Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
ವ್ಲಾಗ್ ವಿಡಿಯೋಸ್ ಮೂಲಕ ಖ್ಯಾತಿ ಗಳಿಸಿದ್ದ ದಂಪತಿ
Team Udayavani, Oct 28, 2024, 1:52 PM IST
ತಿರುವನಂತಪುರಂ: ಕೇರಳದ ಖ್ಯಾತ ವ್ಲಾಗರ್ ದಂಪತಿ (Vlogger couple) ಅನುಮಾನಸ್ಪಾದ ರೀತಿಯಲ್ಲಿ ಮೃತಪಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ತಿರುವನಂತಪುರಂ ನಗರದಿಂದ ಸುಮಾರು 40 ಕಿಮೀ ದೂರದಲ್ಲಿರುವ ಪರಸ್ಸಾಲದಲ್ಲಿರುವ ತಮ್ಮ ಮನೆಯಲ್ಲಿ ದಂಪತಿಗಳು ಶವವಾಗಿ ಪತ್ತೆಯಾಗಿದ್ದಾರೆ.
ಸೆಲ್ವರಾಜ್ (45) ಮತ್ತು ಅವರ ಪತ್ನಿ ಪ್ರಿಯಾ (37) ತಮ್ಮ ಮನೆಯಲ್ಲಿ ಅನುಮಾನಸ್ಪಾದ ರೀತಿಯಲ್ಲಿ ಮೃತಪಟ್ಟಿರುವ ಸ್ಥಿತಿಯಲ್ಲಿ ಭಾನುವಾರ (ಅ.27ರಂದು) ಮುಂಜಾನೆ ಪತ್ತೆಯಾಗಿದ್ದಾರೆ.
ಎರ್ನಾಕುಲಂನಲ್ಲಿ ಕೆಲಸ ಮಾಡುತ್ತಿರುವ ದಂಪತಿಯ ಪುತ್ರ ಮನೆಗೆ ಹಿಂದಿರುಗಿದಾಗ ತಂದೆ ನೇಣುಬಿಗಿದ ಸ್ಥಿತಿಯಲ್ಲಿದ್ದು, ತಾಯಿ ಬೆಡ್ನಲ್ಲಿ ಜೀವ ಇಲ್ಲದ ಸ್ಥಿತಿಯಲ್ಲಿ ಮಲಗಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಪ್ರಾಥಮಿಕ ತನಿಖೆಯಿಂದ ಇದೊಂದು ಆತ್ಮಹತ್ಯೆ ಪ್ರಕರಣವೆಂದು ಪೊಲೀಸರು ದೂರು ದಾಖಲಿಸಿಕೊಂಡಿದ್ದು, ಪೋಸ್ಟ್ಮಾರ್ಟಮ್ ವರದಿಯಲ್ಲಿ ಪ್ರಿಯಾ ಅವರ ಕುತ್ತಿಗೆಯಲ್ಲಿ ಕತ್ತು ಹಿಸುಕಿದ ಗುರುತುಗಳು ಕಂಡುಬಂದಿದೆ. ಹೀಗಾಗಿ ಕೊಲೆಯ ಆಯಾಮದಲ್ಲೂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಇಬ್ಬರು ಬೇರೆ ಬೇರೆ ಕೋಣೆಯಲ್ಲಿ ಪತ್ತೆಯಾಗಿದ್ದು, ಮೊದಲು ಪತ್ನಿಯನ್ನು ಕೊಂದ ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಕೌಟುಂಬಿಕ ಕಲಹದಿಂದ ಈ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ತನಿಖೆ ಮುಂದುವರೆಸಿದ್ದಾರೆ.
ಶುಕ್ರವಾರ (ಅ.25ರಂದು) ಅಷ್ಟೇ ದಂಪತಿ ‘ಈ ಜೀವನ ವಿದಾಯ ಹೇಳುತ್ತಿದೆ’ಎನ್ನುವ ಹಾಡಿನ ಹಿನ್ನೆಲೆಯಲ್ಲಿ ತಮ್ಮ ಅನೇಕ ಫೋಟೋಗಳಿರುವ ವಿಡಿಯೋವನ್ನು ಅಪ್ಲೋಡ್ ಮಾಡಲಾಗಿತ್ತು.
ಸೆಲ್ವರಾಜ್ ವೃತ್ತಿಯಲ್ಲಿ ಮೇಸ್ತ್ರಿ ಆಗಿದ್ದು, ಪ್ರಿಯಾ ಸಮುದಾಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಳು ಎನ್ನಲಾಗಿದೆ. ದಂಪತಿ ಬಿಡುವಿನ ವೇಳೆಯಲ್ಲಿ ‘ಸೆಲ್ಲು ಫ್ಯಾಮಿಲಿ’ (Sellu Family) ಎನ್ನುವ ತಮ್ಮ ಯೂಟ್ಯೂಬ್ ದಿನ ನಿತ್ಯ ವ್ಲಾಗ್ ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಿದ್ದರು. ಅಡುಗೆ ಸಂಬಂಧಿತ ವಿಡಿಯೋ ಹಾಗೂ ದಿನ ನಿತ್ಯ ಚಟುವಟಿಕೆಗಳ ವ್ಲಾಗ್ ಮಾಡುತ್ತಿದ್ದರು. 19 ಸಾವಿರ ಸಬ್ ಸ್ಕ್ರೈಬರ್ಸ್ ಇವರ ಚಾನೆಲ್ಗೆ ಇದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
ಸಲ್ಮಾನ್ ವಿಷಯದಿಂದ ದೂರವಿರಿ… ಬಿಷ್ಣೋಯ್ ಗ್ಯಾಂಗ್ ನಿಂದ ಬಿಹಾರ ಸಂಸದನಿಗೆ ಬೆದರಿಕೆ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು
MUST WATCH
ಹೊಸ ಸೇರ್ಪಡೆ
Miracle: ವರ್ಷದಲ್ಲಿ 6ರಿಂದ 7 ತಿಂಗಳು ನೀರಿನಲ್ಲಿ ಮುಳುಗಡೆಯಾಗಿರುತ್ತೆ ಈ ದೇವಸ್ಥಾನ
Chewing Gum: ಕ್ರಿಕೆಟಿಗರು ಚೂಯಿಂಗ್ ಗಮ್ ಜಗಿಯುವುದು ಯಾಕೆ ಗೊತ್ತಾ? ಇಲ್ಲಿದೆ ಕಾರಣ
Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ
Bidar; ಪಟ್ಟಭದ್ರ ಹಿತಾಸಕ್ತಿಗಳಿಂದ ವಚನ ಸಾಹಿತ್ಯದ ಸಂರಕ್ಷಣೆಯಾಗಬೇಕು: ಡಾ.ಜೆ.ಎಸ್.ಪಾಟೀಲ
Uttara Pradesh: ವಾರಾಣಸಿಯಲ್ಲಿ 51 ಅಡಿ ಎತ್ತರದ ಬೃಹತ್ ಹನುಮಂತ ಪ್ರತಿಮೆ ಅನಾವರಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.