![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Oct 30, 2024, 12:34 PM IST
ಭೋಪಾಲ್: ಮಧ್ಯಪ್ರದೇಶದ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳು ಸಾವನ್ನಪ್ಪಿದ್ದು, ಉಳಿದ ಮೂರು ಆನೆಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವನ್ಯಜೀವಿ ಅಧಿಕಾರಿಗಳು ತಿಳಿಸಿದ್ದಾರೆ.
ಏಳು ಆನೆಗಳ ದಿಢೀರ್ ಸಾವಿಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಜಬಲ್ ಪುರದ ವನ್ಯಜೀವಿ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಆರೋಗ್ಯ ಕೇಂದ್ರದಲ್ಲಿ ಏಳು ಆನೆಗಳ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ ಎಂದು ವರದಿ ವಿವರಿಸಿದೆ.
ರೈತರು ತಮ್ಮ ಬೆಳೆಗಳಿಗೆ ಕೀಟ ನಾಶಕ ಸಿಂಪಡಿಸಿದ್ದು, ಆ ಬೆಳೆಯನ್ನು ತಿಂದ ಪರಿಣಾಮ ಆನೆಗಳು ಸಾವನ್ನಪ್ಪಿರುವ ಸಾಧ್ಯತೆ ಇದ್ದಿರುವುದಾಗಿ ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಆನೆಗಳ ಸಾವಿಗೆ ಸಂಬಂಧಪಟ್ಟಂತೆ ದೆಹಲಿ ಮೂಲದ ವನ್ಯಜೀವಿ ಅಪರಾಧ ನಿಯಂತ್ರಣ ದಳ ತನಿಖೆ ನಡೆಸಲು ಸಮಿತಿಯನ್ನು ರಚಿಸಿದ್ದು, ಅದರ ಜೊತೆಗೆ ರಾಜ್ಯ ಸರ್ಕಾರ ಕೂಡಾ ತನಿಖೆಗೆ ಆದೇಶ ನೀಡಿದೆ.
ಘಟನಾ ಸ್ಥಳಕ್ಕೆ ನ್ಯಾಶನಲ್ ಟೈಗರ್ ಕನ್ಸರ್ ವೇಷನ್ ಅಥಾರಿಟಿಯ ಸೆಂಟ್ರಲ್ ವಲಯದ ಅಸಿಸ್ಟೆಂಟ್ ಇನ್ಸ್ ಪೆಕ್ಟರ್ ಜನರಲ್ ನಂದಕಿಶೋರ್ ಕಾಳೆ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ವರದಿ ತಿಳಿಸಿದೆ.
Pariksha Pe Charcha: ಸಾರ್ಟ್ಫೋನ್ಗಿಂತಲೂ ನೀವು ಸಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
You seem to have an Ad Blocker on.
To continue reading, please turn it off or whitelist Udayavani.