Mangaluru: ಅಪಘಾತದ ಬಳಿಕ ಕಾರು ಚಾಲಕನಿಗೆ ಲೋಹದ ಪಂಚ್ ನಿಂದ ಹಲ್ಲೆ, ಪೆಪ್ಪರ್ ಸ್ಪ್ರೇ!
Team Udayavani, Oct 28, 2024, 10:35 PM IST
ಮಂಗಳೂರು: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಬಳಿಕ ಬೈಕ್ ಸವಾರ ಕಾರು ಚಾಲಕನಿಗೆ ಲೋಹದ ಪಂಚ್ ನಿಂದ ಹಲ್ಲೆಗೈದು ಮೆಣಸಿನ ಪುಡಿ ಎರಚಿದ ಘಟನೆ ನಗರದ ಕದ್ರಿ ಶಿವಭಾಗ್ ನಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಬೆಳಗ್ಗೆ ಸುಮಾರು 10.30ರಿಂದ 10.45ರ ಅವಧಿಯಲ್ಲಿ ಕದ್ರಿ ಶಿವಭಾಗ್ನ ಪೆಟ್ರೋಲ್ ಬಂಕ್ ಬಳಿ ಓಮ್ನಿ ಕಾರು ಮತ್ತು ಬೈಕ್ ನಡುವೆ ಸಣ್ಣ ಮಟ್ಟಿನ ಅಪಘಾತ ಸಂಭವಿಸಿತ್ತು. ಆಗ ರೊಚ್ಚಿಗೆದ್ದ ಬೈಕ್ ಸವಾರ ತನ್ನ ಬಳಿ ಇದ್ದ ಲೋಹದ ಪಂಚ್ನಿಂದ ಓಮ್ನಿ ಕಾರು ಚಾಲಕನ ಮುಖಕ್ಕೆ ಗುದ್ದಿ, ಕಣ್ಣಿಗೆ ಪೆಪ್ಪರ್ ಸ್ಪ್ರೇ ಮಾಡಿ ಕ್ರೌರ್ಯ ಮೆರೆದ್ದಾನೆ ಎಂಉ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತಕ್ಷಣ ಸ್ಥಳೀಯರು ಆತನನ್ನು ಹಿಡಿದು 112 ಪೊಲೀಸ್ ವಾಹನಕ್ಕೆ ಕರೆ ಮಾಡಿದ್ದರು. ಪೊಲೀಸರು ಯುವಕನನ್ನು ಕರೆದೊಯ್ದರು. ಆತನ ಬಳಿ ಆಯುಧವೂ ಇತ್ತು. ಬೇರೆ ಕೃತ್ಯ ಮಾಡಲು ಸಂಚು ನಡೆಸಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ದೂರು ದಾಖಲಾದ ಬಳಿಕ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wenlock Hospital: 50 ಹಾಸಿಗೆಗಳ ತೀವ್ರ ನಿಗಾ ಘಟಕಕ್ಕೆ ಇಂದು ಶಿಲಾನ್ಯಾಸ
Mangaluru: ಪಿಜಿಯಿಂದ ವಿದ್ಯಾರ್ಥಿನಿಯರ ಮೊಬೈಲ್, ಪರ್ಸ್ ಕಳವು
Mangaluru: ಚೆಕ್ ಅಮಾನ್ಯ ಪ್ರಕರಣ; ಆರೋಪಿ ಖುಲಾಸೆ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪ; 43.32 ಲಕ್ಷ ರೂ. ವಂಚನೆ
Panambur: ಮಾದಕ ವಸ್ತು ಸಾಗಾಟ-ಮಾರಾಟ ಪ್ರಕರಣ; ವಿದೇಶಿ ಪ್ರಜೆ ಸೇರಿ 6 ಆರೋಪಿಗಳ ಸೆರೆ
MUST WATCH
ಹೊಸ ಸೇರ್ಪಡೆ
Deepavali Festival: ಕೆಎಸ್ಸಾರ್ಟಿಸಿಯಿಂದ ಹೆಚ್ಚುವರಿ ಬಸ್
SDM Ujire: ರಚನಾತ್ಮಕ ಚಿಂತನೆಯಿಂದ ನವ ಮನ್ವಂತರ: ಡಾ.ಡಿ.ವೀರೇಂದ್ರ ಹೆಗ್ಗಡೆ
Cast Census: ಬಿ.ಕೆ.ಹರಿಪ್ರಸಾದರಿಂದ ಹಿಂದೂ ಭಾವನೆಗೆ ಧಕ್ಕೆ: ಶಾಸಕ ಹರೀಶ್ ಪೂಂಜ
Ranji; ಅಗರ್ವಾಲ್ ಶತಕ: 144 ರನ್ ಮುನ್ನಡೆಯಲ್ಲಿ ಕರ್ನಾಟಕ
Asian Champions Trophy Hockey; ವನಿತಾ ತಂಡಕ್ಕೆ ಸಲೀಮಾ ಟೇಟೆ ನಾಯಕಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.