Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 


Team Udayavani, Nov 5, 2024, 2:12 PM IST

9

ಬೆಂಗಳೂರು: ಈಗಾಗಲೇ ಸಚಿವ ಸಂಪುಟದ ಒಪ್ಪಿಗೆ ಪಡೆದಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಹತ್ವಾಕಾಂಕ್ಷೆಯ ಬೆಂಗಳೂರು ಸುರಂಗ ರಸ್ತೆ ಕಾಮಗಾರಿ ವೇಗ ಪಡೆದುಕೊಳ್ಳುವುದಕ್ಕೆ “ಭಾರತ-ಚೀನಾ’ ದ್ವಿಪಕ್ಷೀಯ ಸಂಬಂಧದ ಸಮಸ್ಯೆ ಎದುರಾಗಿದೆ. ಉಭಯ ರಾಷ್ಟ್ರಗಳ ನಡುವಿನ ವ್ಯಾಪಾರಿ ಬಾಂಧವ್ಯ ತೆರೆದುಕೊಳ್ಳುವುದನ್ನು ರಾಜ್ಯ ಸರ್ಕಾರ ಈಗ ಎದುರು ನೋಡುತ್ತಿದೆ.

ಸರ್ಕಾರದ ಉನ್ನತ ಮೂಲಗಳು ಈ ವಿಚಾರವನ್ನು ಖಚಿತಪಡಿಸಿವೆ. ಮೊದಲ ಹಂತದಲ್ಲಿ ಹೆಬ್ಟಾಳದಿಂದ ಸಿಲ್ಕ್ ಬೋರ್ಡ್‌ವರೆಗೆ ನಾಲ್ಕು ಟ್ರ್ಯಾಕ್‌ ಸುರಂಗ ಮಾರ್ಗ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಕಳೆದ ಜುಲೈ ತಿಂಗಳಲ್ಲಿಯೇ ಅನುಮತಿ ನೀಡಿದೆ. ಒಟ್ಟು 6 ಹಂತದ ಯೋಜನೆಗೆ ಈಗಾಗಲೇ “ಬ್ಲೂ ಪ್ರಿಂಟ್‌ ‘ ಹಾಗೂ ಮಾರ್ಗಗಳನ್ನೂ ಗುರುತಿಸಲಾಗಿದೆ.

ಆದರೆ, ಈ ಕಾಮಗಾರಿ ವೇಗ ಪಡೆಯುವುದಕ್ಕೆ ಚೀನಾ ನಿರ್ಮಿತ ಬೋರಿಂಗ್‌ ಯಂತ್ರದ ಅಗತ್ಯ ವಿದೆ. ನಮ್ಮ ಮೆಟ್ರೋ ನಿರ್ಮಾಣಕ್ಕೆ ಆರಂಭದಲ್ಲಿ ಚೀನಾ ನಿರ್ಮಿತ ಯಂತ್ರೋಪಕರಣಗಳನ್ನೇ ಬಳಸಲಾಗಿತ್ತು. ಆದರೆ, ಕಳೆದ ಎರಡು ವರ್ಷದಿಂದ ಎರಡು ರಾಷ್ಟ್ರಗಳ ಮಧ್ಯೆ ವ್ಯಾಪಾರ ವಹಿವಾಟು ಕ್ಷೀಣಿಸಿದೆ. ಹೀಗಾಗಿ ಬೋರಿಂಗ್‌ ಯಂತ್ರಗಳ ಆಮದು ಸದ್ಯಕ್ಕೆ ಸಾಧ್ಯವಿಲ್ಲ.

ಹೀಗಾಗಿ ಸುರಂಗ ಮಾರ್ಗ ಕಾಮಗಾರಿ ಶೀಘ್ರ ಪ್ರಾರಂಭವಾಗುವುದಕ್ಕೆ ಈಗ ಭಾರತ-ಚೀನಾ ಬಾಂಧವ್ಯ ವೃದ್ಧಿ ತೀರಾ ಮುಖ್ಯವಾಗಿದೆ. ಪ್ರಧಾನಿ ನರೇಂದ್ರ ಅವರು ಇತ್ತೀಚೆಗೆ ಬ್ರಿಕ್ಸ್‌ ಸಮ್ಮೇಳನದ ನೇಪಥ್ಯದಲ್ಲಿ ಚೀನಾ ಅಧ್ಯಕ್ಷ ಷಿ ಜಿಂಪಿಂಗ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇದು ವ್ಯವಹಾರಿಕ ಸಂಬಂಧ ಜಿಗಿತುಕೊಳ್ಳುವುದರ ಮುನ್ಸೂಚನೆ ಎಂದು ಭಾವಿಸಲಾಗಿದೆ. ಎಷ್ಟು ಬೇಗ ಕೇಂದ್ರ ಸರ್ಕಾರ ನಿರ್ಬಂಧ ಸಡಿಲಗೊಳಿ ಸುತ್ತದೆಯೋ, ಅಷ್ಟು ಬೇಗ ಸುರಂಗ ಮಾರ್ಗ ಕಾಮಗಾರಿ ವೇಗ ಪಡೆದುಕೊಳ್ಳುತ್ತದೆ ಎಂದು ವ್ಯಾಖ್ಯಾನಿಸಲಾಗಿದೆ.

ಈ ಮಾರ್ಗದಲ್ಲಿ ಒಟ್ಟು ನಾಲ್ಕು ಮಾರ್ಗಗಳು ಇರಲಿದ್ದು, ಮೂರು ಮಾತ್ರ ವಾಹನ ಓಡಾಟಕ್ಕೆ ತೆರೆದಿರುತ್ತದೆ. ಒಂದು ಮಾರ್ಗವನ್ನು ಮುಕ್ತವಾಗಿಡಲಾಗುತ್ತದೆ. ಭೂ ಸ್ವಾಧೀನ ಹಾಗೂ ಪರಿಹಾರ ಪ್ರಮಾಣ ಕಡಿಮೆ ಇರುವುದರಿಂದ ಕಾಮಗಾರಿ ಪ್ರಾರಂಭಕ್ಕೆ ವಿಳಂಭವಾಗುವುದಿಲ್ಲ ಎಂಬುದು ಬಿಬಿಎಂಪಿಯ ಲೆಕ್ಕಾಚಾರ.

ವಿಧಾನಸೌಧ ಸುತ್ತಲಿನ 1 ಕಿ.ಮೀ. ಪ್ರದೇಶದೊಳಗೆ ಸುರಂಗ ಮಾರ್ಗದ ಯಾವುದೇ ಪ್ರವೇಶದ್ವಾರ ಇರದಂತೆ ಸೂಚನೆ ನೀಡಲಾಗಿದೆ. ಈ ಮಾರ್ಗದಲ್ಲಿ ಪ್ರಾರಂಭವಾಗುವ ರಸ್ತೆಯ ಪ್ರವೇಶ ಹಾಗೂ ನಿರ್ಗಮನ ದ್ವಾರಗಳು ಚಿನ್ನಸ್ವಾಮಿ ಸ್ಟೇಡಿಯಂ ಹಾಗೂ ರೇಸ್‌ಕೋರ್ಸ್‌ ಬಳಿ ಇರಲಿವೆ ಎಂದು ಮೂಲಗಳು ತಿಳಿಸಿವೆ.

 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.