Waqf Property: ಶಾಸಕ ಯತ್ನಾಳ್‌ ಆಕ್ರೋಶ ಬೆನ್ನಲ್ಲೇ ಬಿಜೆಪಿ ‘ವಕ್ಫ್ ತಂಡ’ ಪುನಾರಚನೆ

ವಿಜಯೇಂದ್ರ ಕಾರ್ಯಕ್ರಮವೇ ನಮ್ಮನ್ನು ತುಳಿಯುವುದು ಎಂದ ಶಾಸಕ ಬಸನಗೌಡ ಪಾಟೀಲ್‌

Team Udayavani, Oct 28, 2024, 9:32 PM IST

BYV-yathnal

ಬೆಂಗಳೂರು: ವಿಜಯಪುರ ಜಿಲ್ಲೆಯಲ್ಲಿ ವಕ್ಫ್ ಮಂಡಳಿಯು ಆಸ್ತಿ ವಶಕ್ಕಾಗಿ ರೈತರಿಗೆ ನೋಟಿಸ್‌ ನೀಡಿರುವ ಸಂಬಂಧ ಅಲ್ಲಿಗೆ ಭೇಟಿ ನೀಡಿ ನೊಂದ ರೈತರ ಅಹವಾಲು ಆಲಿಸುವ ಬಿಜೆಪಿ ತಂಡದ ಬಗ್ಗೆ ಅದೇ ಪಕ್ಷದ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ರೋಶ ಹೊರಹಾಕಿದ ಬೆನ್ನಲ್ಲೇ, ಸಂಸದ ಗೋವಿಂದ ಕಾರಜೋಳ ನೇತೃತ್ವದಲ್ಲಿ ರಚಿಸಿದ್ದ ತಂಡವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಪುನಾರಚನೆ ಮಾಡಿದ್ದಾರೆ.

ಈಗಾಗಲೇ ಇರುವ ಸದಸ್ಯರ ಜೊತೆಗೆ ಸಂಸದ ರಮೇಶ್‌ ಜಿಗಜಿಣಗಿ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಜಿಲ್ಲೆಯ ಮಾಜಿ ಅಧ್ಯಕ್ಷ ಎಂ.ಬಿ. ಜಿರಲಿ ಅವರನ್ನು ಸೇರ್ಪಡೆ ಮಾಡಲಾಗಿದೆ. ಇದು ವಿಜಯೇಂದ್ರ ಟೀಂ. ನಾನು ಹಾಗೂ ಸಂಸದರು ಬಿಜೆಪಿ ತಂಡಕ್ಕೆ ಬಹಿಷ್ಕಾರ ಹಾಕಿದ್ದೇವೆ. ವಿಜಯೇಂದ್ರ ಕಾರ್ಯಕ್ರಮವೇ ನಮ್ಮನ್ನು ತುಳಿಯುವುದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅಸಮಾಧಾನವನ್ನು ಹೊರಹಾಕಿದ್ದರು. ಇದರ ಬೆನ್ನಲ್ಲೇ ಪಟ್ಟಿ ಪರಿಷ್ಕರಣೆ ಮಾಡಲಾಗಿದೆ.

ಶಾಸಕರಾದ ಹರೀಶ್‌ ಪೂಂಜಾ, ಮಹೇಶ್‌ ಟೆಂಗಿನಕಾಯಿ, ಮೇಲ್ಮನೆ ಮಾಜಿ ಸದಸ್ಯ ಅರುಣ್‌ ಶಹಾಪುರ, ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಅವರೂ ತಂಡದಲ್ಲಿದ್ದು, ಸಮಿತಿಯ ಎಲ್ಲ ಸದಸ್ಯರೂ ಮಂಗಳವಾರ (ಅ.29) ವಿಜಯಪುರಕ್ಕೆ ಭೇಟಿ ನೀಡಿ ರೈತರ ಅಹವಾಲು ಆಲಿಸಲಿದ್ದಾರೆ.

ವಿಜಯಪುರ ಜಿಲ್ಲೆಗೆ ಇಂದು ಬಿಜೆಪಿ ತಂಡ
ವಕ್ಫ್ ಆಸ್ತಿ ವಿವಾದ ಕುರಿತು ರೈತರ ಅಹವಾಲು ಆಲಿಸಲು ನೇಮಕ ಮಾಡಿರುವ ಬಿಜೆಪಿ ತಂಡ ಮಂಗಳವಾರ ಜಿಲ್ಲೆಗೆ ಭೇಟಿ ನೀಡಲಿದೆ. ಬೆಳಗ್ಗೆ 9 ಗಂಟೆಗೆ ಸಿಂದಗಿಯ ವಿರಕ್ತಮಠ, 9.40ಕ್ಕೆ ಪಡಗಾನೂರ, ಹಡಗಲಿ ಗ್ರಾಮಗಳಿಗೆ ಭೇಟಿ ನೀಡಲಿದೆ. ಬಳಿಕ ಅಥಣಿ ರಸ್ತೆಯಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಮಧ್ಯಾಹ್ನ 1 ಗಂಟೆಗೆ ಸಭೆ ನಡೆಸಿ ರೈತರ ಅಹವಾಲು ಸ್ವೀಕರಿಸಲಿದೆ.

