ್ತಣ್ಣನಿಗೆ ಶಿವಣ್ಣ ಸಾಥ್‌: ತಂದೆ-ಮಗನ ಬಾಂಧವ್ಯದ ಸುತ ಸಿನಿಮಾ

naa ninna bidalaare new kannada movie

Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ

Do you know why cricketers chew gum? Here’s the reason

Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್‌ ಹನುಮಂತ ಪ್ರತಿಮೆ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.