ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ

ಕನ್ನಡ ನಾಡು ಕ್ಷಾತ್ರತೇಜದ ದೊಡ್ಡ ಪರಂಪರೆಯೇ ಹೊಂದಿದೆ.

Team Udayavani, Oct 28, 2024, 9:48 AM IST

ಪ್ರತಿ ಹೆಣ್ಣಿನ ಹೋರಾಟದ ಹಿಂದಿದೆ ಈ ನೆಲದ ಸ್ವಾಭಿಮಾನ: ಪ್ರೊ. ತ್ಯಾಗರಾಜ

ಉದಯವಾಣಿ ಸಮಾಚಾರ
ಬೆಳಗಾವಿ: ಹೋರಾಟ ಎಂಬುದು ಬಾಹ್ಯಿಕ ಸ್ಫೂರ್ತಿಯಿಂದ ಬಂದಾಗ ಅದು ಆ ಕ್ಷಣದ ಹೋರಾಟವಾಗುತ್ತದೆ. ಅದೇ ಅಂತರಾಳದಿಂದ ಬಂದಾಗ ಸಮಸ್ತ ಪರಿಸರವನ್ನೇ ಬಡಿದೆಬ್ಬಿಸುತ್ತದೆ. ಇದಕ್ಕೆ ರಾಣಿ ಚನ್ನಮ್ಮನ ಹೋರಾಟವೇ ಸಾಕ್ಷಿ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಸಿ ಎಂ ತ್ಯಾಗರಾಜ ಅಭಿಪ್ರಾಯಪಟ್ಟರು.

ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ರಾಣಿ ಚನ್ನಮ್ಮ ಅಧ್ಯಯನ ಪೀಠ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಹಯೋಗದಲ್ಲಿ ರಾಣಿ ಚನ್ನಮ್ಮನ ಐತಿಹಾಸಿಕ ವಿಜಯದ 200ನೇ ವರ್ಷಾಚರಣೆ ಸಂಭ್ರಮದ ಕುರಿತು ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪುರುಷನ ಬಹುತೇಕ ಹೋರಾಟವು ಅಧಿಕಾರದ ಪ್ರತೀಕವಾದರೆ, ಅದೇ ಪ್ರತಿ ಹೆಣ್ಣಿನ ಹೋರಾಟದ ಹಿಂದೆ ಈ ನೆಲದ ಸಂಸ್ಕೃತಿ,
ಸ್ವಾಭಿಮಾನ ಅಡಗಿರುತ್ತದೆ ಎಂದರು.

ಈ ನೆಲದ ಸಂಸ್ಕೃತಿಯ ಅಳಿವು ಉಳಿವಿನ ಪ್ರಶ್ನೆ ಬಂದಾಗ ಪ್ರತಿ ಹೆಣ್ಣು ಶತ್ರುಗಳ ವಿರುದ್ಧ ರಣಾಂಗಣದಲ್ಲಿ ಹೋರಾಡಿರುವುದು ನಾಡಿನ ಚರಿತ್ರೆಯುದ್ದಕ್ಕೂ ದಾಖಲಾಗಿದೆ. ಕನ್ನಡ ನಾಡು ಕ್ಷಾತ್ರತೇಜದ ದೊಡ್ಡ ಪರಂಪರೆಯೇ ಹೊಂದಿದೆ.

ಚನ್ನಮ್ಮನ ಕ್ಷಾತ್ರತೇಜದ ಪರಂಪರೆಯಿಂದಾಗಿ ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದವರಿಗೆ ಅದರಲ್ಲೂ ವಿಶೇಷವಾಗಿ ಮಹಿಳೆಯರಿಗೆ ಹೆಚ್ಚು ಸ್ಫೂರ್ತಿ ನೀಡಿತು ಎಂದು ಹೇಳಿದರು. ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯರಾದ ಮಹಾಂತೇಶ ಕಂಬಾರ ಮಾತನಾಡಿ, ರಾಣಿ ಚನ್ನಮ್ಮ ಈ ನಾಡಿನ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಯ ಕಹಳೆ ಮೊಳಗಿಸಿದಳು. ಅವಳ ಸಾಹಸ ಮತ್ತು ಹೋರಾಟಗಳು ಸಮಾಜಕ್ಕೆ ಸ್ಫೂರ್ತಿ ಎಂದರು.

ವಿವಿಯ ವಿದ್ಯಾವಿಧೇಯಕ ಪರಿಷತ್ತಿನ ಸದಸ್ಯರಾದ ಡಾ| ನಿರ್ಮಲಾ ಬಟ್ಟಲ ಅವರು ಕಿತ್ತೂರು ಚನ್ನಮ್ಮನ ಕುರಿತು ವಿಶೇಷ ಉಪನ್ಯಾಸ ನೀಡಿದರು. ಕುಲಸಚಿವ ಸಂತೋಷ ಕಾಮಗೌಡ, ಹಣಕಾಸು ಅಧಿಕಾರಿ ಎಂ. ಎ. ಸಪ್ನಾ, ಅಧ್ಯಯನ ಪೀಠದ ನಿರ್ದೇಶಕಿ ಪ್ರೊ. ನಾಗರತ್ನ ಪರಾಂಡೆ, ಪ್ರಾಚಾರ್ಯ ಎಂ ಜಿ ಹೆಗಡೆ, ಹಿರಿಯ ಸಾಹಿತಿಯರು ಪಾಟೀಲ ಉಪಸ್ಥಿತರಿದ್ದರು.

ಪ್ರಿಯಾಂಕಾ ತಿಲಗಾರ ಪ್ರಾರ್ಥಿಸಿದರು. ಶಾಂಭವಿ ಥೋರ್ಲಿ ನಿರೂಪಿಸಿದರು, ಗಾಯತ್ರಿ ಹಲಗಿ ಸ್ವಾಗತಿಸಿದರು. ಡಾ. ಪ್ರೀತಿ ಪದಪ್ಪಗೋಳ ಪರಿಚಯಿಸಿದರು. ಅಧ್ಯಯನ ಪೀಠದ ಸಂಯೋಜಕ ಡಾ| ಮಹೇಶ ಗಾಜಪ್ಪನರ ವಂದಿಸಿದರು.

ಟಾಪ್ ನ್ಯೂಸ್

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!

BYV-yathnal

Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

1-snehamayi

MUDA case;ದೂರಿಗೆ ಪೂರಕವಾಗಿ ಇ.ಡಿ.ಗೆ ‘ವಿಡಿಯೋ ಸಾಕ್ಷ್ಯ’ ನೀಡಿದ ಸ್ನೇಹಮಯಿ ಕೃಷ್ಣ

Beluru

Sagara: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಸರ್ಕಾರದಿಂದ ಶೀಘ್ರವೇ ಪರಿಹಾರ: ಶಾಸಕ ಬೇಳೂರು

4

Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

ತೆಲಸಂಗ: ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ

ತೆಲಸಂಗ: ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ

baby

Belagavi; ಬಿಮ್ಸ್‌ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು

jenu nona

Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

4

Belthangady: ಮನೆಯಿಂದ ನಗದು, ಚಿನ್ನಾಭರಣ ಕಳವು

3

Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್‌ ನಿಂದ ಹಲ್ಲೆ, ಪೆಪ್ಪರ್‌ ಸ್ಪ್ರೇ!

crime

Padubidri: ಪಾದಯಾತ್ರಿಗಳಿಗೆ ಮೋಟಾರು ಬೈಕ್‌ ಢಿಕ್ಕಿ; ಇಬ್ಬರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.