ಅಲ್ಲಿಂದ 3.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ನಿಯೋಗದೊಂದಿಗೆ ತೆರಳಿ ಜಿಲ್ಲಾಧಿಕಾರಿ ಭೇಟಿಯಾಗಲಿದೆ. ಜಿಲ್ಲಾಧಿಕಾರಿ, ಕಂದಾಯ, ಭೂಮಿ ಕೇಂದ್ರ, ವಕ್ಫ್ ಹಾಗೂ ವಿವಿಧ ರೈತ ಪ್ರತಿನಿಧಿಗಳೊಂದಿಗೆ ಜಂಟಿ ಸಭೆ ನಡೆಸುವ ನಿಟ್ಟಿನಲ್ಲಿ ಸಮಾಲೋಚನಾ ಸಭೆ ಮಾಡಲಿದೆ.

ಟಾಪ್ ನ್ಯೂಸ್

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!

1-jd-nikhil

JDS; ವಿರೋಧಿಗಳಿಂದ ನನ್ನ ಹಣೆಬರಹ ಬದಲಿಸಲು ಆಗದು: ನಿಖಿಲ್‌

Kota-poojary

Udupi: ರಾಷ್ಟ್ರೀಕೃತ ಬ್ಯಾಂಕ್‌ಗಳು ಬಡವರ ಸ್ನೇಹಿಯಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

1-wewqe

Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ

Mokshita-Trivik

BBK11: ಬಿಗ್ ಬಾಸ್ ಮನೆಯಲ್ಲಿ ಈ ವರೆಗೆ ಸೈಲೆಂಟ್ ಆಗಿದ್ದ ‘ಪಾರು’ ವೈಲೆಂಟ್ ಆಗಿದ್ದೇಕೆ?

Puturu-Bike

Putturu: ಮುಕ್ರಂಪಾಡಿ ಸಮೀಪ ಅಪಘಾತ; ಓರ್ವ ಗಂಭೀರ

iskon-Thirupathi

Hoax Call: ತಿರುಪತಿಯಲ್ಲಿ ಹೋಟೆಲ್‌ಗಳ ಬಳಿಕ ಈಗ ಇಸ್ಕಾನ್‌ ದೇಗುಲಕ್ಕೂ ಬೆದರಿಕೆ ಸಂದೇಶ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!

1-ree

Aadhaar ವಿರುದ್ಧ ಸಮರ ಸಾರಿದ್ದ ನ್ಯಾ| ಪುಟ್ಟಸ್ವಾಮಿ ನಿಧನ

1-jd-nikhil

JDS; ವಿರೋಧಿಗಳಿಂದ ನನ್ನ ಹಣೆಬರಹ ಬದಲಿಸಲು ಆಗದು: ನಿಖಿಲ್‌

1-wewqe

Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ

Khandre

Bidar;ವಿಮಾನಯಾನ ಪುನರಾರಂಭಕ್ಕೆ ಸಂಪುಟದ ಸಮ್ಮತಿ: ಸಚಿವ ಖಂಡ್ರೆ

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

1-sdads

Selfie ತಂದ ಆಪತ್ತು; ಕೆರೆ ನೀರಲ್ಲಿ ಕೊಚ್ಚಿಹೋದ ಯುವತಿ: 12 ತಾಸುಗಳ ಬಳಿಕ ರಕ್ಷಣೆ!

1-ree

Aadhaar ವಿರುದ್ಧ ಸಮರ ಸಾರಿದ್ದ ನ್ಯಾ| ಪುಟ್ಟಸ್ವಾಮಿ ನಿಧನ

1-jd-nikhil

JDS; ವಿರೋಧಿಗಳಿಂದ ನನ್ನ ಹಣೆಬರಹ ಬದಲಿಸಲು ಆಗದು: ನಿಖಿಲ್‌

Kota-poojary

Udupi: ರಾಷ್ಟ್ರೀಕೃತ ಬ್ಯಾಂಕ್‌ಗಳು ಬಡವರ ಸ್ನೇಹಿಯಾಗಲಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

1-wewqe

Hasan; ಹಾಸನಾಂಬೆಗೆ 4 ದಿನದಲ್ಲಿ 3 ಕೋಟಿ ರೂ. ಆದಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.