Kasaragod: ಕಳವು ಪ್ರಕರಣ; ಆರೋಪಿಯ ಬಂಧನ
Team Udayavani, Oct 28, 2024, 10:00 PM IST
ಕಾಸರಗೋಡು: ಬೇಳ ರತ್ನಗಿರಿಯ ಶ್ರೀ ಕುದ್ರೆಕ್ಕಾಳಿ ಅಮ್ಮ ಕ್ಷೇತ್ರದಿಂದ ಗಂಟೆಗಳನ್ನು ಕಳವು ಮಾಡಿದ ಆರೋಪಿ ಮೆಣಸಿನಪಾರೆ ನಿವಾಸಿ ಸತೀಶ್ ಯಾನೆ ದೀಪಕ್(40)ನನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ.
ಕ್ಷೇತ್ರದಿಂದ ಕಳವು ಮಾಡಿದ ಎಂಟು ಗಂಟೆಗಳನ್ನು ಬದಿಯಡ್ಕದ ಗುಜರಿ ಅಂಗಡಿಗೆ ಮಾರಾಟ ಮಾಡಲು ಯತ್ನಿಸಿದ್ದನು. ಗಂಟೆಗಳನ್ನು ನೋಡಿ ಸಂಶಯಗೊಂಡ ಅಂಗಡಿ ಮಾಲಕ ಈ ವಿಷಯವನ್ನು ಕೂಡಲೇ ಪೊಲೀಸರಿಗೆ ತಿಳಿಸಿದ್ದರು. ತತ್ಕ್ಷಣ ಅಂಗಡಿಗೆ ಬಂದ ಪೊಲೀಸರು ಆತನನ್ನು ಬಂಧಿಸಿದರು.
ಈ ಗಂಟೆಗಳಿಗೆ ಒಟ್ಟು 16 ಸಾವಿರ ರೂ. ಮೌಲ್ಯ ಅಂದಾಜಿಸಲಾಗಿದೆ. ಗಂಟೆ ಕಳವಿನ ಬಗ್ಗೆ ಕ್ಷೇತ್ರದ ಆಡಳಿತ ಸಮಿತಿ ಜತೆ ಕಾರ್ಯದರ್ಶಿ ಉದಯಕೃಷ್ಣ ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದರು. ಬಂಧಿತ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಮನೆಯೊಂದರ ಅಂಗಳದಲ್ಲಿ ಒಣಗಲು ಹಾಕಿದ್ದ ಅಡಿಕೆ ಕಳವು, ಗೋದಾಮಿನಿಂದ ಮಕ್ಕಳ ಪೌಷ್ಠಿಕ ಆಹಾರ ಕಳವು ಪ್ರಕರಣದಲ್ಲಿ ಆರೋಪಿಯಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್
SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ
Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್ ಪೂಂಜ
Ranji; ಅಗರ್ವಾಲ್ ಶತಕ: 144 ರನ್ ಮುನ್ನಡೆಯಲ್ಲಿ ಕರ್ನಾಟಕ
Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.