Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ


Team Udayavani, Oct 28, 2024, 5:02 PM IST

Udupi: ವಿವಿಧ ಬೇಡಿಕೆ ಈಡೇರಿಸುವಂತೆ ಅಂಗವಿಕಲರಿಂದ ಪ್ರತಿಭಟನೆ

ಉಡುಪಿ: ಜಿಲ್ಲಾ ಅಂಗವಿಕಲರು ಹಾಗೂ ಪಾಲಕರ ಒಕ್ಕೂಟ ಸಮಿತಿ, ದಿವ್ಯಾಂಗರ ರಕ್ಷಣ ಸಮಿತಿ, ಸಕ್ಷಮ ಸಂಸ್ಥೆ ಹಾಗೂ ವಿವಿಧ ಜಿಲ್ಲೆಯ ಸಂಘ-ಸಂಸ್ಥೆಗಳ ವತಿಯಿಂದ ವಿಕಲಚೇತನರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಿಕಲಚೇತನರು ಗಾಲಿಕುರ್ಚಿ, ಟ್ರಾಲಿ, ವಾಕರ್‌, ಹುನ್ನುಹುರಿ ಸಮಸ್ಯೆಯಿಂದ ಬಳುತ್ತಿದ್ದವರು ಹಾಸಿಗೆ ಸಮೇತರಾಗಿ ಬಂದು ಪ್ರತಿಭಟನೆಯಲ್ಲಿ ಪಾಲ್ಗೊಂಡು ತಮ್ಮ ನೋವನ್ನು ಜಿಲ್ಲಾಧಿಕಾರಿಗಳ ಎದುರು ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಮನವಿ ಸ್ವೀಕರಿಸಿ, ರಾಜ್ಯ ಸರಾರಕ್ಕೆ ಸಲ್ಲಿಸುವುದಾಗಿ ತಿಳಿಸಿದರು.

ಪ್ರತಿಭಟನ ಸಭೆಯಲ್ಲಿ ಮಾತನಾಡಿದ ದಿವ್ಯಾಂಗರ ರಕ್ಷಣ ಸಮಿತಿಯ ಸಂಚಾಲಕ ವಿಜಯ ಕೊಡವೂರು, ಜಿಲ್ಲೆಯಲ್ಲಿ ಸುಮಾರು 13ರಿಂದ 15 ಸಾವಿರದಷ್ಟು ಅಂಗವಿಕಲರಿದ್ದಾರೆ. ಬೆನ್ನುಮೂಳೆ ಮುರಿದ 124 ರಷ್ಟು ಮಂದಿ ಮನೆಯಲ್ಲಿ ಹಾಸಿಗೆ ಹಿಡಿದಿದ್ದಾರೆ. ಇವರಿಗೆ ಮನೆಗಳಲ್ಲಿಯೇ ವೈದ್ಯಕೀಯ ಸೇವೆ ಸಿಗಬೇಕು. ಅಂಗವಿಕಲರಿಗೆ ಶೇ.5ರಷ್ಟು ಮೀಸಲಿರುವ ಹಣ ದುರುಪಯೋಗವಾಗುತ್ತಿದೆ. ಈ ಅನುದಾನವನ್ನು ಅಂಗವಿಕಲರ ಕಲ್ಯಾಣಕ್ಕೆ ಬಳಸದೆ ಅಂಗವಿಕಲರ ಹೆಸರಲ್ಲಿ ರಸ್ತೆ ಅಭಿವೃದ್ಧಿ ಪಡಿಸಲು ಖರ್ಚು ಮಾಡಲಾಗುತ್ತಿದೆ. ಈ ಹಿಂದಿನಿಂತೆಯೇ ಅಂಗವಿಕಲರಿಗೆ ಸರಕಾರ ವಿವಿಧ ಸವಲತ್ತುಗಳನ್ನು ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಅಧ್ಯಕ್ಷ ಮಂಜುನಾಥ ಹೆಬ್ಟಾರ್‌ ಮಾತನಾಡಿ, ಹೀಮೊಫಿಯಾ ಚುಚ್ಚುಮದ್ದಿಗೆ ಅನುದಾನ ಕಾಯ್ದಿರಿಸಿ ಚುಚ್ಚುಮದ್ದು ಸದಾಕಾಲ ಲಭ್ಯವಿರುವಂತೆ ಮಾಡಬೇಕು. ಜಿಲ್ಲೆಯ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿಯೂ ಲಸಿಕೆ ಸಿಗುವಂತಾಗಬೇಕು ಎಂದರು.

ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟ ಕುಂದಾಪುರ-ಬೈಂದೂರು ತಾಲೂಕು ಸಮಿತಿ ಅಧ್ಯಕ್ಷ ಸಂತೋಷ ಜಾಲಾಡಿ ಮಾತನಾಡಿ, ಈ ಹಿಂದೆ ಖಾಸಗಿ ಬಸ್‌ಗಳಲ್ಲಿ ವಿಕಲಚೇತನರಿಗೆ ಶೇ.50 ರಿಯಾಯಿತಿ ನೀಡುತ್ತಿದ್ದು, ಕೋವಿಡ್‌ ಬಳಿಕ ಅದನ್ನು ಸ್ಥಗಿತಗೊಳಿಸಲಾಗಿದೆ. ಅದನ್ನು ಮತ್ತೆ ಜಾರಿಗೊಳಿಸಬೇಕು. ಎಂಡೋಸಲ್ಫಾನ್‌ ಪೀಡಿತರಿಗೆ ಪುನರ್‌ ಸಮೀಕ್ಷೆ ನಡೆಸಲು ಕೈ ಬಿಟ್ಟಿರುವ ಗ್ರಾಮಗಳಾದ ಉಪ್ಪುಂದ, ತಲ್ಲೂರು, ಉಪ್ಪಿನಕುದ್ರು, ಕಿರಿಮಂಜೇಶ್ವರ, ಹೆಮ್ಮಾಡಿ, ಕಟ್‌ಬೆಲೂ¤ರು, ನಾಗೂರು, ಮರವಂತೆ, ನಾವುಂದ, ಗಂಗೊಳ್ಳಿ ಪ್ರದೇಶಗಳು ಎಂಡೋಸಲ್ಫಾನ್‌ ಸಿಂಪಡಣೆಯ ಗಡಿರೇಖೆ ಪ್ರದೇಶಗಳಾಗಿದ್ದು, ಈ ಪ್ರದೇಶಗಳನ್ನು ಎಂಡೋಸಲ#ನ್‌ ಪೀಡಿತ ಪ್ರದೇಶಗಳೆಂದು ಪರಿಗಣಿಸಲು ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿದರು.

ಗೌರವಾಧ್ಯಕ್ಷ ವೆಂಕಟೇಶ್‌ ಕೋಣಿ, ಪ್ರಮುಖರಾದ ರವೀಂದ್ರ, ಲತಾ ಭಟ್‌, ಹರೀಶ್‌ ಶೆಟ್ಟಿ, ಪೃಥ್ವಿರಾಜ್‌ ಶೆಟ್ಟಿ, ಹರೀಶ್‌ ತೋಳ್ಪಾಡಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

HK-Patil

Waqf Property: ವಿಜಯಪುರದ ರೈತರಿಗೆ ಕೊಟ್ಟಿರುವ ನೋಟಿಸ್‌ ವಾಪಸ್‌ಗೆ ಕ್ರಮ: ಸಚಿವ ಪಾಟೀಲ್

army

Jammu & Kashmir: ಸೇನಾ ವಾಹನದ ಮೇಲೆ ದಾಳಿ ನಡೆಸಿದ ಮೂವರು ಉಗ್ರರ ಹ*ತ್ಯೆ

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

Ajekar Case: ಆರೋಪಿ ದಿಲೀಪ್‌ ಹೆಗ್ಡೆಗೆ ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್

4(1)

Kaup ಕೊಳಚೆ ಮುಕ್ತಿಗೆ ಸರ್ವರ ಸಹಕಾರ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ

ISREL

Israel ದಾಳಿ ಇನ್ನಷ್ಟು ತೀವ್ರ; 43 ಸಾವಿರಕ್ಕೂ ಹೆಚ್ಚು ಬ*ಲಿ: ವಿಶ್ವಸಂಸ್ಥೆ ತೀವ್ರ ಕಳವಳ

dw

Kundapura: ಕುಸಿದು ಬಿದ್ದು ವ್ಯಕ್ತಿ ಸಾವು

1-a-ranji

Malayalam; ಪುರುಷನ ಮೇಲೆ ಲೈಂಗಿ*ಕ ದೌರ್ಜನ್ಯ!: ನಿರ್ದೇಶಕ ರಂಜಿತ್ ಮೇಲೆ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.